11:02 PM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಸಂಸದ ತೇಜಸ್ವಿ ಸೂರ್ಯ ಫ್ಲೈಟ್ ನ ಎಮರ್ಜೆನ್ಸಿ ಡೋರ್ ಓಪನ್ ಮಾಡಿಲ್ಲ: ಅಣ್ಣಾಮಲೈ ಸಮರ್ಥನೆ

19/01/2023, 18:24

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಅದು ಎಟಿಆರ್ ಫ್ಲೈಟ್. ಎಮರ್ಜೆನ್ಸಿ ಡೋರ್ ಎದುರು ಇರುತ್ತದೆ.
ಸಂಸದ ತೇಜಸ್ವಿ ಸೂರ್ಯ ಅವರು ಎಮರ್ಜೆನ್ಸಿ ಡೋರ್ ಸಮೀಪದ ಸೀಟಿನಲ್ಲಿ ಕೂತಿದ್ದರು. ಅವರು ಬಾಗಿಲ ಬಳಿ ಕೈ ಇಟ್ಟಿದ್ದಾರೆಯೇ ಹೊರತು ಫ್ಲೈಟ್ ಡೋರ್ ಓಪನ್ ಮಾಡಿಲ್ಲ ಎಂದು ತಮಿಳುನಡು
ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಹೇಳಿದರು.

ಚಿಕ್ಕಮಗಳೂರಿನಲ್ಲಿ ಗುರುವಾರ ಮಾಧ್ಯಮ ಜತೆ ಮಾತನಾಡಿದ ಅವರು, ಫ್ಲೈಟ್ ಡೋರ್ ಓಪನ್ ವಿಚಾರದಲ್ಲಿ ತೇಜಸ್ವಿ ಸೂರ್ಯ ನಡೆಯನ್ನ ಸಮರ್ಥಿಸಿಕೊಂಡರು.

ತೇಜಸ್ವಿ ಸೂರ್ಯ ಡೋರ್ ಓಪನ್ ಮಾಡಿಲ್ಲ, ಡೋರನ್ನು ರೊಟೇಟ್ ಮಾಡಿ ಓಪನ್ ಮಾಡ್ಬೇಕು. ಸಂಸದ, ಬುದ್ಧಿವಂತ, ಜವಾಬ್ದಾರಿ ಸ್ಥಾನದಲ್ಲಿರುವ ಸೂರ್ಯ ಅವರು ಡೋರ್ ಓಫನ್ ಮಾಡಿಲ್ಲ.
ಅವರು ಕೂತಿದ್ದ ಎಮರ್ಜೆನ್ಸ್ ಎಕ್ಸಿಟ್ ಸೀಟಿನಲ್ಲಿ ಹ್ಯಾಂಡ್ ರೆಸ್ಟ್ ಇರಲ್ಲ. ಅಲ್ಲಿ ಎಕ್ಸಿಟ್ ಡೋರ್‍ನಲ್ಲಿ ಬೀಡಿಂಗ್ ಸ್ವಲ್ಪ ಓಪನ್ ಇತ್ತು, ಅದನ್ನ ಏರ್ ಹಾಸ್ಟೆಸ್ ಗಮನ ತರಲಾಯಿತು. ಪೈಲೆಟ್ ಬಂದು ಡಿಬೋರ್ಡಿಂಗ್ ಮಾಡಿ, ಸರಿಯಾಗಿ ಫಿಟ್ ಮಾಡಿದ್ರು, ಅಲ್ಲಿ ತೇಜಸ್ವಿ ಇನ್ಸಟೆಂಟ್ ರಿಪೋರ್ಟ್ ಕೊಟ್ರು. ತೇಜಸ್ವಿ ಸೂರ್ಯ ಡೋರ್‍ನ ಪುಲ್ ಮಾಡಿಲ್ಲ, ತೇಜಸ್ವಿ ಸೂರ್ಯ ಇತರೇ ಪ್ಯಾಸೆಂಜರ್‍ಗೆ ಕ್ಷಮೆ ಕೋರಿದ್ದಾರೆ ಎಂದರು.
ಇಂಡಿಗೋ ಅವರೇ ಕ್ಲಾರಿಫಿಕೇಶನ್ ಮಾಡಿ, ಇನ್ಸಟೆಂಟ್ ರಿಪೋರ್ಟ್ ಬಿಡುಗಡೆ ಮಾಡಿದೆ. ಕರ್ನಾಟಕ ಕಾಂಗ್ರೆಸ್‍ಗೆ ಮಾತನಾಡಲು ಬೇರೆ ವಿಷಯ ಇಲ್ಲ, ಇಂತಹಾ ವಿಷಯವನ್ನ ಮಾತನಾಡ್ತಿದ್ದಾರೆ ಎಂದು
ಅಣ್ಣಾಮಲೈ ಟೀಕಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು