9:57 PM Thursday5 - February 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್…

ಇತ್ತೀಚಿನ ಸುದ್ದಿ

ಸಂಡೂರಲ್ಲಿ ಬಿಜೆಪಿಗೆ ಅವಕಾಶ ಕೊಟ್ಟರೆ ಗಣಿ ಸಂಪತ್ತು ಲೂಟಿ: ಕೆ. ಸಿ. ಕೊಂಡಯ್ಯ ಎಚ್ಚರಿಕೆ

05/11/2024, 12:54

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಸಂಡೂರಲ್ಲಿ ನಡೆಯು ವಿಧಾನ ಸಭಾ ಉಪ ಚುನಾವಣೆಯಲ್ಲಿ ಬಿಜೆಪಿಗೆ ಅವಕಾಶ ಕೊಟ್ಟರೇ ದೌರ್ಜನ್ಯ, ದಬ್ಬಾಳಿಕೆ ನಡೆಯುವ ಸಾಧ್ಯತೆ ಇದೆ. ಸಂಡೂರಿನಲ್ಲಿ‌ನ‌ ಭಾವೈಕ್ಯತೆಗೆ ಧಕ್ಕೆಯಾಗಲಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಕೆ. ಸಿ. ಕೊಂಡಯ್ಯ ಹೇಳಿದರು.
ಬಳ್ಳಾರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2004-2010 ರವರೆಗೆ ಬಳ್ಳಾರಿ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ‌ನಡೆಸಿದವರು, ಗಣಿ ಸಂಪತ್ತನ್ನು ಲೂಟಿ ಮಾಡಿದವರೆಲ್ಲ ಬಿಜೆಪಿ ಅಭ್ಯರ್ಥಿ ಪರ ನಿಂತು ಪ್ರಚಾರ ಮಾಡುತ್ತಿದ್ದಾರೆ. ಅವರ ಉದ್ದೇಶ ಸಂಡೂರು ಮತ ಕ್ಷೇತ್ರ ‌ಅಭಿವೃದ್ದಿ‌‌ ಮಾಡುವುದಾಗಿಲ್ಲ. ಅಲ್ಲಿನ ಅದಿರು ಸಂಪತ್ತು, ಮ್ಯಾಂಗನೀಸ್ ನ್ನು ಲೂಟಿ‌ ಮಾಡುವುದಾಗಿದೆ ಎಂದು ಆರೋಪಿಸಿದರು.
ಮತ್ತೊಮ್ಮೆ ಗಣಿ‌ಗಾರಿಕೆ ಮೂಲಕ ಇಲ್ಲಿನ ಸಂಪತ್ತು ಲೂಟಿಗೆ ಸಂಡೂರಿನ ಜನ ಅವಕಾಶ ಮಾಡಿಕೊಡ ಬಾರದು. ಸಂಡೂರಿನವರೇ ಆದ ಇ.ತುಕಾರಂ ‌ಪತ್ನಿ ಅನ್ನಪೂರ್ಣ ಅವರನ್ನೇ ಗೆಲ್ಲಿಸುವ ಮೂಲಕ ಸಂಡೂರಿನ ಅಭಿವೃದ್ದಿಗೆ ಬೆಂಬಲ‌ ಕೊಡಿ ಎಂದು ಮತದಾರರಲ್ಲಿ ಮನವಿ‌ ಮಾಡಿದರು.
ಈ ಸಂದರ್ಭದಲ್ಲಿ ಮುಖಂಡರಾದ ರಾಂಪ್ರಸಾದ್, ವೆಂಕಟೇಶ್ ಹೆಗಡೆ ಇತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು