11:24 PM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಸಂಜಿತ್ ಎಸ್. ಅಂಚನ್‌ಗೆ ಸುರತ್ಕಲ್ ಎನ್‌ಐಟಿಕೆ ಪಿಎಚ್ ಡಿ ಪದವಿ

05/11/2023, 20:48

ಮಂಗಳೂರು(reporterkarnataka.com): ಮೈಸೂರಿನ ಎನ್‌ಐಇ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಸಂಜಿತ್ ಎಸ್. ಅಂಚನ್‌ ಅವರು ನವದೆಹಲಿಯ ಗೇಟ್ ಎಂಎಚ್‌ಆರ್‌ಡಿ ಸಂಸ್ಥೆಯ ಫೆಲೋಶಿಪ್‌ನೊಂದಿಗೆ ಸುರತ್ಕಲ್ ಎನ್‌ಐಟಿಕೆಯ ಕೆಮಿಕಲ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಪ್ರೊ.ಚಿಂತಾ ಶಂಕರರಾವ್ ಮಾರ್ಗದರ್ಶನದಲ್ಲಿ ಮಂಡಿಸಿದ ” Robust Multivariable Controller Design for an Activated Sludge Process” ಮಹಾಪ್ರಬಂಧಕ್ಕೆ ಸುರತ್ಕಲ್ ಎನ್‌ಐಟಿಕೆ ಪಿಎಚ್.ಡಿ ಪದವಿ ನೀಡಿ ಗೌರವಿಸಿದೆ.
ಇವರು ಮಂಗಳೂರು ವಿವಿಯ ನಿವೃತ್ತ ಅಧೀಕ್ಷಕ, ಕೊಣಾಜೆಯ ಶ್ರೀಧರ್ ಕೆ. ಮತ್ತು ತಾಲೂಕು ಪಂಚಾಯಿತಿ ಮಾಜಿ ಸದಸ್ಯೆ ಜಯಂತಿ ಪದ್ಮಾವತಿ ಎಸ್. ದಂಪತಿ ಪುತ್ರ. 2016 ರಲ್ಲಿ ಇವರು ಎಂಐಟಿ ಮಣಿಪಾಲದ ವಿದ್ಯಾರ್ಥಿ ವಿನಿಮಯ ಕಾರ್ಯಕ್ರಮದ ಮೂಲಕ ಯುಪಿಬಿ ವಿಶ್ವವಿದ್ಯಾಲಯ ಕೊಲಂಬಿಯಾದಲ್ಲಿ ಇಂಟರ್ನಿ ಆಗಿ ಸಂಶೋಧನೆಯಲ್ಲಿ ತೊಡಗಿಸಿಕೊಂಡಿದ್ದರು. ಭರತನಾಟ್ಯದಲ್ಲಿ ಸೀನಿಯರ್ ಗ್ರೇಡ್ ಪರೀಕ್ಷೆ, ರಾಷ್ಟ್ರಪತಿ ಎ.ಪಿ.ಜೆ.ಅಬ್ದುಲ್ ಕಲಾಂ ಅವರಿಂದ ಭಾರತ್ ಸ್ಕೌಟ್ಸ್ ಮತ್ತು ಗೈಡ್‌ಗಾಗಿ ಪ್ರತಿಷ್ಠಿತ ರಾಷ್ಟ್ರಪತಿ ಪ್ರಶಸ್ತಿಯನ್ನೂ ಪಡೆದಿದ್ದಾರೆ. ಸುರತ್ಕಲ್ ಎನ್‌ಐಟಿಕೆಯಲ್ಲಿ ಶನಿವಾರ ನಡೆದ 21ನೇ ಘಟಿಕೋತ್ಸವದಲ್ಲಿ ಪದವಿ ಸ್ವೀಕರಿಸಿದರು. ರಕ್ಷಣಾ ಸಚಿವರ ಮಾಜಿ ವೈಜ್ಞಾನಿಕ ಸಲಹೆಗಾರ, ಭಾರತದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್‌ಡಿಒ) ಅಧ್ಯಕ್ಷ ಡಾ.ಸತೀಶ್ ರೆಡ್ಡಿ. ಸಿಎಸ್‌ಐಆರ್- ಎನ್‌ಐಐಎಸ್‌ಟಿ ನಿರ್ದೇಶಕ ಡಾ.ಸಿ.ಆನಂದ ರಾಮಕೃಷ್ಣನ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು