9:13 AM Tuesday26 - May 2026
ಬ್ರೇಕಿಂಗ್ ನ್ಯೂಸ್
ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು

ಇತ್ತೀಚಿನ ಸುದ್ದಿ

ಸಂಡೂರು ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಪರ ಸಚಿವ ಕೆ.ಜೆ. ಜಾರ್ಜ್ ಪ್ರಚಾರ: ಕೇಂದ್ರದ ವಿರುದ್ಧ ಕಿಡಿ

04/11/2024, 23:22

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಕೇಂದ್ರಕ್ಕೆ ಕರ್ನಾಟಕ ಹೆಚ್ಚಿನ ತೆರಿಗೆ ಸಂಗ್ರಹಿಸಿ ಕೊಡುತ್ತಿದ್ದರೂ ಅದಕ್ಕೆ ಪ್ರತಿಯಾಗಿ ರಾಜ್ಯಕ್ಕೆ ಕೇಂದ್ರ ನೀಡುತ್ತಿರುವುದು ಅಲ್ಪ ಪಾಲು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ಆಕ್ರೋಶ ವ್ಯಕ್ತಪಡಿಸಿದರು.
ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರ ಪರ ಸೋಮವಾರ ಪ್ರಚಾರ ಕೈಗೊಂಡರು. ‘ಓ ಮೇಘ ಬಿಲಿವರ್ಸ್ ಚರ್ಚ್’ ಸಭಾಂಗಣದಲ್ಲಿ ಆಯೋಜಿಸಿದ್ದ ಕ್ರೈಸ್ತ ಸಮುದಾಯದ ಸಭೆಯಲ್ಲಿ ಮಾತನಾಡಿದ ಅವರು ‘ಈ ಹಿಂದೆನಂತೇ ಈ ಬಾರಿಯೂ ಕಾಂಗ್ರೆಸ್‌ಗೆ ಮತ ನೀಡಿ, ಅನ್ನಪೂರ್ಣ ಅವರನ್ನು ಗೆಲ್ಲಿಸಿ’ ಎಂದು ಮನವಿ ಮಾಡಿದರು.
‘ಕರ್ನಾಟಕ ಇಂದು ಕೇಂದ್ರಕ್ಕೆ ಹೆಚ್ಚಿನ ತೆರಿಗೆ ಕೊಡುತ್ತಿದೆ. ಆದರೆ ನಮಗೆ ಕೇಂದ್ರದಿಂದ ಸಿಗುತ್ತಿರುವುದು ಅಲ್ಪ ಪಾಲು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇಲ್ಲ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರ ಇಂಥ ಅನ್ಯಾಯ ಮಾಡಬಾರದು. ಎಲ್ಲರನ್ನೂ ಜೊತೆ ಸೇರಿಸಿಕೊಂಡು, ಮುನ್ನಡೆಯುತ್ತಿರುವ ಪಕ್ಷ ಕಾಂಗ್ರೆಸ್‌. ಈ ಬಾರಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲ್ಲಿಸಿ’ ಎಂದು ಮನವಿ ಮಾಡಿದರು.
ಅಭ್ಯರ್ಥಿ ಅನ್ನಪೂರ್ಣ ಮಾತನಾಡಿ, ‘ಸಂಡೂರಿನ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕಾಂಗ್ರೆಸ್‌ ಪಕ್ಷ ಮಹಿಳೆಗೆ ಅವಕಾಶ ನೀಡಿದೆ. ಈ ಹಿಂದೆ ಬೆಂಬಲ ನೀಡಿದಂತೆ ಈ ಬಾರಿಯೂ ಅವಕಾಶ ನೀಡಿ’ ಎಂದು ಮನವಿ ಮಾಡಿದರು.
ಎಐಸಿಸಿ ಮುಖಂಡರಾದ ಗೋಪಿನಾಥ್, ಕೆಪಿಸಿಸಿ ವಕ್ತಾರ ವೆಂಕಟೇಶ ಹೆಗಡೆ, ಪದಾಧಿಕಾರಿಗಳು, ಜಿಲ್ಲಾ ಮಹಿಳಾ ಕಾಂಗ್ರೆಸ್‌ ಪದಾಧಿಕಾರಿಗಳು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು