9:18 AM Sunday29 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಸಂಸದ ತೇಜಸ್ವಿ ಸೂರ್ಯ ಫ್ಲೈಟ್ ನ ಎಮರ್ಜೆನ್ಸಿ ಡೋರ್ ಓಪನ್ ಮಾಡಿಲ್ಲ: ಅಣ್ಣಾಮಲೈ ಸಮರ್ಥನೆ

19/01/2023, 18:24

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಅದು ಎಟಿಆರ್ ಫ್ಲೈಟ್. ಎಮರ್ಜೆನ್ಸಿ ಡೋರ್ ಎದುರು ಇರುತ್ತದೆ.
ಸಂಸದ ತೇಜಸ್ವಿ ಸೂರ್ಯ ಅವರು ಎಮರ್ಜೆನ್ಸಿ ಡೋರ್ ಸಮೀಪದ ಸೀಟಿನಲ್ಲಿ ಕೂತಿದ್ದರು. ಅವರು ಬಾಗಿಲ ಬಳಿ ಕೈ ಇಟ್ಟಿದ್ದಾರೆಯೇ ಹೊರತು ಫ್ಲೈಟ್ ಡೋರ್ ಓಪನ್ ಮಾಡಿಲ್ಲ ಎಂದು ತಮಿಳುನಡು
ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಹೇಳಿದರು.

ಚಿಕ್ಕಮಗಳೂರಿನಲ್ಲಿ ಗುರುವಾರ ಮಾಧ್ಯಮ ಜತೆ ಮಾತನಾಡಿದ ಅವರು, ಫ್ಲೈಟ್ ಡೋರ್ ಓಪನ್ ವಿಚಾರದಲ್ಲಿ ತೇಜಸ್ವಿ ಸೂರ್ಯ ನಡೆಯನ್ನ ಸಮರ್ಥಿಸಿಕೊಂಡರು.

ತೇಜಸ್ವಿ ಸೂರ್ಯ ಡೋರ್ ಓಪನ್ ಮಾಡಿಲ್ಲ, ಡೋರನ್ನು ರೊಟೇಟ್ ಮಾಡಿ ಓಪನ್ ಮಾಡ್ಬೇಕು. ಸಂಸದ, ಬುದ್ಧಿವಂತ, ಜವಾಬ್ದಾರಿ ಸ್ಥಾನದಲ್ಲಿರುವ ಸೂರ್ಯ ಅವರು ಡೋರ್ ಓಫನ್ ಮಾಡಿಲ್ಲ.
ಅವರು ಕೂತಿದ್ದ ಎಮರ್ಜೆನ್ಸ್ ಎಕ್ಸಿಟ್ ಸೀಟಿನಲ್ಲಿ ಹ್ಯಾಂಡ್ ರೆಸ್ಟ್ ಇರಲ್ಲ. ಅಲ್ಲಿ ಎಕ್ಸಿಟ್ ಡೋರ್‍ನಲ್ಲಿ ಬೀಡಿಂಗ್ ಸ್ವಲ್ಪ ಓಪನ್ ಇತ್ತು, ಅದನ್ನ ಏರ್ ಹಾಸ್ಟೆಸ್ ಗಮನ ತರಲಾಯಿತು. ಪೈಲೆಟ್ ಬಂದು ಡಿಬೋರ್ಡಿಂಗ್ ಮಾಡಿ, ಸರಿಯಾಗಿ ಫಿಟ್ ಮಾಡಿದ್ರು, ಅಲ್ಲಿ ತೇಜಸ್ವಿ ಇನ್ಸಟೆಂಟ್ ರಿಪೋರ್ಟ್ ಕೊಟ್ರು. ತೇಜಸ್ವಿ ಸೂರ್ಯ ಡೋರ್‍ನ ಪುಲ್ ಮಾಡಿಲ್ಲ, ತೇಜಸ್ವಿ ಸೂರ್ಯ ಇತರೇ ಪ್ಯಾಸೆಂಜರ್‍ಗೆ ಕ್ಷಮೆ ಕೋರಿದ್ದಾರೆ ಎಂದರು.
ಇಂಡಿಗೋ ಅವರೇ ಕ್ಲಾರಿಫಿಕೇಶನ್ ಮಾಡಿ, ಇನ್ಸಟೆಂಟ್ ರಿಪೋರ್ಟ್ ಬಿಡುಗಡೆ ಮಾಡಿದೆ. ಕರ್ನಾಟಕ ಕಾಂಗ್ರೆಸ್‍ಗೆ ಮಾತನಾಡಲು ಬೇರೆ ವಿಷಯ ಇಲ್ಲ, ಇಂತಹಾ ವಿಷಯವನ್ನ ಮಾತನಾಡ್ತಿದ್ದಾರೆ ಎಂದು
ಅಣ್ಣಾಮಲೈ ಟೀಕಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು