12:01 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

ಸಂಸತ್ ಸದಸ್ಯತ್ವ ಅನರ್ಹತೆ: ಸರಕಾರಿ ಬಂಗ್ಲೆ ತೆರವುಗೊಳಿಸಲು ಕಾಂಗ್ರೆಸ್ ನಾಯಕ ರಾಹುಲ್ ಗೆ ನೋಟಿಸ್

27/03/2023, 22:10

ಹೊಸದಿಲ್ಲಿ(reporterkarnataka.com): ಸಂಸತ್ ಸದಸ್ಯತ್ವ ಅನರ್ಹಗೊಂಡ ಹಿನ್ನೆಲೆಯಲ್ಲಿ ಸರಕಾರಿ ಬಂಗ್ಲೆಯನ್ನು ತೆರವುಗೊಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ನೋಟಿಸ್ ನೀಡಲಾಗಿದೆ.
ರಾಹುಲ್‌ ಗಾಂಧಿ ಅವರು 2005ರಿಂದ ವಾಸ್ತವ್ಯ ಹೊಂದಿರುವ ತುಘಲಕ್‌ ಲೇನ್‌ ಬಂಗಲೆಯನ್ನು ತೆರವು ಮಾಡುವಂತೆ ತಿಳಿಸಲಾಗಿದೆ. ಎರಡು ವರ್ಷಗಳ ಜೈಲು ಶಿಕ್ಷೆಯ ನಂತರ ಸಂಸತ್ತಿನಿಂದ ಅನರ್ಹಗೊಳಿಸಿದ ಎರಡು ದಿನಗಳ ನಂತರ ಲೋಕಸಭೆಯ ವಸತಿ ಸಮಿತಿಯಿಂದ ತೆರವು ನೋಟಿಸ್ ಬಂದಿದೆ. ಗುಜರಾತ್ ನ್ಯಾಯಾಲಯದ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವುದಾಗಿ ಕಾಂಗ್ರೆಸ್ ಹೇಳಿಕೆಯ ಮಧ್ಯೆ ನೋಟಿಸ್ ನೀಡಲಾಗಿದೆ. ಮೇಲ್ಮನವಿ ಸಲ್ಲಿಸಲು 30 ದಿನಗಳ ಕಾಲಾವಕಾಶ ನೀಡಲಾಗಿದೆ. ಬಿಜೆಪಿಯಿಂದ ಇದನ್ನು ನಿರೀಕ್ಷಿಸಲಾಗಿತ್ತು ಎಂದು ಕಾಂಗ್ರೆಸ್ ಸಂಸದ ಮತ್ತು ಅದರ ರಾಷ್ಟ್ರೀಯ ವಕ್ತಾರ ಡಾ.ನಾಸೀರ್ ಹುಸೇನ್ ಹೇಳಿದ್ದಾರೆ.
ಅವರು ಭಿನ್ನಾಭಿಪ್ರಾಯದ ಧ್ವನಿಗಳನ್ನು ಮೌನಗೊಳಿಸಲು ಎಲ್ಲಾ ರೀತಿಯ ತಂತ್ರಗಳನ್ನು ಬಳಸುತ್ತಾರೆ. ಅವರು ನಮ್ಮ ಪ್ರಮುಖ ನಾಯಕರೊಬ್ಬರನ್ನು ವಂಚಕ ವಿಧಾನಗಳಿಂದ ಸಂಸತ್ತಿನಿಂದ ಹೊರಹಾಕಿದ್ದಾರೆ ಮತ್ತು ಇದು ಹೊಸದೇನಲ್ಲ” ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು