5:21 PM Sunday1 - February 2026
ಬ್ರೇಕಿಂಗ್ ನ್ಯೂಸ್
ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಸಂಕಷ್ಟಕ್ಕೀಡಾದವರ ನೆರವಿಗೆ ಧಾವಿಸುವ ಶ್ರೀದೇವಿ ನಾಯಕ್ ಬಗ್ಗೆ ಚಲನಚಿತ್ರ ನಟ, ನಿರ್ದೇಶಕರಿಂದ ಮೆಚ್ಚುಗೆ

27/05/2021, 18:33

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ
info.reporterkarnataka@gmail.com

ರಾಯಚೂರು ಜಿಲ್ಲೆಯಲ್ಲಿ ಸಂಕಷ್ಟ ಸಿಲುಕಿರುವ ಮಂಗಳ ಮುಖಿಯರು, ಕೂಲಿ ಕಾರ್ಮಿಕರು ಹಾಗೂ ಬಡವರಿಗೆ ಅನ್ನದಾನ, ಒಂದು ದಿನದ ಕೂಲಿ, 

ಜತೆಗೆ ಸ್ಯಾನಿಟೈಸರ್, ಮಾಸ್ಕ್ ನೀಡುವ ಶ್ರೀದೇವಿ ನಾಯಕ್ ಅವರ ಕಾಳಜಿ ಬಗ್ಗೆ ಬೆಂಗಳೂರಿನ ಚಲನಚಿತ್ರ ನಟ, ನಿರ್ದೇಶಕ ಡಿಂಗ್ರೀ ನರೇಶ್ ಮೆಚ್ಚುಗೆ ಪಡಿಸಿದ್ದಾರೆ.

ಸರಕಾರ ಮಾಡಲಾರದಂಥ ಕೆಲಸವನ್ನು ಒಬ್ಬ ಮಹಿಳಾ ಸಮಾಜ ಸೇವಕಿ ಮಾಡುತ್ತಿದ್ದಾರೆ. ಬಡ ಬಗ್ಗರಿಗೆ, ಕೂಲಿ ಕಾರ್ಮಿಕರಿಗೆ ಸ್ಪಂದಿಸುವುದು ಒಂದು ಉತ್ತಮವಾದ ಜನರ ಸೇವೆ. ಅವರು ನಿಮ್ಮನ್ನು ಎಂದಿಗೂ ಮರೆಯುವುದಿಲ್ಲ. ಇಂಥ ಸಮಾಜಸೇವೆ ಮಾಡುವ ನಿಮ್ಮನ್ನು ದಿನಾ ಸ್ಮರಿಸುವ ಕಾಲ ಬರುತ್ತದೆ ಎಂದು ಹೇಳಿದ್ದಾರೆ.

 ಶ್ರೀದೇವಿ ನಾಯಕ್ ಅವರು ಬಾಲ್ಯದಿಂದಲೂ ಸಮಾಜಸೇವೆ ಮಾಡುತ್ತಾ ಕ್ಷೇತ್ರದಲ್ಲಿ ಒಳ್ಳೆಯ ಹೆಸರು ಮಾಡಿದ್ದಾರೆ. ವೆಂಕಟೇಶ್ ನಾಯಕ್ ಫೌಂಡೇಶನ್ ವತಿಯಿಂದ ಸಂಕಷ್ಟದಲ್ಲಿರುವವರಿಗೆ ಆಸರೆಯಾಗಿದ್ದಾರೆ. ಅವರ ಸೇವೆ ಸಮಾಜಕ್ಕೆ ಅದ್ಭುತವಾದ ಕೊಡುಗೆ ಎಂದು ಚಲನಚಿತ್ರ ನಟ ಡಿಂಗ್ರೀ ನರೇಶ್ ಹೊಗಳಿದ್ದಾರೆ.

ಡಿಂಗ್ರೀ ನರೇಶ್ ಅವರು ರಾಯಚೂರಿನ ಆಶಾಪುರ್ ಗ್ರಾಮದವರು. ಬೆಂಗಳೂರಿನಲ್ಲಿ ಅವರು ಮಾಡಿದ ಚಲನಚಿತ್ರಗಳು ಕೇರಾಫ್ ಪುಟ್ಟಣ್ಣ ಪಾರ್ಟ್ ಟು, ಪುಟ್ಟರಾಜ್ ಲವರ್ ಶಶಿಕಲಾ, ಬೆಲ್ ಬಟನ್, ಪೂರ್ಣ ಸತ್ಯ , ದೇವಗಿರಿ ರಹಸ್ಯ, ಭಜರಂಗಿ 2,

ಅವಳು ಲೈಫ್ ಸತ್ಯ ಸೇರಿದಂತೆ ಹಲವರು ಚಲನಚಿತ್ರಗಳ ನಟಿಸಿ, ನಿರ್ದೇಶಕ ನೀಡಿದ್ದಾರೆ. ಜನಬಲ ಪತ್ರಿಕೆಯ ಸಂಪಾದಕ ಅಂಬಣ್ಣ,   ಚಿಕ್ಕಂದಿನಿಂದಲೇ ಡಿಂಗ್ರೀ ನರೇಶ್ ಅವರು ಹೋರಾಟ ಮಾಡುವುದರ ಮುಖಾಂತರ ಸಮಾಜದ ಒಳ್ಳೆಯ ಹೆಸರು ಮಾಡಿದ್ದಾರೆ. ಅಲ್ಲದೆ ಸತ್ಯ ಧ್ವನಿ ಪತ್ರಿಕೆ ಸಂಪಾದಕ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅವರ ಆತ್ಮೀಯ ಸ್ನೇಹಿತರು. ನಮ್ಮ ಭಾಗದ ಸಮಾಜ ಸೇವೆ ಮಾಡುವ ಶ್ರೀದೇವಿ ನಾಯಕ್ ಅವರ ಸೇವೆಯನ್ನು ಗುರುತಿಸಿ ಚಲನಚಿತ್ರ ನಟರು ಅವರಿಗೆ ಶುಭ ಹಾರೈಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು