3:25 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಸಂಕಷ್ಟಕ್ಕೀಡಾದವರ ನೆರವಿಗೆ ಧಾವಿಸುವ ಶ್ರೀದೇವಿ ನಾಯಕ್ ಬಗ್ಗೆ ಚಲನಚಿತ್ರ ನಟ, ನಿರ್ದೇಶಕರಿಂದ ಮೆಚ್ಚುಗೆ

27/05/2021, 18:33

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ
info.reporterkarnataka@gmail.com

ರಾಯಚೂರು ಜಿಲ್ಲೆಯಲ್ಲಿ ಸಂಕಷ್ಟ ಸಿಲುಕಿರುವ ಮಂಗಳ ಮುಖಿಯರು, ಕೂಲಿ ಕಾರ್ಮಿಕರು ಹಾಗೂ ಬಡವರಿಗೆ ಅನ್ನದಾನ, ಒಂದು ದಿನದ ಕೂಲಿ, 

ಜತೆಗೆ ಸ್ಯಾನಿಟೈಸರ್, ಮಾಸ್ಕ್ ನೀಡುವ ಶ್ರೀದೇವಿ ನಾಯಕ್ ಅವರ ಕಾಳಜಿ ಬಗ್ಗೆ ಬೆಂಗಳೂರಿನ ಚಲನಚಿತ್ರ ನಟ, ನಿರ್ದೇಶಕ ಡಿಂಗ್ರೀ ನರೇಶ್ ಮೆಚ್ಚುಗೆ ಪಡಿಸಿದ್ದಾರೆ.

ಸರಕಾರ ಮಾಡಲಾರದಂಥ ಕೆಲಸವನ್ನು ಒಬ್ಬ ಮಹಿಳಾ ಸಮಾಜ ಸೇವಕಿ ಮಾಡುತ್ತಿದ್ದಾರೆ. ಬಡ ಬಗ್ಗರಿಗೆ, ಕೂಲಿ ಕಾರ್ಮಿಕರಿಗೆ ಸ್ಪಂದಿಸುವುದು ಒಂದು ಉತ್ತಮವಾದ ಜನರ ಸೇವೆ. ಅವರು ನಿಮ್ಮನ್ನು ಎಂದಿಗೂ ಮರೆಯುವುದಿಲ್ಲ. ಇಂಥ ಸಮಾಜಸೇವೆ ಮಾಡುವ ನಿಮ್ಮನ್ನು ದಿನಾ ಸ್ಮರಿಸುವ ಕಾಲ ಬರುತ್ತದೆ ಎಂದು ಹೇಳಿದ್ದಾರೆ.

 ಶ್ರೀದೇವಿ ನಾಯಕ್ ಅವರು ಬಾಲ್ಯದಿಂದಲೂ ಸಮಾಜಸೇವೆ ಮಾಡುತ್ತಾ ಕ್ಷೇತ್ರದಲ್ಲಿ ಒಳ್ಳೆಯ ಹೆಸರು ಮಾಡಿದ್ದಾರೆ. ವೆಂಕಟೇಶ್ ನಾಯಕ್ ಫೌಂಡೇಶನ್ ವತಿಯಿಂದ ಸಂಕಷ್ಟದಲ್ಲಿರುವವರಿಗೆ ಆಸರೆಯಾಗಿದ್ದಾರೆ. ಅವರ ಸೇವೆ ಸಮಾಜಕ್ಕೆ ಅದ್ಭುತವಾದ ಕೊಡುಗೆ ಎಂದು ಚಲನಚಿತ್ರ ನಟ ಡಿಂಗ್ರೀ ನರೇಶ್ ಹೊಗಳಿದ್ದಾರೆ.

ಡಿಂಗ್ರೀ ನರೇಶ್ ಅವರು ರಾಯಚೂರಿನ ಆಶಾಪುರ್ ಗ್ರಾಮದವರು. ಬೆಂಗಳೂರಿನಲ್ಲಿ ಅವರು ಮಾಡಿದ ಚಲನಚಿತ್ರಗಳು ಕೇರಾಫ್ ಪುಟ್ಟಣ್ಣ ಪಾರ್ಟ್ ಟು, ಪುಟ್ಟರಾಜ್ ಲವರ್ ಶಶಿಕಲಾ, ಬೆಲ್ ಬಟನ್, ಪೂರ್ಣ ಸತ್ಯ , ದೇವಗಿರಿ ರಹಸ್ಯ, ಭಜರಂಗಿ 2,

ಅವಳು ಲೈಫ್ ಸತ್ಯ ಸೇರಿದಂತೆ ಹಲವರು ಚಲನಚಿತ್ರಗಳ ನಟಿಸಿ, ನಿರ್ದೇಶಕ ನೀಡಿದ್ದಾರೆ. ಜನಬಲ ಪತ್ರಿಕೆಯ ಸಂಪಾದಕ ಅಂಬಣ್ಣ,   ಚಿಕ್ಕಂದಿನಿಂದಲೇ ಡಿಂಗ್ರೀ ನರೇಶ್ ಅವರು ಹೋರಾಟ ಮಾಡುವುದರ ಮುಖಾಂತರ ಸಮಾಜದ ಒಳ್ಳೆಯ ಹೆಸರು ಮಾಡಿದ್ದಾರೆ. ಅಲ್ಲದೆ ಸತ್ಯ ಧ್ವನಿ ಪತ್ರಿಕೆ ಸಂಪಾದಕ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅವರ ಆತ್ಮೀಯ ಸ್ನೇಹಿತರು. ನಮ್ಮ ಭಾಗದ ಸಮಾಜ ಸೇವೆ ಮಾಡುವ ಶ್ರೀದೇವಿ ನಾಯಕ್ ಅವರ ಸೇವೆಯನ್ನು ಗುರುತಿಸಿ ಚಲನಚಿತ್ರ ನಟರು ಅವರಿಗೆ ಶುಭ ಹಾರೈಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು