3:33 PM Wednesday8 - July 2026
ಬ್ರೇಕಿಂಗ್ ನ್ಯೂಸ್
ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ…

ಇತ್ತೀಚಿನ ಸುದ್ದಿ

ಸಂಜಿತ್ ಎಸ್. ಅಂಚನ್‌ಗೆ ಸುರತ್ಕಲ್ ಎನ್‌ಐಟಿಕೆ ಪಿಎಚ್ ಡಿ ಪದವಿ

05/11/2023, 20:48

ಮಂಗಳೂರು(reporterkarnataka.com): ಮೈಸೂರಿನ ಎನ್‌ಐಇ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಸಂಜಿತ್ ಎಸ್. ಅಂಚನ್‌ ಅವರು ನವದೆಹಲಿಯ ಗೇಟ್ ಎಂಎಚ್‌ಆರ್‌ಡಿ ಸಂಸ್ಥೆಯ ಫೆಲೋಶಿಪ್‌ನೊಂದಿಗೆ ಸುರತ್ಕಲ್ ಎನ್‌ಐಟಿಕೆಯ ಕೆಮಿಕಲ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಪ್ರೊ.ಚಿಂತಾ ಶಂಕರರಾವ್ ಮಾರ್ಗದರ್ಶನದಲ್ಲಿ ಮಂಡಿಸಿದ ” Robust Multivariable Controller Design for an Activated Sludge Process” ಮಹಾಪ್ರಬಂಧಕ್ಕೆ ಸುರತ್ಕಲ್ ಎನ್‌ಐಟಿಕೆ ಪಿಎಚ್.ಡಿ ಪದವಿ ನೀಡಿ ಗೌರವಿಸಿದೆ.
ಇವರು ಮಂಗಳೂರು ವಿವಿಯ ನಿವೃತ್ತ ಅಧೀಕ್ಷಕ, ಕೊಣಾಜೆಯ ಶ್ರೀಧರ್ ಕೆ. ಮತ್ತು ತಾಲೂಕು ಪಂಚಾಯಿತಿ ಮಾಜಿ ಸದಸ್ಯೆ ಜಯಂತಿ ಪದ್ಮಾವತಿ ಎಸ್. ದಂಪತಿ ಪುತ್ರ. 2016 ರಲ್ಲಿ ಇವರು ಎಂಐಟಿ ಮಣಿಪಾಲದ ವಿದ್ಯಾರ್ಥಿ ವಿನಿಮಯ ಕಾರ್ಯಕ್ರಮದ ಮೂಲಕ ಯುಪಿಬಿ ವಿಶ್ವವಿದ್ಯಾಲಯ ಕೊಲಂಬಿಯಾದಲ್ಲಿ ಇಂಟರ್ನಿ ಆಗಿ ಸಂಶೋಧನೆಯಲ್ಲಿ ತೊಡಗಿಸಿಕೊಂಡಿದ್ದರು. ಭರತನಾಟ್ಯದಲ್ಲಿ ಸೀನಿಯರ್ ಗ್ರೇಡ್ ಪರೀಕ್ಷೆ, ರಾಷ್ಟ್ರಪತಿ ಎ.ಪಿ.ಜೆ.ಅಬ್ದುಲ್ ಕಲಾಂ ಅವರಿಂದ ಭಾರತ್ ಸ್ಕೌಟ್ಸ್ ಮತ್ತು ಗೈಡ್‌ಗಾಗಿ ಪ್ರತಿಷ್ಠಿತ ರಾಷ್ಟ್ರಪತಿ ಪ್ರಶಸ್ತಿಯನ್ನೂ ಪಡೆದಿದ್ದಾರೆ. ಸುರತ್ಕಲ್ ಎನ್‌ಐಟಿಕೆಯಲ್ಲಿ ಶನಿವಾರ ನಡೆದ 21ನೇ ಘಟಿಕೋತ್ಸವದಲ್ಲಿ ಪದವಿ ಸ್ವೀಕರಿಸಿದರು. ರಕ್ಷಣಾ ಸಚಿವರ ಮಾಜಿ ವೈಜ್ಞಾನಿಕ ಸಲಹೆಗಾರ, ಭಾರತದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್‌ಡಿಒ) ಅಧ್ಯಕ್ಷ ಡಾ.ಸತೀಶ್ ರೆಡ್ಡಿ. ಸಿಎಸ್‌ಐಆರ್- ಎನ್‌ಐಐಎಸ್‌ಟಿ ನಿರ್ದೇಶಕ ಡಾ.ಸಿ.ಆನಂದ ರಾಮಕೃಷ್ಣನ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು