3:59 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಸಂಗೀತ ಪರಂಪರೆ ಉಳಿಸಲು ಹಲವು ಯೋಜನೆ: ಬಂಟ್ವಾಳ ಸಂಗೀತ ಪರಿಷತ್ ಸಭೆಯಲ್ಲಿ ನಿರ್ಣಯ

30/04/2023, 12:39

ಬಂಟ್ವಾಳ(reporterkarnataka.com): ಸಂಗೀತ ಪರಂಪರೆಯ ಉಳಿವಿಗಾಗಿ ಸಾರ್ವಜನಿಕ ರ ಗಮನ ಸೆಳೆಯುವಂತಾಗಲು, ಸಂಗೀತ ಶ್ರೋತೃಗಳನ್ನು ಸೃಷ್ಟಿಸಿ ಹೆಚ್ಚಿಸುವ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಸಂಗೀತ ಪರಿಷತ್ ಬಂಟ್ವಾಳ ಇದರ ಸಭೆಯಲ್ಲಿ ನಿರ್ಣಯಿಸಲಾಯಿತು.
ಸಂಗೀತ ಪರಿಷತ್ ಬಂಟ್ವಾಳ ಹಾಗೂ ಸರ್ಗಂ ಸಂಗೀತ ಶಾಲೆಯ ಜಂಟಿ ಆಶ್ರಯದಲ್ಲಿ ನಡೆದ ಸಭಾ ವೇದಿಕೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಯಿತು. ಡಾ. ಎಂ.ಎಸ್. ಭಟ್ ಅವರ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಡಾ. ಎನ್. ಸೋಮಶೇಖರ ಮಯ್ಯ , ಡಾ. ಗಣೇಶ್ ಬಾಳಿಗ, ವಕೀಲರಾದ ಅಜಿತ್ ಕುಮಾರ್, ಅನಿತಾ ಪ್ರಭು ಮೊದಲಾದವರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿರು.
ಬಂಟ್ವಾಳ ತಾಲೂಕಿನಾದ್ಯಾಂತ ತೆರೆಯ ಮರೆಯಲ್ಲಿ ಉಳಿದಿರುವ ಪ್ರತಿಭಾವಂತ ಬಾಲ/ ಯುವ ವೃಂದ ದವರಿಗಾಗಿ ಶಾಸ್ತ್ರೀಯ ಹಾಗೂ ಲಘು ಶಾಸ್ತ್ರೀಯ ಸಂಗೀತ ಸ್ಪರ್ಧೆ ಗಳನ್ನು ನಡೆಸುವುದು, ಸಂಗೀತ ಪ್ರಾತ್ಯಕ್ಷಿಕೆಯು ಅಪರೂಪವಾಗುತ್ತಿರೋ ಈ ಕಾಲಘಟ್ಟದಲ್ಲಿ ಜನಪ್ರಿಯ ಕಲಾವಿದರಿಂದ ಸಂಗೀತದ ಮಹತ್ವ ಬಗ್ಗೆ ಉಪನ್ಯಾಸ ದೊಂದಿಗೆ ಸಂಗೀತ ಪ್ರಾತ್ಯಕ್ಷಿಕೆ ಕಾರ್ಯಕ್ರಮಗಳನ್ನು ನಿಯೋಜಿಸುವುದು ಸೂಕ್ತವಿರುವುದಾಗಿ ಅಭಿಪ್ರಾಯಪಡಲಾಗಿ ನಿರ್ಣಯ ಕೈಗೊಳ್ಳಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು