4:35 AM Sunday15 - February 2026
ಬ್ರೇಕಿಂಗ್ ನ್ಯೂಸ್
ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ…

ಇತ್ತೀಚಿನ ಸುದ್ದಿ

ಸಂಘನಿಕೇತನ ಗಣೇಶೋತ್ಸವಕ್ಕೆ ಅಮೃತ ಮಹೋತ್ಸವದ ವೈಭವ: ಸಂಭ್ರಮದ ಉದ್ಘಾಟನೆ

31/08/2022, 18:05

ಚಿತ್ರ: ಮಂಜು ನೀರೇಶ್ವಾಲ್ಯ

ಮಂಗಳೂರು(reporterkarnataka.com) : ನಗರದ ಮಣ್ಣಗುಡ್ಡೆ ಯಲ್ಲಿರುವ ಸಂಘನಿಕೇತನದಲ್ಲಿ ಕೇಶವ ಸ್ಮ್ರತಿ ಸಂವರ್ಧನ ಸಮಿತಿಯ ಆಶ್ರಯದಲ್ಲಿ ಪ್ರತಿ ವರ್ಷ ನಡೆಯುವ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಈ ಬಾರಿ ಅಮೃತ ಮಹೋತ್ಸವ ಸಂಭ್ರಮವಾಗಿದ್ದು, ಉದ್ಘಾಟನಾ ಸಮಾರಂಭ ಬುಧವಾರ ಭಕ್ತಿ ಸಂಭ್ರಮದಿಂದ ನಡೆಯಿತು.

ಇಂದಿನಿಂದ (ಆಗಸ್ಟ್ 31ರಿಂದ) ಸೆ.4ರವರೆಗೆ ಗಣೇಶೋತ್ಸವ ಜರುಗಲಿದೆ.

ಸಾರ್ವಜನಿಕ ಗಣೇಶ್ಜೋತ್ಸವದ ಉದ್ಘಾಟನೆಯನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಹ ಕಾರ್ಯವಾಹ ಮುಕುಂದ್ ಅವರು ನೆರವೇರಿಸಿದರು.  

ವಿವಿಧ  ಧಾರ್ಮಿಕ , ಸಂಸ್ಕ್ರತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು ಸದ್ಭಕ್ತ ರು ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಪುನೀತರಾಗಬೇಕಾಗಿ ಸಮಿತಿಯು ವಿನಂತಿಸಿಕೊಂಡಿದೆ. 

ಧ್ವಜಾರೋಹಣ, ವಂದೇಮಾತರಂ ಉದ್ಘಾಟಕರ ಸಂದೇಶ, ಸಭಾ ಕಾರ್ಯಕ್ರಮ ನಡೆಯಿತು.


ಗಣಹೋಮ ಬಳಿಕ ಸಾಯಂಕಾಲ ಹರಿನಾಮ ಸಂಕೀರ್ತನೆ, ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಣೆ ನಡೆಯಿತು. ರಾತ್ರಿ ಮೂಡಗಣಪತಿ ಸೇವೆ ಹಾಗೂ ರಂಗ ಪೂಜೆ ನಡೆದವು.  ಈ ಸಂದರ್ಭದಲ್ಲಿ ಸಂಘ ಚಾಲಕರಾದ ಡಾ .ವಾಮನ್  ಶೆಣೈ, ಸುನಿಲ್ ಆಚಾರ್ , ಡಾ . ಕಲಡ್ಕ ಪ್ರಭಾಕರ್ ಭಟ್ , ಗೌರವ ಅಧ್ಯಕ್ಷ ಪಿ . ರವೀಂದ್ರ ಪೈ, ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಪ್ರವೀಣ್ ಕುಮಾರ್ , ಪ್ರಧಾನ ಕಾರ್ಯದರ್ಶಿ ಎಂ . ಸತೀಶ್ ಪ್ರಭು , ಸುರೇಶ ಕಾಮತ್ , ಜೀವನರಾಜ್  ಶೆಣೈ  ಉಪಾಧ್ಯಕ್ಷರಾದ ಜೆ . ಕೆ. ರಾವ್ , ಆನಂದ ಪಾಂಗಳ , ಕೆ. ಪಿ. ಟೈಲರ್ , ಅಭಿಷೇಕ್ ಭಂಡಾರಿ ,   ಕೇಶವ  ಸ್ಮ್ರತಿ ಸಂವರ್ಧನ ಸಮಿತಿಯ ವಿನೋದ್ ಶೆಣೈ , ರಘುವೀರ್ ಕಾಮತ್ , ಯಸ್ ಆರ್ ಕುಡ್ವ , ಗಣೇಶ್ ಪ್ರಸಾದ್ , ಜಯಪ್ರಕಾಶ್ ಮಂಗಳಾದೇವಿ ಸ್ವಾಮಿಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು