5:05 AM Tuesday11 - November 2025
ಬ್ರೇಕಿಂಗ್ ನ್ಯೂಸ್
ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಇತ್ತೀಚಿನ ಸುದ್ದಿ

ಸಂಸದ ಸ್ಥಾನದಿಂದ ಪ್ರಜ್ವಲ್​ ರೇವಣ್ಣ ಅನರ್ಹ: ತಾತ ದೇವೇಗೌಡರ ಜೊತೆ ಚರ್ಚಿಸಿ ಸುಪ್ರೀಂಕೋರ್ಟ್​ ಗೆ ಅರ್ಜಿ

02/09/2023, 19:57

ಹಾಸನ(reporterkarnataka.com): ಚುನಾವಣಾ ಅಕ್ರಮ ಆರೋಪದ ಮೇಲೆ ಸಂಸದ ಸ್ಥಾನದಿಂದ ಅನರ್ಹಗೊಂಡ ಜೆಡಿಎಸ್ ನ ಪ್ರಜ್ವಲ್‌ ರೇವಣ್ಣ ಅವರು ತಾತ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ತಂದೆ, ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರೊಂದಿಗೆ ಚರ್ಚಿಸಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ಹೈಕೋರ್ಟ್ ಪ್ರಜ್ವಲ್ ಅವರನ್ನು ಸಂಸತ್ ಸ್ಥಾನದಿಂದ ಅನರ್ಹ ಗೊಳಿಸಿ, ಅವರು 6 ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂದು ಆದೇಶ ನೀಡಿತ್ತು.
ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಲು ಪ್ರಜ್ವಲ್‌ ರೇವಣ್ಣ ತಯಾರಿ ನಡೆಸಿದ್ದಾರೆ.
ಸೋಮವಾರವೇ ಸುಪ್ರೀಂಕೋರ್ಟ್​ ಗೆ ಅರ್ಜಿ ಸಲ್ಲಿಸಲು ಪ್ರಜ್ವಲ್‌ ರೇವಣ್ಣ ಮುಂದಾಗಿದ್ದಾರೆ. ತಾತ ಮಾಜಿ ಪ್ರಧಾನಿ ದೇವೇಗೌಡರು, ತಂದೆ ಮಾಜಿ ಸಚಿವ ರೇವಣ್ಣ ಜೊತೆ ಈ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಇಂದು ಹೊಳೆನರಸೀಪುರದ ದೇವೇಶ್ವರ ಹಾಗೂ ಮಾವಿನಕೆರೆ ರಂಗನಾಥ ಸ್ವಾಮಿ ದೇವಾಲಯದಲ್ಲಿ ನಡೆಯಲಿರುವ ಶ್ರಾವಣ ಮಾಸದ ಪೂಜೆಯಲ್ಲಿ ಭಾಗಿಯಾಗಲು ಮಾಜಿ ಪ್ರಧಾನಿ ದೇವೇಗೌಡರು ಅವರು ನಿನ್ನೆಯೇ ಹುಟ್ಟೂರಿಗೆ ಆಗಮಿಸಿದ್ದಾರೆ. ಸದ್ಯ ಇಂದು ಪೂಜೆ ಬಳಿಕ ಕೋರ್ಟ್ ತೀರ್ಪಿನ ಬಗ್ಗೆ ಪ್ರಜ್ವಲ್ ಹಾಗೂ ಕುಟುಂಬಸ್ಥರು ಚರ್ಚೆ ನಡೆಸಲಿದ್ದಾರೆ. ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿ ತೀರ್ಪಿಗೆ ತಡೆಯಾಜ್ಞೆ ತರುವ ಬಗ್ಗೆ ಚರ್ಚಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು