5:44 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಸಂಗೀತ ವಿದ್ವಾನ್ ನಾಗನವಳಚಿಲು ಸೋಮಶೇಖರ ಮಯ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ

03/10/2021, 16:39

ಬೆಂಗಳೂರು(reporterkarnataka.com):.ಸಂಗೀತ ಕ್ಷೇತ್ರದಲ್ಲಿ ವಿಷೇಶ ಸಾಧನೆಗೈದು ನಾಡಿನ ಜನಮನ ದಲ್ಲಿ ಶಾಂತಿಯನ್ನು ಸಾರುವಲ್ಲಿ ಸುಧೀರ್ಘ ಕಾಲದಿಂದಲೂ ಕಾರ್ಯಕ್ರಮ ಗಳನ್ನು ನೀಡುತ್ತಾ ಜನಮನ್ನಣೆ ಗಳಿಸಿದ ಬಂಟ್ವಾಳ ನಾಗನವಳಚಿಲು ಸೋಮಶೇಖರ ಮಯ್ಯರಿಗೆ INDIAN EMPIRE UNIVERSITY ಯು  ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿ ಗೌರವಿಸಿದೆ.

ಈ ಬಾರಿ ಗಾಂಧಿ ಜಯಂತಿಯಂದು ಬೆಂಗಳೂರಿನ ಸಮೀಪದ ಹೊಸೂರಿನಲ್ಲಿ ಕಾರ್ಯಕ್ರಮವು ಯುನಿವರ್ಸಿಟಿಯ ಮುಖ್ಯಸ್ಥರ ಸಮ್ಮುಖದಲ್ಲಿ ನೆರವೇರಿತು. ಪ್ರಧಾನಿ ನರೇಂದ್ರ ಮೋದಿ ಅವರು ಅಧ್ಯಕ್ಷ ರಾಗಿರುವ ಭಾರತ ಸರಕಾರದ NITI ನೀತಿ ಆಯೋಗದಡಿ ಇಂಡಿಯನ್ ಎಂಪಾಯರ್ ಯುನಿವರ್ಸಿಟಿ ಕಾರ್ಯನಿರ್ವಹಿಸುತ್ತಿದ್ದು, ಈ ಬಾರಿ ಕರ್ನಾಟಕದ 22 ಸಾಧಕರನ್ನು ಗುರುತಿಸಿ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿ ಗೌರವಿಸಿದೆ. 

ಸೋಮಶೇಖರ್ ಮಯ್ಯ ಅವರು ಈಗಾಗಲೇ ಹಿಂದೂಸ್ತಾನಿ ಸಂಗೀತದಲ್ಲಿ ಕರ್ನಾಟಕ ಸರ್ಕಾರ ದಿಂದ ನಡೆಸಿರುವ ಗಾಯನ ಮತ್ತು ತಾಳ ವಾದ್ಯ ವಿಷಯಗಳೆರಡರಲ್ಲಿಯೂ ವಿದ್ವತ್ ಪದವಿ , ಅಖಿಲ ಗಂಧರ್ವ ಮಹಾವಿದ್ಯಾಲಯ ಮುಂಬಯಿ ಸಂಸ್ಥೆ ಯಿಂದ  ಗಾಯನ ಸಂಗೀತದಲ್ಲಿ ವಿಶಾರದ ಹಾಗೂ ಸ್ನಾತಕೋತ್ತರ ಪದವಿಗಳನ್ನು ಪಡೆದಿದ್ದಾರೆ. ಕರ್ನಾಟಕ ಸರ್ಕಾರ ನಡೆಸುತ್ತಿರುವ ಸಂಗೀತ ಪರೀಕ್ಷೆ ಗಳಿಗೆ ಪ್ರಾಯೋಗಿಕ ಪರೀಕ್ಷಕರಾಗಿ 1991 ರಿಂದಲೂ ನಿರಂತರವಾಗಿ  ಸೇವೆ ಸಲ್ಲಿಸುತ್ತಿದ್ದುದಲ್ಲದೇ ಸಂಗೀತ ಕಾರ್ಯಕ್ರಮಗಳನ್ನು ನೀಡುತ್ತಾ ಜನಮನ್ನಣೆಗೆ ಪಾತ್ರರಾಗಿದ್ದಾರೆ.  ಜಿಲ್ಲಾ ಹಾಗೂ  ರಾಜ್ಯ ಮಟ್ಟದಲ್ಲೂ ಪ್ರಶಸ್ತಿಗಳನ್ನು ಗೆಲ್ಲುತ್ತಾ ಬಂದಿರುತ್ತಾರೆ.

ಅನೇಕ ಪ್ರಶಸ್ತಿ ಪುರಸ್ಕಾರಗಳನ್ನು ಪಡೆದ ಇವರಿಗೆ ಕಲಾಭಿಮಾನಿ ನಾಗರಿಕ ಪುರ ಜನರು  ‘ ಗಾನಕೇಸರಿ ‘ ಬಿರುದು ನೀಡಿ ಗೌರವಿಸಿರುತ್ತಾರೆ. ಮೂಡಬಿದ್ರೆ ಯಲ್ಲಿ ಕಂದಾಯ ಅಧಿಕಾರಿ ಯಾಗಿಯೂ ಸೇವೆ ಸಲ್ಲಿಸಿದ್ದ ಇವರು ಪ್ರಸ್ತುತ ಮೂಡಬಿದ್ರೆ ಯಲ್ಲಿ ನೆಲೆಸಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು