4:27 AM Saturday14 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

ಸಂಗೀತ ವಿದ್ವಾನ್ ನಾಗನವಳಚಿಲು ಸೋಮಶೇಖರ ಮಯ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ

03/10/2021, 16:39

ಬೆಂಗಳೂರು(reporterkarnataka.com):.ಸಂಗೀತ ಕ್ಷೇತ್ರದಲ್ಲಿ ವಿಷೇಶ ಸಾಧನೆಗೈದು ನಾಡಿನ ಜನಮನ ದಲ್ಲಿ ಶಾಂತಿಯನ್ನು ಸಾರುವಲ್ಲಿ ಸುಧೀರ್ಘ ಕಾಲದಿಂದಲೂ ಕಾರ್ಯಕ್ರಮ ಗಳನ್ನು ನೀಡುತ್ತಾ ಜನಮನ್ನಣೆ ಗಳಿಸಿದ ಬಂಟ್ವಾಳ ನಾಗನವಳಚಿಲು ಸೋಮಶೇಖರ ಮಯ್ಯರಿಗೆ INDIAN EMPIRE UNIVERSITY ಯು  ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿ ಗೌರವಿಸಿದೆ.

ಈ ಬಾರಿ ಗಾಂಧಿ ಜಯಂತಿಯಂದು ಬೆಂಗಳೂರಿನ ಸಮೀಪದ ಹೊಸೂರಿನಲ್ಲಿ ಕಾರ್ಯಕ್ರಮವು ಯುನಿವರ್ಸಿಟಿಯ ಮುಖ್ಯಸ್ಥರ ಸಮ್ಮುಖದಲ್ಲಿ ನೆರವೇರಿತು. ಪ್ರಧಾನಿ ನರೇಂದ್ರ ಮೋದಿ ಅವರು ಅಧ್ಯಕ್ಷ ರಾಗಿರುವ ಭಾರತ ಸರಕಾರದ NITI ನೀತಿ ಆಯೋಗದಡಿ ಇಂಡಿಯನ್ ಎಂಪಾಯರ್ ಯುನಿವರ್ಸಿಟಿ ಕಾರ್ಯನಿರ್ವಹಿಸುತ್ತಿದ್ದು, ಈ ಬಾರಿ ಕರ್ನಾಟಕದ 22 ಸಾಧಕರನ್ನು ಗುರುತಿಸಿ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿ ಗೌರವಿಸಿದೆ. 

ಸೋಮಶೇಖರ್ ಮಯ್ಯ ಅವರು ಈಗಾಗಲೇ ಹಿಂದೂಸ್ತಾನಿ ಸಂಗೀತದಲ್ಲಿ ಕರ್ನಾಟಕ ಸರ್ಕಾರ ದಿಂದ ನಡೆಸಿರುವ ಗಾಯನ ಮತ್ತು ತಾಳ ವಾದ್ಯ ವಿಷಯಗಳೆರಡರಲ್ಲಿಯೂ ವಿದ್ವತ್ ಪದವಿ , ಅಖಿಲ ಗಂಧರ್ವ ಮಹಾವಿದ್ಯಾಲಯ ಮುಂಬಯಿ ಸಂಸ್ಥೆ ಯಿಂದ  ಗಾಯನ ಸಂಗೀತದಲ್ಲಿ ವಿಶಾರದ ಹಾಗೂ ಸ್ನಾತಕೋತ್ತರ ಪದವಿಗಳನ್ನು ಪಡೆದಿದ್ದಾರೆ. ಕರ್ನಾಟಕ ಸರ್ಕಾರ ನಡೆಸುತ್ತಿರುವ ಸಂಗೀತ ಪರೀಕ್ಷೆ ಗಳಿಗೆ ಪ್ರಾಯೋಗಿಕ ಪರೀಕ್ಷಕರಾಗಿ 1991 ರಿಂದಲೂ ನಿರಂತರವಾಗಿ  ಸೇವೆ ಸಲ್ಲಿಸುತ್ತಿದ್ದುದಲ್ಲದೇ ಸಂಗೀತ ಕಾರ್ಯಕ್ರಮಗಳನ್ನು ನೀಡುತ್ತಾ ಜನಮನ್ನಣೆಗೆ ಪಾತ್ರರಾಗಿದ್ದಾರೆ.  ಜಿಲ್ಲಾ ಹಾಗೂ  ರಾಜ್ಯ ಮಟ್ಟದಲ್ಲೂ ಪ್ರಶಸ್ತಿಗಳನ್ನು ಗೆಲ್ಲುತ್ತಾ ಬಂದಿರುತ್ತಾರೆ.

ಅನೇಕ ಪ್ರಶಸ್ತಿ ಪುರಸ್ಕಾರಗಳನ್ನು ಪಡೆದ ಇವರಿಗೆ ಕಲಾಭಿಮಾನಿ ನಾಗರಿಕ ಪುರ ಜನರು  ‘ ಗಾನಕೇಸರಿ ‘ ಬಿರುದು ನೀಡಿ ಗೌರವಿಸಿರುತ್ತಾರೆ. ಮೂಡಬಿದ್ರೆ ಯಲ್ಲಿ ಕಂದಾಯ ಅಧಿಕಾರಿ ಯಾಗಿಯೂ ಸೇವೆ ಸಲ್ಲಿಸಿದ್ದ ಇವರು ಪ್ರಸ್ತುತ ಮೂಡಬಿದ್ರೆ ಯಲ್ಲಿ ನೆಲೆಸಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು