12:44 AM Wednesday18 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಸಂಸ್ಕೃತಿ – ಪರಂಪರೆಯ ಪ್ರತೀಕ: ವೈಭವದ ಮಂಗಳೂರು ರಥೋತ್ಸವ ಸಂಪನ್ನ

08/02/2022, 13:04

ಚಿತ್ರ : ಮಂಜು ನೀರೇಶ್ವಾಲ್ಯ
ಮಂಗಳೂರು(reporterkarnataka.com):
ಶ್ರೀ ಮಂಗಳಾದೇವಿಯ ನೆಲೆ ಬೀಡಾದ ಮಂಗಳೂರು ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಪಾಲಿಗೂ ಸಾಧನೆಯ ಕ್ಷೇತ್ರ. ಇಲ್ಲಿನ ರಥಬೀದಿಯ ಶ್ರೀ ವೆಂಕಟರಮಣ ದೇವಳ ಸಮಾಜದ ಧರ್ಮ ಪೀಠಗಳಲ್ಲೊಂದಾದ ಶ್ರೀ ಕಾಶೀಮಠ ಸಂಸ್ಥಾನ್ ವಾರಾಣಸಿಯ ಒಂದು ಕಣ್ಣಿನಂತೆ  ಮತ್ತು ದೇಶದ ಪ್ರಮುಖ ದೇವಾಲಯ ಎಂದು ಬಿಂಬಿತವಾಗಿದೆ ಕಾಲ ಉರುಳಿದ ಪ್ರಭಾವ ಇಲ್ಲಿನ ವಾರ್ಷಿಕ ರಥೋತ್ಸವ ಒಂದು. ಸಮಗ್ರ  ಭಜಕ ವೃಂದದವರಿಗೆ ಅವರ್ಣನೀಯ ಪುಳಕೋತ್ಸವ, ಧನ್ಯತೆಯಿಂದ ಬೀಗುವ  ಸಂದರ್ಭ.

ಪ್ರತಿ ಮಾಘ ಮಾಸದ ಶುದ್ಧ ತದಿಗೆಯಂದು ಆರಂಭವಾಗಿ ಅಷ್ಟಮಿಯಂದು ಮುಕ್ತಾಯಗೊಳ್ಳುವ ರಥೋತ್ಸವ ಕಾರ್ಯಕ್ರಮದಲ್ಲಿ ರಥಸಪ್ತಮಿಯ ಶುಭದಿನ ದಂದು  ಆ ಬ್ರಹ್ಮರಥೋತ್ಸವ ನಡೆಯುವುದು ವಾಡಿಕೆ. ಮಂಗಳೂರು ರಥ ಎಂದು ಅಭಿದಾನಗೈದಿರುವ ಶ್ರೀ ರಥೋತ್ಸವ ಧಾರ್ಮಿಕ ವಿಧಿ ಆಚರಣೆಗೆ ಮಾತ್ರ ಸೀಮಿತಗೊಳ್ಳದ ಲೌಕಿಕ-ಪಾರಲೌಕಿಕ ಸಾಮಾಜಿಕ, ಸೌಹಾರ್ದತೆಗಳನ್ನೊಳಗೊಂಡು ಸಂಸ್ಕೃತಿ – ಪರಂಪರೆಯ ಕೊಂಡಿಯಾಗಿ ಅನುಸೂತ್ರವಾಗಿ ಮುಂದುವರಿದು ಭಾವೀ ಪೀಳಿಗೆಗೆ ವರ್ಗಾಯಿಸುವ ಸಂಪ್ರದಾಯಗಳ ಹಿನ್ನೆಲೆಯ ಮಹಾಪರ್ವ ಮತ್ತು ದಕ್ಷಿಣ ಭಾರತದ ಮಹೋತ್ಸವಗಳ ಪೈಕಿ ಒಂದು ಪ್ರಮುಖ ಮಹೋತ್ಸವವಾಗಿ ರೂಪುಗೊಂಡಿದೆ . ಶ್ರೀ ಕಾಶಿ ಮಠದ ಪೀಠಾಧಿಪತಿ ಶ್ರೀಮದ್ ಸಂಯಮೀಂದ್ರತೀರ್ಥ ಸ್ವಾಮೀಜಿಗಳವರ ಈ ಬಾರಿಯ ಉಪಸ್ಥಿತಿ ರಥೋತ್ಸವವನ್ನು ಚಂದಗಾಣಿಸಲು ಸಂಭ್ರಮಿಸಲು ಕಾರಣವಾಗುತ್ತದೆ.

ಈ ಬಾರಿ 201ನೇ ವರ್ಷಾಚರಣೆಯಲ್ಲದೆ ನೂತನ ಬ್ರಹ್ಮರಥದಲ್ಲಿ ರಥೋತ್ಸವ ದೇಶ ವಿದೇಶಗಳಿಂದ ಸಹಸ್ರಾರು ಭಜಕರು ಪಾಲ್ಗೊಂಡು ಪುನೀತರಾದರು . ಶ್ರೀ ದೇವಳದ ಮೊಕ್ತೇಸರರಾದ ಸಿ. ಎಲ್. ಶೆಣೈ , ಪ್ರಶಾಂತ್ ರಾವ್ , ರಾಮಚಂದ್ರ ಕಾಮತ್ , ಕೊಡುಗೈ ದಾನಿ ಪಿ . ದಯಾನಂದ ಪೈ , ಮುಂಡ್ಕುರ್ ರಾಮದಾಸ್ ಕಾಮತ್ , ಮಂಗಳೂರು ದಕ್ಷಿಣ ಶಾಸಕ ಡಿ . ವೇದವ್ಯಾಸ್ ಕಾಮತ್ ಉಪಸ್ಥಿತರಿದ್ದರು 

ಇತ್ತೀಚಿನ ಸುದ್ದಿ

ಜಾಹೀರಾತು