1:11 PM Saturday9 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

ಸಂಘನಿಕೇತನ ಗಣೇಶನಿಗೆ ಅಮೃತ ಮಹೋತ್ಸವ ಸಂಭ್ರಮ: ಮಂಗಳ ವಾದ್ಯದೊಂದಿಗೆ ದೇವರ ಮೃತಿಕಾ ವಿಗ್ರಹ ಆಗಮನ

30/08/2022, 20:50

ಚಿತ್ರ: ಮಂಜು ನೀರೇಶ್ವಾಲ್ಯ

ಮಂಗಳೂರು(reporterkarnataka.com): ನಗರದ ಮಣ್ಣಗುಡ್ಡೆಯಲ್ಲಿರುವ ಸಂಘನಿಕೇತನದಲ್ಲಿ ಕೇಶವ ಸ್ಮ್ರತಿ ಸಂವರ್ಧನ ಸಮಿತಿಯ ಆಶ್ರಯದಲ್ಲಿ ಈ ಬಾರಿ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಅಮೃತ ಮಹೋತ್ಸವ ಸಂಭ್ರಮ ( 75 ವರ್ಷ ) ಈ ಪ್ರಯುಕ್ತ ಶ್ರೀ ಮಹಾಗಣಪತಿ ದೇವರ ಮೃತಿಕಾ ವಿಗ್ರಹವನ್ನು ವಿಜೃಂಭಣೆಯಿಂದ ತರಲಾಯಿತು . ದಿನಾಂಕ 31 ರಿಂದ ಸೆ.4ರ ವರೆಗೆ ಗಣೇಶೋತ್ಸವ ನಡೆಯಲಿದೆ. ಸಾರ್ವಜನಿಕ ಗಣೇಶ್ಜೋತ್ಸವದ ಉದ್ಘಾಟನೆ  ಶ್ರೀ ಮುಕುಂದ್   ಮಾನನೀಯ 

(ಸಹಸರ ಕಾರ್ಯವಾಹ ರಾಷ್ಟ್ರೀಯ ಸ್ವಯಂ ಸೇವಕ ಸಂಘ) ಇವರ ದಿವ್ಯ ಹಸ್ತಗಳಿಂದ ನೆರವೇರಲಿದೆ . ವಿವಿಧ  ಧಾರ್ಮಿಕ , ಸಂಸ್ಕ್ರತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು ಸದ್ಭಕ್ತ ರು ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಪುನೀತರಾಗಬೇಕಾಗಿ ಸಮಿತಿಯು ವಿನಂತಿಸಿಕೊಂಡಿದೆ . ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಪ್ರವೀಣ್ ಕುಮಾರ್ , ಪ್ರಧಾನ ಕಾರ್ಯದರ್ಶಿ ಎಂ . ಸತೀಶ್ ಪ್ರಭು , ಸುರೇಶ ಕಾಮತ್ , ಉಪಾಧ್ಯಕ್ಷರಾದ ಜೆ . ಕೆ ರಾವ್ , ಆನಂದ ಪಾಂಗಳ , ಕೆ ಪಿ ಟೈಲರ್ , ಅಭಿಷೇಕ್ ಭಂಡಾರಿ, ಕೇಶವ  ಸ್ಮ್ರತಿ ಸಂವರ್ಧನ ಸಮಿತಿಯ ವಿನೋದ್ ಶೆಣೈ , 

ರಘುವೀರ್ ಕಾಮತ್ , ಎಸ್. ಆರ್. ಕುಡ್ವ , ಗಣೇಶ್ ಪ್ರಸಾದ್ , ಜಯಪ್ರಕಾಶ್ ಮಂಗಳಾದೇವಿ, ಸ್ವಾಮಿಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು