2:12 PM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಸಂಸದೆ ಸುಮಲತಾ ಸುತ್ತ ಗೂಂಡಾ, ಫ್ರಾಡ್ ಗಳು ತುಂಬಿದ್ದಾರೆ: ದಳ ಶಾಸಕ ರವೀಂದ್ರ ಶ್ರೀಕಂಠಯ್ಯ ಆರೋಪ

19/08/2021, 13:12

ಮಂಡ್ಯ(reporterkarnataka.com): ಮಂಡ್ಯ ಸಂಸದೆ ಸುಮಲತಾ ಅವರು ತನ್ನ ಸುತ್ತಮುತ್ತ ಗೂಂಡಾ ಹಾಗೂ ಫ್ರಾಡ್ ಗಳನ್ನು ಇಟ್ಟುಕೊಂಡಿದ್ದಾರೆ ಎಂದು ಮಂಡ್ಯ ಶಾಸಕ, ಜನತಾ ದಳದ ರವೀಂದ್ರ ಶ್ರೀಕಂಠಯ್ಯ ಆರೋಪಿಸಿದ್ದಾರೆ.

ಸುಮಲತಾ ಅವರ ಅಟೆಂಡರ್ ಚೇತನ್ ಓರ್ವ ಫ್ರಾಡ್ ಆಗಿದ್ದಾನೆ ಎಂದು ಮಾಧ್ಯಮ ಜತೆ ಮಾತನಾಡಿದ ಶಾಸಕರು ಆರೋಪಿಸುವ ಮೂಲಕ ಸಮಲತಾ ಹಾಗೂ ದಳಪತಿಗಳ ಜಗಳ ಮತ್ತೆ ಸ್ಫೋಟಗೊಂಡಿದೆ.

ಸಂಸದೆ ಸುಮಲತಾ ಅವರ ಆಪ್ತ ಕಾರ್ಯದರ್ಶಿ ಶ್ರೀನಿವಾಸ ಭಟ್ ಎಂಬವರು ಮೆಡಿಕಲ್ ಸೀಟು ಕೊಡಿಸುವುದಾಗಿ ಹೇಳಿ ವಂಚಿಸಿದ ಆರೋಪ ಎದುರಿಸುತ್ತಿದ್ದಾರೆ. ಸಂಸದೆಯ ಇ ಮೇಲ್ ಬಳಸಿ ಕೆಆರ್ ಎಸ್ ಡ್ಯಾಮ್ ಗೆ ಸಂಬಂಧಿಸಿದ ದಾಖಲೆಗಳನ್ನು ತರಿಸಿಕೊಂಡಿದ್ದಾರೆ. ಸಂಸದೆ ಲೆಟರ್ ಹೆಡ್ ಬಳಸಿ ಎಂಜಿನಿಯರ್ ಗಳನ್ನು ಬೆದರಿಸುತ್ತಿದ್ದಾರೆ. ಅವರ ವಿರುದ್ಧ ಈಗಾಗಲೇ ದೂರು ನೀಡಲಾಗಿದೆ. ಶ್ರೀನಿವಾಸ ಭಟ್ ಅವರನ್ನು ತಕ್ಷಣ ಬಂಧಿಸಬೇಕು. ಅವರ ಪ್ರತಿಯೊಂದು ಫೋನ್ ಡಿಟೈಲ್ಸ್ ತೆಗೆದು ತನಿಖೆ ನಡೆಸಬೇಕು.

ಲೆಟರ್ ಹೆಡ್ ದುರುಪಯೋಗ ಕುರಿತು ಕೂಡ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು