6:32 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಸಂಸ್ಕೃತಿ – ಪರಂಪರೆಯ ಪ್ರತೀಕ: ವೈಭವದ ಮಂಗಳೂರು ರಥೋತ್ಸವ ಸಂಪನ್ನ

08/02/2022, 13:04

ಚಿತ್ರ : ಮಂಜು ನೀರೇಶ್ವಾಲ್ಯ
ಮಂಗಳೂರು(reporterkarnataka.com):
ಶ್ರೀ ಮಂಗಳಾದೇವಿಯ ನೆಲೆ ಬೀಡಾದ ಮಂಗಳೂರು ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಪಾಲಿಗೂ ಸಾಧನೆಯ ಕ್ಷೇತ್ರ. ಇಲ್ಲಿನ ರಥಬೀದಿಯ ಶ್ರೀ ವೆಂಕಟರಮಣ ದೇವಳ ಸಮಾಜದ ಧರ್ಮ ಪೀಠಗಳಲ್ಲೊಂದಾದ ಶ್ರೀ ಕಾಶೀಮಠ ಸಂಸ್ಥಾನ್ ವಾರಾಣಸಿಯ ಒಂದು ಕಣ್ಣಿನಂತೆ  ಮತ್ತು ದೇಶದ ಪ್ರಮುಖ ದೇವಾಲಯ ಎಂದು ಬಿಂಬಿತವಾಗಿದೆ ಕಾಲ ಉರುಳಿದ ಪ್ರಭಾವ ಇಲ್ಲಿನ ವಾರ್ಷಿಕ ರಥೋತ್ಸವ ಒಂದು. ಸಮಗ್ರ  ಭಜಕ ವೃಂದದವರಿಗೆ ಅವರ್ಣನೀಯ ಪುಳಕೋತ್ಸವ, ಧನ್ಯತೆಯಿಂದ ಬೀಗುವ  ಸಂದರ್ಭ.

ಪ್ರತಿ ಮಾಘ ಮಾಸದ ಶುದ್ಧ ತದಿಗೆಯಂದು ಆರಂಭವಾಗಿ ಅಷ್ಟಮಿಯಂದು ಮುಕ್ತಾಯಗೊಳ್ಳುವ ರಥೋತ್ಸವ ಕಾರ್ಯಕ್ರಮದಲ್ಲಿ ರಥಸಪ್ತಮಿಯ ಶುಭದಿನ ದಂದು  ಆ ಬ್ರಹ್ಮರಥೋತ್ಸವ ನಡೆಯುವುದು ವಾಡಿಕೆ. ಮಂಗಳೂರು ರಥ ಎಂದು ಅಭಿದಾನಗೈದಿರುವ ಶ್ರೀ ರಥೋತ್ಸವ ಧಾರ್ಮಿಕ ವಿಧಿ ಆಚರಣೆಗೆ ಮಾತ್ರ ಸೀಮಿತಗೊಳ್ಳದ ಲೌಕಿಕ-ಪಾರಲೌಕಿಕ ಸಾಮಾಜಿಕ, ಸೌಹಾರ್ದತೆಗಳನ್ನೊಳಗೊಂಡು ಸಂಸ್ಕೃತಿ – ಪರಂಪರೆಯ ಕೊಂಡಿಯಾಗಿ ಅನುಸೂತ್ರವಾಗಿ ಮುಂದುವರಿದು ಭಾವೀ ಪೀಳಿಗೆಗೆ ವರ್ಗಾಯಿಸುವ ಸಂಪ್ರದಾಯಗಳ ಹಿನ್ನೆಲೆಯ ಮಹಾಪರ್ವ ಮತ್ತು ದಕ್ಷಿಣ ಭಾರತದ ಮಹೋತ್ಸವಗಳ ಪೈಕಿ ಒಂದು ಪ್ರಮುಖ ಮಹೋತ್ಸವವಾಗಿ ರೂಪುಗೊಂಡಿದೆ . ಶ್ರೀ ಕಾಶಿ ಮಠದ ಪೀಠಾಧಿಪತಿ ಶ್ರೀಮದ್ ಸಂಯಮೀಂದ್ರತೀರ್ಥ ಸ್ವಾಮೀಜಿಗಳವರ ಈ ಬಾರಿಯ ಉಪಸ್ಥಿತಿ ರಥೋತ್ಸವವನ್ನು ಚಂದಗಾಣಿಸಲು ಸಂಭ್ರಮಿಸಲು ಕಾರಣವಾಗುತ್ತದೆ.

ಈ ಬಾರಿ 201ನೇ ವರ್ಷಾಚರಣೆಯಲ್ಲದೆ ನೂತನ ಬ್ರಹ್ಮರಥದಲ್ಲಿ ರಥೋತ್ಸವ ದೇಶ ವಿದೇಶಗಳಿಂದ ಸಹಸ್ರಾರು ಭಜಕರು ಪಾಲ್ಗೊಂಡು ಪುನೀತರಾದರು . ಶ್ರೀ ದೇವಳದ ಮೊಕ್ತೇಸರರಾದ ಸಿ. ಎಲ್. ಶೆಣೈ , ಪ್ರಶಾಂತ್ ರಾವ್ , ರಾಮಚಂದ್ರ ಕಾಮತ್ , ಕೊಡುಗೈ ದಾನಿ ಪಿ . ದಯಾನಂದ ಪೈ , ಮುಂಡ್ಕುರ್ ರಾಮದಾಸ್ ಕಾಮತ್ , ಮಂಗಳೂರು ದಕ್ಷಿಣ ಶಾಸಕ ಡಿ . ವೇದವ್ಯಾಸ್ ಕಾಮತ್ ಉಪಸ್ಥಿತರಿದ್ದರು 

ಇತ್ತೀಚಿನ ಸುದ್ದಿ

ಜಾಹೀರಾತು