1:31 PM Tuesday14 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;…

ಇತ್ತೀಚಿನ ಸುದ್ದಿ

ಸಂಡೂರು ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಪರ ಸಚಿವ ಕೆ.ಜೆ. ಜಾರ್ಜ್ ಪ್ರಚಾರ: ಕೇಂದ್ರದ ವಿರುದ್ಧ ಕಿಡಿ

04/11/2024, 23:22

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಕೇಂದ್ರಕ್ಕೆ ಕರ್ನಾಟಕ ಹೆಚ್ಚಿನ ತೆರಿಗೆ ಸಂಗ್ರಹಿಸಿ ಕೊಡುತ್ತಿದ್ದರೂ ಅದಕ್ಕೆ ಪ್ರತಿಯಾಗಿ ರಾಜ್ಯಕ್ಕೆ ಕೇಂದ್ರ ನೀಡುತ್ತಿರುವುದು ಅಲ್ಪ ಪಾಲು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ಆಕ್ರೋಶ ವ್ಯಕ್ತಪಡಿಸಿದರು.
ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರ ಪರ ಸೋಮವಾರ ಪ್ರಚಾರ ಕೈಗೊಂಡರು. ‘ಓ ಮೇಘ ಬಿಲಿವರ್ಸ್ ಚರ್ಚ್’ ಸಭಾಂಗಣದಲ್ಲಿ ಆಯೋಜಿಸಿದ್ದ ಕ್ರೈಸ್ತ ಸಮುದಾಯದ ಸಭೆಯಲ್ಲಿ ಮಾತನಾಡಿದ ಅವರು ‘ಈ ಹಿಂದೆನಂತೇ ಈ ಬಾರಿಯೂ ಕಾಂಗ್ರೆಸ್‌ಗೆ ಮತ ನೀಡಿ, ಅನ್ನಪೂರ್ಣ ಅವರನ್ನು ಗೆಲ್ಲಿಸಿ’ ಎಂದು ಮನವಿ ಮಾಡಿದರು.
‘ಕರ್ನಾಟಕ ಇಂದು ಕೇಂದ್ರಕ್ಕೆ ಹೆಚ್ಚಿನ ತೆರಿಗೆ ಕೊಡುತ್ತಿದೆ. ಆದರೆ ನಮಗೆ ಕೇಂದ್ರದಿಂದ ಸಿಗುತ್ತಿರುವುದು ಅಲ್ಪ ಪಾಲು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇಲ್ಲ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರ ಇಂಥ ಅನ್ಯಾಯ ಮಾಡಬಾರದು. ಎಲ್ಲರನ್ನೂ ಜೊತೆ ಸೇರಿಸಿಕೊಂಡು, ಮುನ್ನಡೆಯುತ್ತಿರುವ ಪಕ್ಷ ಕಾಂಗ್ರೆಸ್‌. ಈ ಬಾರಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲ್ಲಿಸಿ’ ಎಂದು ಮನವಿ ಮಾಡಿದರು.
ಅಭ್ಯರ್ಥಿ ಅನ್ನಪೂರ್ಣ ಮಾತನಾಡಿ, ‘ಸಂಡೂರಿನ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕಾಂಗ್ರೆಸ್‌ ಪಕ್ಷ ಮಹಿಳೆಗೆ ಅವಕಾಶ ನೀಡಿದೆ. ಈ ಹಿಂದೆ ಬೆಂಬಲ ನೀಡಿದಂತೆ ಈ ಬಾರಿಯೂ ಅವಕಾಶ ನೀಡಿ’ ಎಂದು ಮನವಿ ಮಾಡಿದರು.
ಎಐಸಿಸಿ ಮುಖಂಡರಾದ ಗೋಪಿನಾಥ್, ಕೆಪಿಸಿಸಿ ವಕ್ತಾರ ವೆಂಕಟೇಶ ಹೆಗಡೆ, ಪದಾಧಿಕಾರಿಗಳು, ಜಿಲ್ಲಾ ಮಹಿಳಾ ಕಾಂಗ್ರೆಸ್‌ ಪದಾಧಿಕಾರಿಗಳು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು