10:01 AM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಸಂಗೀತ ಮನಸ್ಸಿಗೆ ಮುದ ನೀಡುವ ಕಲಾ ಸಾಧನ: ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ . ಗಣೇಶ್ ಕಾರ್ಣಿಕ್

10/01/2024, 22:40

ಮಂಗಳೂರು(reporterkarnataka.com); ಸಂಗೀತ ಮನಸ್ಸಿಗೆ ಮುದ ನೀಡುವ ಅದ್ಭುತ ಕಲಾ ಸಾಧನ ಎಂದು ಮಾಜಿ ಶಾಸಕ ಕ್ಯಾ.ಗಣೇಶ್ ಕಾರ್ಣಿಕ್ ಹೇಳಿದ್ದಾರೆ.
ಅವರು ಮಂಗಳವಾರ ಕಲಾ ಸಾಧನ ಮ್ಯೂಸಿಕ್ ಸ್ಕೂಲ್ ನ ವತಿಯಿಂದ ನಗರದ ಚಿಲಿಂಬಿ ಶಾರದಾ ಮಹೋತ್ಸವ ಸಮಿತಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಂಗೀತ ಸಂಭ್ರಮ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.
ಸಂಗೀತ ನಮ್ಮ ತನು ಮತ್ತು ಮನಕ್ಕೆ ವಿಶೇಷವಾದ ಚೇತನವನ್ನು ನೀಡುವ ಶಕ್ತಿಯನ್ನು ಹೊಂದಿದೆ. ಆದ್ದುದರಿಂದ ಅದು ನಮ್ಮ ಪರಂಪರೆಯೊಂದಿಗೆ ಬೆಳೆದು ಬಂದಿದೆ ಎಂದರು.
ಈ ಸಂದರ್ಭದಲ್ಲಿ ನಡೆದ ಸಂಗೀತ ಸಂಭ್ರಮದಲ್ಲಿ ಹಾರ್ಮೋನಿಯಂನಲ್ಲಿ ಕಲಾವಿದ ತೇಜಸ್ ಕಟೋಟಿ ಹಾಗೂ ತಬಲಾದಲ್ಲಿ ಸುಮಿತ್ ಎಸ್. ನಾಯಕ್ ಸಂಗೀತ ಕಾರ್ಯಕ್ರಮ ನೀಡಿದರು.
ವೇದಿಕೆಯಲ್ಲಿ ಚಿಲಿಂಬಿ ಬಾಲಕರ ಶಾರದೋತ್ಸವ ಸಮಿತಿಯ ಅಧ್ಯಕ್ಷ ಸುಬ್ರಾಯ ನಾಯಕ್, ಶಾರದಾ ಮಹಿಳಾ ಮಂಡಲದ ಅಧ್ಯಕ್ಷೆ ಅಡಿಗೆ ಪದ್ಮಾಶೆಣೈ, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್, ಕಲಾ ಸಾಧನ ಮ್ಯೂಸಿಕ್ ಸ್ಕೂಲ್ ನ ನಿರ್ದೇಶಕಿ ವಿಭಾ ಶ್ರೀನಿವಾಸ ನಾಯಕ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು