6:30 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಸಂಗೀತ ಪರಂಪರೆ ಉಳಿಸಲು ಹಲವು ಯೋಜನೆ: ಬಂಟ್ವಾಳ ಸಂಗೀತ ಪರಿಷತ್ ಸಭೆಯಲ್ಲಿ ನಿರ್ಣಯ

30/04/2023, 12:39

ಬಂಟ್ವಾಳ(reporterkarnataka.com): ಸಂಗೀತ ಪರಂಪರೆಯ ಉಳಿವಿಗಾಗಿ ಸಾರ್ವಜನಿಕ ರ ಗಮನ ಸೆಳೆಯುವಂತಾಗಲು, ಸಂಗೀತ ಶ್ರೋತೃಗಳನ್ನು ಸೃಷ್ಟಿಸಿ ಹೆಚ್ಚಿಸುವ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಸಂಗೀತ ಪರಿಷತ್ ಬಂಟ್ವಾಳ ಇದರ ಸಭೆಯಲ್ಲಿ ನಿರ್ಣಯಿಸಲಾಯಿತು.
ಸಂಗೀತ ಪರಿಷತ್ ಬಂಟ್ವಾಳ ಹಾಗೂ ಸರ್ಗಂ ಸಂಗೀತ ಶಾಲೆಯ ಜಂಟಿ ಆಶ್ರಯದಲ್ಲಿ ನಡೆದ ಸಭಾ ವೇದಿಕೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಯಿತು. ಡಾ. ಎಂ.ಎಸ್. ಭಟ್ ಅವರ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಡಾ. ಎನ್. ಸೋಮಶೇಖರ ಮಯ್ಯ , ಡಾ. ಗಣೇಶ್ ಬಾಳಿಗ, ವಕೀಲರಾದ ಅಜಿತ್ ಕುಮಾರ್, ಅನಿತಾ ಪ್ರಭು ಮೊದಲಾದವರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿರು.
ಬಂಟ್ವಾಳ ತಾಲೂಕಿನಾದ್ಯಾಂತ ತೆರೆಯ ಮರೆಯಲ್ಲಿ ಉಳಿದಿರುವ ಪ್ರತಿಭಾವಂತ ಬಾಲ/ ಯುವ ವೃಂದ ದವರಿಗಾಗಿ ಶಾಸ್ತ್ರೀಯ ಹಾಗೂ ಲಘು ಶಾಸ್ತ್ರೀಯ ಸಂಗೀತ ಸ್ಪರ್ಧೆ ಗಳನ್ನು ನಡೆಸುವುದು, ಸಂಗೀತ ಪ್ರಾತ್ಯಕ್ಷಿಕೆಯು ಅಪರೂಪವಾಗುತ್ತಿರೋ ಈ ಕಾಲಘಟ್ಟದಲ್ಲಿ ಜನಪ್ರಿಯ ಕಲಾವಿದರಿಂದ ಸಂಗೀತದ ಮಹತ್ವ ಬಗ್ಗೆ ಉಪನ್ಯಾಸ ದೊಂದಿಗೆ ಸಂಗೀತ ಪ್ರಾತ್ಯಕ್ಷಿಕೆ ಕಾರ್ಯಕ್ರಮಗಳನ್ನು ನಿಯೋಜಿಸುವುದು ಸೂಕ್ತವಿರುವುದಾಗಿ ಅಭಿಪ್ರಾಯಪಡಲಾಗಿ ನಿರ್ಣಯ ಕೈಗೊಳ್ಳಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು