10:00 PM Monday25 - May 2026
ಬ್ರೇಕಿಂಗ್ ನ್ಯೂಸ್
ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:…

ಇತ್ತೀಚಿನ ಸುದ್ದಿ

ನಾಗರಬೆಂಚಿ: ಕನಕಮೂರ್ತಿ ಅನಾವರಣ; ಸಾಮೂಹಿಕ ವಿವಾಹ ವೈಭವ

05/12/2021, 18:26

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 
ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಪಟ್ಟಣದ ನಾಗರಬೆಂಚಿ ಗ್ರಾಮದಲ್ಲಿ ನೂತನ ಕನಕ ಮೂರ್ತಿಯ ಅನಾವರಣ ಮತ್ತು ಸಾಮೂಹಿಕ ವಿವಾಹ, ಧಾರ್ಮಿಕ ಸಭೆ ಕಾರ್ಯಕ್ರಮ ಜರಗಿತು. 

ಮಸ್ಕಿಯ ಷಟಸ್ಥಲ ಬ್ರಹ್ಮ ಹೊರ ರುದ್ರಮುನಿ ಶಿವಾಚಾರ್ಯರು, ಮಸ್ಕಿ ಶಾಸಕ ಬಸವನಗೌಡ ತುರುವಿಹಾಳ, ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಅವರು ಕನಕ ಮೂರ್ತಿ ಪ್ರತಿಷ್ಠಾಪನ ಮಾಡುವುದರ ಜತೆಗೆ ಸಾಮೂಹಿಕ ವಿವಾಹಕ್ಕೆ ಹೊಸ ಜೀವನಕ್ಕೆ ಕಾಲಿಡುತ್ತಿರುವ 11 ಜೋಡಿ ದಂಪತಿಗಳಿಗೆ ಶುಭ ಹಾರೈಸಿದರು.

ವೇದಿಕೆಯನ್ನು ಉದ್ದೇಶಿಸಿ ಮಾತನಾಡಿ ಮಸ್ಕಿಯ ವರ ರುದ್ರಮುನಿ ಶಿವಾಚಾರ್ಯರು, ಸರ್ವಧರ್ಮದವರು ಸೇರಿ ಒಳ್ಳೆಯ ಕಾರ್ಯಕ್ರಮ ಮಾಡುತ್ತಿರುವುದು ಮತ್ತು ಸಾಮೂಹಿಕ ವಿವಾಹ ಕಾರ್ಯಕ್ರಮವು ಅತ್ಯಂತ ಪುಣ್ಯದ ಕೆಲಸ ಎಂದು ಹೇಳಿದರು.

 ಪ್ರತಿಯೊಬ್ಬ ಇಂತಹ ಕಾರ್ಯಕ್ರಮಗಳನ್ನು ಮಾಡುವುದರಿಂದ ಮನಸ್ಸಿಗೆ ಮತ್ತು ಜೀವನ ನೆಮ್ಮದಿ ಸಿಗುತ್ತದೆ. ಇಂತಹ ಕಾರ್ಯಕ್ರಮಗಳು ಮಾಡುವುದರಿಂದ ಪುಣ್ಯದ ಕೆಲಸ ಬರುತ್ತದೆ ಎಂದು ನುಡಿದರು.

ನ್ಯಾಯವಾದಿ ಗುಡಿಹಾಳ ನಿರುಪಾದೆಪ್ಪ, ಮಾಜಿ ಸಂಸದ ಕೆ. ವಿರುಪಾಕ್ಷಪ್ಪ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು