2:41 PM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಸಂಸ್ಕೃತಿ – ಪರಂಪರೆಯ ಪ್ರತೀಕ: ವೈಭವದ ಮಂಗಳೂರು ರಥೋತ್ಸವ ಸಂಪನ್ನ

08/02/2022, 13:04

ಚಿತ್ರ : ಮಂಜು ನೀರೇಶ್ವಾಲ್ಯ
ಮಂಗಳೂರು(reporterkarnataka.com):
ಶ್ರೀ ಮಂಗಳಾದೇವಿಯ ನೆಲೆ ಬೀಡಾದ ಮಂಗಳೂರು ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಪಾಲಿಗೂ ಸಾಧನೆಯ ಕ್ಷೇತ್ರ. ಇಲ್ಲಿನ ರಥಬೀದಿಯ ಶ್ರೀ ವೆಂಕಟರಮಣ ದೇವಳ ಸಮಾಜದ ಧರ್ಮ ಪೀಠಗಳಲ್ಲೊಂದಾದ ಶ್ರೀ ಕಾಶೀಮಠ ಸಂಸ್ಥಾನ್ ವಾರಾಣಸಿಯ ಒಂದು ಕಣ್ಣಿನಂತೆ  ಮತ್ತು ದೇಶದ ಪ್ರಮುಖ ದೇವಾಲಯ ಎಂದು ಬಿಂಬಿತವಾಗಿದೆ ಕಾಲ ಉರುಳಿದ ಪ್ರಭಾವ ಇಲ್ಲಿನ ವಾರ್ಷಿಕ ರಥೋತ್ಸವ ಒಂದು. ಸಮಗ್ರ  ಭಜಕ ವೃಂದದವರಿಗೆ ಅವರ್ಣನೀಯ ಪುಳಕೋತ್ಸವ, ಧನ್ಯತೆಯಿಂದ ಬೀಗುವ  ಸಂದರ್ಭ.

ಪ್ರತಿ ಮಾಘ ಮಾಸದ ಶುದ್ಧ ತದಿಗೆಯಂದು ಆರಂಭವಾಗಿ ಅಷ್ಟಮಿಯಂದು ಮುಕ್ತಾಯಗೊಳ್ಳುವ ರಥೋತ್ಸವ ಕಾರ್ಯಕ್ರಮದಲ್ಲಿ ರಥಸಪ್ತಮಿಯ ಶುಭದಿನ ದಂದು  ಆ ಬ್ರಹ್ಮರಥೋತ್ಸವ ನಡೆಯುವುದು ವಾಡಿಕೆ. ಮಂಗಳೂರು ರಥ ಎಂದು ಅಭಿದಾನಗೈದಿರುವ ಶ್ರೀ ರಥೋತ್ಸವ ಧಾರ್ಮಿಕ ವಿಧಿ ಆಚರಣೆಗೆ ಮಾತ್ರ ಸೀಮಿತಗೊಳ್ಳದ ಲೌಕಿಕ-ಪಾರಲೌಕಿಕ ಸಾಮಾಜಿಕ, ಸೌಹಾರ್ದತೆಗಳನ್ನೊಳಗೊಂಡು ಸಂಸ್ಕೃತಿ – ಪರಂಪರೆಯ ಕೊಂಡಿಯಾಗಿ ಅನುಸೂತ್ರವಾಗಿ ಮುಂದುವರಿದು ಭಾವೀ ಪೀಳಿಗೆಗೆ ವರ್ಗಾಯಿಸುವ ಸಂಪ್ರದಾಯಗಳ ಹಿನ್ನೆಲೆಯ ಮಹಾಪರ್ವ ಮತ್ತು ದಕ್ಷಿಣ ಭಾರತದ ಮಹೋತ್ಸವಗಳ ಪೈಕಿ ಒಂದು ಪ್ರಮುಖ ಮಹೋತ್ಸವವಾಗಿ ರೂಪುಗೊಂಡಿದೆ . ಶ್ರೀ ಕಾಶಿ ಮಠದ ಪೀಠಾಧಿಪತಿ ಶ್ರೀಮದ್ ಸಂಯಮೀಂದ್ರತೀರ್ಥ ಸ್ವಾಮೀಜಿಗಳವರ ಈ ಬಾರಿಯ ಉಪಸ್ಥಿತಿ ರಥೋತ್ಸವವನ್ನು ಚಂದಗಾಣಿಸಲು ಸಂಭ್ರಮಿಸಲು ಕಾರಣವಾಗುತ್ತದೆ.

ಈ ಬಾರಿ 201ನೇ ವರ್ಷಾಚರಣೆಯಲ್ಲದೆ ನೂತನ ಬ್ರಹ್ಮರಥದಲ್ಲಿ ರಥೋತ್ಸವ ದೇಶ ವಿದೇಶಗಳಿಂದ ಸಹಸ್ರಾರು ಭಜಕರು ಪಾಲ್ಗೊಂಡು ಪುನೀತರಾದರು . ಶ್ರೀ ದೇವಳದ ಮೊಕ್ತೇಸರರಾದ ಸಿ. ಎಲ್. ಶೆಣೈ , ಪ್ರಶಾಂತ್ ರಾವ್ , ರಾಮಚಂದ್ರ ಕಾಮತ್ , ಕೊಡುಗೈ ದಾನಿ ಪಿ . ದಯಾನಂದ ಪೈ , ಮುಂಡ್ಕುರ್ ರಾಮದಾಸ್ ಕಾಮತ್ , ಮಂಗಳೂರು ದಕ್ಷಿಣ ಶಾಸಕ ಡಿ . ವೇದವ್ಯಾಸ್ ಕಾಮತ್ ಉಪಸ್ಥಿತರಿದ್ದರು 

ಇತ್ತೀಚಿನ ಸುದ್ದಿ

ಜಾಹೀರಾತು