4:46 PM Monday29 - June 2026
ಬ್ರೇಕಿಂಗ್ ನ್ಯೂಸ್
ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ… 2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು

ಇತ್ತೀಚಿನ ಸುದ್ದಿ

ಸಂಘನಿಕೇತನ ಗಣೇಶೋತ್ಸವಕ್ಕೆ ಅಮೃತ ಮಹೋತ್ಸವದ ವೈಭವ: ಸಂಭ್ರಮದ ಉದ್ಘಾಟನೆ

31/08/2022, 18:05

ಚಿತ್ರ: ಮಂಜು ನೀರೇಶ್ವಾಲ್ಯ

ಮಂಗಳೂರು(reporterkarnataka.com) : ನಗರದ ಮಣ್ಣಗುಡ್ಡೆ ಯಲ್ಲಿರುವ ಸಂಘನಿಕೇತನದಲ್ಲಿ ಕೇಶವ ಸ್ಮ್ರತಿ ಸಂವರ್ಧನ ಸಮಿತಿಯ ಆಶ್ರಯದಲ್ಲಿ ಪ್ರತಿ ವರ್ಷ ನಡೆಯುವ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಈ ಬಾರಿ ಅಮೃತ ಮಹೋತ್ಸವ ಸಂಭ್ರಮವಾಗಿದ್ದು, ಉದ್ಘಾಟನಾ ಸಮಾರಂಭ ಬುಧವಾರ ಭಕ್ತಿ ಸಂಭ್ರಮದಿಂದ ನಡೆಯಿತು.

ಇಂದಿನಿಂದ (ಆಗಸ್ಟ್ 31ರಿಂದ) ಸೆ.4ರವರೆಗೆ ಗಣೇಶೋತ್ಸವ ಜರುಗಲಿದೆ.

ಸಾರ್ವಜನಿಕ ಗಣೇಶ್ಜೋತ್ಸವದ ಉದ್ಘಾಟನೆಯನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಹ ಕಾರ್ಯವಾಹ ಮುಕುಂದ್ ಅವರು ನೆರವೇರಿಸಿದರು.  

ವಿವಿಧ  ಧಾರ್ಮಿಕ , ಸಂಸ್ಕ್ರತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು ಸದ್ಭಕ್ತ ರು ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಪುನೀತರಾಗಬೇಕಾಗಿ ಸಮಿತಿಯು ವಿನಂತಿಸಿಕೊಂಡಿದೆ. 

ಧ್ವಜಾರೋಹಣ, ವಂದೇಮಾತರಂ ಉದ್ಘಾಟಕರ ಸಂದೇಶ, ಸಭಾ ಕಾರ್ಯಕ್ರಮ ನಡೆಯಿತು.


ಗಣಹೋಮ ಬಳಿಕ ಸಾಯಂಕಾಲ ಹರಿನಾಮ ಸಂಕೀರ್ತನೆ, ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಣೆ ನಡೆಯಿತು. ರಾತ್ರಿ ಮೂಡಗಣಪತಿ ಸೇವೆ ಹಾಗೂ ರಂಗ ಪೂಜೆ ನಡೆದವು.  ಈ ಸಂದರ್ಭದಲ್ಲಿ ಸಂಘ ಚಾಲಕರಾದ ಡಾ .ವಾಮನ್  ಶೆಣೈ, ಸುನಿಲ್ ಆಚಾರ್ , ಡಾ . ಕಲಡ್ಕ ಪ್ರಭಾಕರ್ ಭಟ್ , ಗೌರವ ಅಧ್ಯಕ್ಷ ಪಿ . ರವೀಂದ್ರ ಪೈ, ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಪ್ರವೀಣ್ ಕುಮಾರ್ , ಪ್ರಧಾನ ಕಾರ್ಯದರ್ಶಿ ಎಂ . ಸತೀಶ್ ಪ್ರಭು , ಸುರೇಶ ಕಾಮತ್ , ಜೀವನರಾಜ್  ಶೆಣೈ  ಉಪಾಧ್ಯಕ್ಷರಾದ ಜೆ . ಕೆ. ರಾವ್ , ಆನಂದ ಪಾಂಗಳ , ಕೆ. ಪಿ. ಟೈಲರ್ , ಅಭಿಷೇಕ್ ಭಂಡಾರಿ ,   ಕೇಶವ  ಸ್ಮ್ರತಿ ಸಂವರ್ಧನ ಸಮಿತಿಯ ವಿನೋದ್ ಶೆಣೈ , ರಘುವೀರ್ ಕಾಮತ್ , ಯಸ್ ಆರ್ ಕುಡ್ವ , ಗಣೇಶ್ ಪ್ರಸಾದ್ , ಜಯಪ್ರಕಾಶ್ ಮಂಗಳಾದೇವಿ ಸ್ವಾಮಿಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು