5:16 PM Saturday19 - September 2026
ಬ್ರೇಕಿಂಗ್ ನ್ಯೂಸ್
*ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ…

ಇತ್ತೀಚಿನ ಸುದ್ದಿ

ಸಂಗೀತ ವಿದ್ವಾನ್ ನಾಗನವಳಚಿಲು ಸೋಮಶೇಖರ ಮಯ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ

03/10/2021, 16:39

ಬೆಂಗಳೂರು(reporterkarnataka.com):.ಸಂಗೀತ ಕ್ಷೇತ್ರದಲ್ಲಿ ವಿಷೇಶ ಸಾಧನೆಗೈದು ನಾಡಿನ ಜನಮನ ದಲ್ಲಿ ಶಾಂತಿಯನ್ನು ಸಾರುವಲ್ಲಿ ಸುಧೀರ್ಘ ಕಾಲದಿಂದಲೂ ಕಾರ್ಯಕ್ರಮ ಗಳನ್ನು ನೀಡುತ್ತಾ ಜನಮನ್ನಣೆ ಗಳಿಸಿದ ಬಂಟ್ವಾಳ ನಾಗನವಳಚಿಲು ಸೋಮಶೇಖರ ಮಯ್ಯರಿಗೆ INDIAN EMPIRE UNIVERSITY ಯು  ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿ ಗೌರವಿಸಿದೆ.

ಈ ಬಾರಿ ಗಾಂಧಿ ಜಯಂತಿಯಂದು ಬೆಂಗಳೂರಿನ ಸಮೀಪದ ಹೊಸೂರಿನಲ್ಲಿ ಕಾರ್ಯಕ್ರಮವು ಯುನಿವರ್ಸಿಟಿಯ ಮುಖ್ಯಸ್ಥರ ಸಮ್ಮುಖದಲ್ಲಿ ನೆರವೇರಿತು. ಪ್ರಧಾನಿ ನರೇಂದ್ರ ಮೋದಿ ಅವರು ಅಧ್ಯಕ್ಷ ರಾಗಿರುವ ಭಾರತ ಸರಕಾರದ NITI ನೀತಿ ಆಯೋಗದಡಿ ಇಂಡಿಯನ್ ಎಂಪಾಯರ್ ಯುನಿವರ್ಸಿಟಿ ಕಾರ್ಯನಿರ್ವಹಿಸುತ್ತಿದ್ದು, ಈ ಬಾರಿ ಕರ್ನಾಟಕದ 22 ಸಾಧಕರನ್ನು ಗುರುತಿಸಿ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿ ಗೌರವಿಸಿದೆ. 

ಸೋಮಶೇಖರ್ ಮಯ್ಯ ಅವರು ಈಗಾಗಲೇ ಹಿಂದೂಸ್ತಾನಿ ಸಂಗೀತದಲ್ಲಿ ಕರ್ನಾಟಕ ಸರ್ಕಾರ ದಿಂದ ನಡೆಸಿರುವ ಗಾಯನ ಮತ್ತು ತಾಳ ವಾದ್ಯ ವಿಷಯಗಳೆರಡರಲ್ಲಿಯೂ ವಿದ್ವತ್ ಪದವಿ , ಅಖಿಲ ಗಂಧರ್ವ ಮಹಾವಿದ್ಯಾಲಯ ಮುಂಬಯಿ ಸಂಸ್ಥೆ ಯಿಂದ  ಗಾಯನ ಸಂಗೀತದಲ್ಲಿ ವಿಶಾರದ ಹಾಗೂ ಸ್ನಾತಕೋತ್ತರ ಪದವಿಗಳನ್ನು ಪಡೆದಿದ್ದಾರೆ. ಕರ್ನಾಟಕ ಸರ್ಕಾರ ನಡೆಸುತ್ತಿರುವ ಸಂಗೀತ ಪರೀಕ್ಷೆ ಗಳಿಗೆ ಪ್ರಾಯೋಗಿಕ ಪರೀಕ್ಷಕರಾಗಿ 1991 ರಿಂದಲೂ ನಿರಂತರವಾಗಿ  ಸೇವೆ ಸಲ್ಲಿಸುತ್ತಿದ್ದುದಲ್ಲದೇ ಸಂಗೀತ ಕಾರ್ಯಕ್ರಮಗಳನ್ನು ನೀಡುತ್ತಾ ಜನಮನ್ನಣೆಗೆ ಪಾತ್ರರಾಗಿದ್ದಾರೆ.  ಜಿಲ್ಲಾ ಹಾಗೂ  ರಾಜ್ಯ ಮಟ್ಟದಲ್ಲೂ ಪ್ರಶಸ್ತಿಗಳನ್ನು ಗೆಲ್ಲುತ್ತಾ ಬಂದಿರುತ್ತಾರೆ.

ಅನೇಕ ಪ್ರಶಸ್ತಿ ಪುರಸ್ಕಾರಗಳನ್ನು ಪಡೆದ ಇವರಿಗೆ ಕಲಾಭಿಮಾನಿ ನಾಗರಿಕ ಪುರ ಜನರು  ‘ ಗಾನಕೇಸರಿ ‘ ಬಿರುದು ನೀಡಿ ಗೌರವಿಸಿರುತ್ತಾರೆ. ಮೂಡಬಿದ್ರೆ ಯಲ್ಲಿ ಕಂದಾಯ ಅಧಿಕಾರಿ ಯಾಗಿಯೂ ಸೇವೆ ಸಲ್ಲಿಸಿದ್ದ ಇವರು ಪ್ರಸ್ತುತ ಮೂಡಬಿದ್ರೆ ಯಲ್ಲಿ ನೆಲೆಸಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು