2:54 PM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಸಂಡೂರಲ್ಲಿ ಬಿಜೆಪಿಗೆ ಅವಕಾಶ ಕೊಟ್ಟರೆ ಗಣಿ ಸಂಪತ್ತು ಲೂಟಿ: ಕೆ. ಸಿ. ಕೊಂಡಯ್ಯ ಎಚ್ಚರಿಕೆ

05/11/2024, 12:54

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಸಂಡೂರಲ್ಲಿ ನಡೆಯು ವಿಧಾನ ಸಭಾ ಉಪ ಚುನಾವಣೆಯಲ್ಲಿ ಬಿಜೆಪಿಗೆ ಅವಕಾಶ ಕೊಟ್ಟರೇ ದೌರ್ಜನ್ಯ, ದಬ್ಬಾಳಿಕೆ ನಡೆಯುವ ಸಾಧ್ಯತೆ ಇದೆ. ಸಂಡೂರಿನಲ್ಲಿ‌ನ‌ ಭಾವೈಕ್ಯತೆಗೆ ಧಕ್ಕೆಯಾಗಲಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಕೆ. ಸಿ. ಕೊಂಡಯ್ಯ ಹೇಳಿದರು.
ಬಳ್ಳಾರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2004-2010 ರವರೆಗೆ ಬಳ್ಳಾರಿ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ‌ನಡೆಸಿದವರು, ಗಣಿ ಸಂಪತ್ತನ್ನು ಲೂಟಿ ಮಾಡಿದವರೆಲ್ಲ ಬಿಜೆಪಿ ಅಭ್ಯರ್ಥಿ ಪರ ನಿಂತು ಪ್ರಚಾರ ಮಾಡುತ್ತಿದ್ದಾರೆ. ಅವರ ಉದ್ದೇಶ ಸಂಡೂರು ಮತ ಕ್ಷೇತ್ರ ‌ಅಭಿವೃದ್ದಿ‌‌ ಮಾಡುವುದಾಗಿಲ್ಲ. ಅಲ್ಲಿನ ಅದಿರು ಸಂಪತ್ತು, ಮ್ಯಾಂಗನೀಸ್ ನ್ನು ಲೂಟಿ‌ ಮಾಡುವುದಾಗಿದೆ ಎಂದು ಆರೋಪಿಸಿದರು.
ಮತ್ತೊಮ್ಮೆ ಗಣಿ‌ಗಾರಿಕೆ ಮೂಲಕ ಇಲ್ಲಿನ ಸಂಪತ್ತು ಲೂಟಿಗೆ ಸಂಡೂರಿನ ಜನ ಅವಕಾಶ ಮಾಡಿಕೊಡ ಬಾರದು. ಸಂಡೂರಿನವರೇ ಆದ ಇ.ತುಕಾರಂ ‌ಪತ್ನಿ ಅನ್ನಪೂರ್ಣ ಅವರನ್ನೇ ಗೆಲ್ಲಿಸುವ ಮೂಲಕ ಸಂಡೂರಿನ ಅಭಿವೃದ್ದಿಗೆ ಬೆಂಬಲ‌ ಕೊಡಿ ಎಂದು ಮತದಾರರಲ್ಲಿ ಮನವಿ‌ ಮಾಡಿದರು.
ಈ ಸಂದರ್ಭದಲ್ಲಿ ಮುಖಂಡರಾದ ರಾಂಪ್ರಸಾದ್, ವೆಂಕಟೇಶ್ ಹೆಗಡೆ ಇತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು