3:48 PM Monday23 - March 2026
ಬ್ರೇಕಿಂಗ್ ನ್ಯೂಸ್
ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್

ಇತ್ತೀಚಿನ ಸುದ್ದಿ

ಸಂಸದೆ ಸುಮಲತಾ ಸುತ್ತ ಗೂಂಡಾ, ಫ್ರಾಡ್ ಗಳು ತುಂಬಿದ್ದಾರೆ: ದಳ ಶಾಸಕ ರವೀಂದ್ರ ಶ್ರೀಕಂಠಯ್ಯ ಆರೋಪ

19/08/2021, 13:12

ಮಂಡ್ಯ(reporterkarnataka.com): ಮಂಡ್ಯ ಸಂಸದೆ ಸುಮಲತಾ ಅವರು ತನ್ನ ಸುತ್ತಮುತ್ತ ಗೂಂಡಾ ಹಾಗೂ ಫ್ರಾಡ್ ಗಳನ್ನು ಇಟ್ಟುಕೊಂಡಿದ್ದಾರೆ ಎಂದು ಮಂಡ್ಯ ಶಾಸಕ, ಜನತಾ ದಳದ ರವೀಂದ್ರ ಶ್ರೀಕಂಠಯ್ಯ ಆರೋಪಿಸಿದ್ದಾರೆ.

ಸುಮಲತಾ ಅವರ ಅಟೆಂಡರ್ ಚೇತನ್ ಓರ್ವ ಫ್ರಾಡ್ ಆಗಿದ್ದಾನೆ ಎಂದು ಮಾಧ್ಯಮ ಜತೆ ಮಾತನಾಡಿದ ಶಾಸಕರು ಆರೋಪಿಸುವ ಮೂಲಕ ಸಮಲತಾ ಹಾಗೂ ದಳಪತಿಗಳ ಜಗಳ ಮತ್ತೆ ಸ್ಫೋಟಗೊಂಡಿದೆ.

ಸಂಸದೆ ಸುಮಲತಾ ಅವರ ಆಪ್ತ ಕಾರ್ಯದರ್ಶಿ ಶ್ರೀನಿವಾಸ ಭಟ್ ಎಂಬವರು ಮೆಡಿಕಲ್ ಸೀಟು ಕೊಡಿಸುವುದಾಗಿ ಹೇಳಿ ವಂಚಿಸಿದ ಆರೋಪ ಎದುರಿಸುತ್ತಿದ್ದಾರೆ. ಸಂಸದೆಯ ಇ ಮೇಲ್ ಬಳಸಿ ಕೆಆರ್ ಎಸ್ ಡ್ಯಾಮ್ ಗೆ ಸಂಬಂಧಿಸಿದ ದಾಖಲೆಗಳನ್ನು ತರಿಸಿಕೊಂಡಿದ್ದಾರೆ. ಸಂಸದೆ ಲೆಟರ್ ಹೆಡ್ ಬಳಸಿ ಎಂಜಿನಿಯರ್ ಗಳನ್ನು ಬೆದರಿಸುತ್ತಿದ್ದಾರೆ. ಅವರ ವಿರುದ್ಧ ಈಗಾಗಲೇ ದೂರು ನೀಡಲಾಗಿದೆ. ಶ್ರೀನಿವಾಸ ಭಟ್ ಅವರನ್ನು ತಕ್ಷಣ ಬಂಧಿಸಬೇಕು. ಅವರ ಪ್ರತಿಯೊಂದು ಫೋನ್ ಡಿಟೈಲ್ಸ್ ತೆಗೆದು ತನಿಖೆ ನಡೆಸಬೇಕು.

ಲೆಟರ್ ಹೆಡ್ ದುರುಪಯೋಗ ಕುರಿತು ಕೂಡ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು