6:32 AM Tuesday4 - August 2026
ಬ್ರೇಕಿಂಗ್ ನ್ಯೂಸ್
ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು…

ಇತ್ತೀಚಿನ ಸುದ್ದಿ

ಸಂಘ ಪರಿವಾರದ ಕೈಗೊಂಬೆಯಂತೆ ವರ್ತಿಸುವ ಪೊಲೀಸ್ ಕಮಿಷನರ್ ವರ್ಗಾಯಿಸಿ: ಪ್ರತಿಭಟನೆಯಲ್ಲಿ ಮುನೀರ್ ಕಾಟಿಪಳ್ಳ ಆಗ್ರಹ

02/12/2024, 12:31

ಮಂಗಳೂರು(reporterkarnataka.com):ರಾಜ್ಯ ಸರಕಾರದ ಆದೇಶ ಪಾಲನೆ ಮಾಡದ, ಬಿಜೆಪಿ ಮತ್ತು ಸಂಘ ಪರಿವಾರದ ಕೈ ಗೊಂಬೆ ರೀತಿ ವರ್ತಿಸುತ್ತಿರುವ ಪೊಲೀಸ್ ಕಮಿಷನರ್ ಅನುಪಮ್ ಅಗರ್ ವಾಲ್ ಅವರನ್ನು ತಕ್ಷಣ ವರ್ಗಾವಣೆ ಮಾಡುವಂತೆ ಎಡಪಂಥೀಯ ನಾಯಕ ಮುನೀರ್ ಕಾಟಿಪಳ್ಳ ಆಗ್ರಹಿಸಿದರು.


ಪೊಲೀಸ್ ಕಮಿಷನರ್ ಜನಪರ ಚಳವಳಿಯನ್ನು ಹತ್ತಿಕ್ಕುತ್ತಿದ್ದಾರೆ ಎಂದು ಆರೋಪಿಸಿ ಅವರ ವರ್ಗಾವಣೆಗೆ ಆಗ್ರಹಿಸಿ ನಗರದ ಮಿನಿ ವಿಧಾನ ಸೌಧ ಎದುರು ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
ಸರ್ವಾಧಿಕಾರಿ ಧೋರಣೆಯ ಹಳೆ ಕಾಲದ ಬ್ರಿಟಿಷ್ ಮಾದರಿ ಪೊಲೀಸ್ ಕಮಿಷನರ್ ನಮಗೆ ಬೇಕಾಗಿಲ್ಲ. ಕಮಿಷನರ್ ಅಗರ್ ವಾಲ್ ಅವರು ಸಂಘನಿಕತನದ ಆದೇಶಗಳನ್ನು ಮಾತ್ರ
ಗಮನಕ್ಕೆ ತೆಗೆದುಕೊಳ್ಳುತ್ತಾರೆ. ಬಿಜೆಪಿ ಮತ್ತು ಸಂಘ ಪರಿವಾರದ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು