3:49 PM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಸಂಕಷ್ಟಕ್ಕೀಡಾದವರ ನೆರವಿಗೆ ಧಾವಿಸುವ ಶ್ರೀದೇವಿ ನಾಯಕ್ ಬಗ್ಗೆ ಚಲನಚಿತ್ರ ನಟ, ನಿರ್ದೇಶಕರಿಂದ ಮೆಚ್ಚುಗೆ

27/05/2021, 18:33

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ
info.reporterkarnataka@gmail.com

ರಾಯಚೂರು ಜಿಲ್ಲೆಯಲ್ಲಿ ಸಂಕಷ್ಟ ಸಿಲುಕಿರುವ ಮಂಗಳ ಮುಖಿಯರು, ಕೂಲಿ ಕಾರ್ಮಿಕರು ಹಾಗೂ ಬಡವರಿಗೆ ಅನ್ನದಾನ, ಒಂದು ದಿನದ ಕೂಲಿ, 

ಜತೆಗೆ ಸ್ಯಾನಿಟೈಸರ್, ಮಾಸ್ಕ್ ನೀಡುವ ಶ್ರೀದೇವಿ ನಾಯಕ್ ಅವರ ಕಾಳಜಿ ಬಗ್ಗೆ ಬೆಂಗಳೂರಿನ ಚಲನಚಿತ್ರ ನಟ, ನಿರ್ದೇಶಕ ಡಿಂಗ್ರೀ ನರೇಶ್ ಮೆಚ್ಚುಗೆ ಪಡಿಸಿದ್ದಾರೆ.

ಸರಕಾರ ಮಾಡಲಾರದಂಥ ಕೆಲಸವನ್ನು ಒಬ್ಬ ಮಹಿಳಾ ಸಮಾಜ ಸೇವಕಿ ಮಾಡುತ್ತಿದ್ದಾರೆ. ಬಡ ಬಗ್ಗರಿಗೆ, ಕೂಲಿ ಕಾರ್ಮಿಕರಿಗೆ ಸ್ಪಂದಿಸುವುದು ಒಂದು ಉತ್ತಮವಾದ ಜನರ ಸೇವೆ. ಅವರು ನಿಮ್ಮನ್ನು ಎಂದಿಗೂ ಮರೆಯುವುದಿಲ್ಲ. ಇಂಥ ಸಮಾಜಸೇವೆ ಮಾಡುವ ನಿಮ್ಮನ್ನು ದಿನಾ ಸ್ಮರಿಸುವ ಕಾಲ ಬರುತ್ತದೆ ಎಂದು ಹೇಳಿದ್ದಾರೆ.

 ಶ್ರೀದೇವಿ ನಾಯಕ್ ಅವರು ಬಾಲ್ಯದಿಂದಲೂ ಸಮಾಜಸೇವೆ ಮಾಡುತ್ತಾ ಕ್ಷೇತ್ರದಲ್ಲಿ ಒಳ್ಳೆಯ ಹೆಸರು ಮಾಡಿದ್ದಾರೆ. ವೆಂಕಟೇಶ್ ನಾಯಕ್ ಫೌಂಡೇಶನ್ ವತಿಯಿಂದ ಸಂಕಷ್ಟದಲ್ಲಿರುವವರಿಗೆ ಆಸರೆಯಾಗಿದ್ದಾರೆ. ಅವರ ಸೇವೆ ಸಮಾಜಕ್ಕೆ ಅದ್ಭುತವಾದ ಕೊಡುಗೆ ಎಂದು ಚಲನಚಿತ್ರ ನಟ ಡಿಂಗ್ರೀ ನರೇಶ್ ಹೊಗಳಿದ್ದಾರೆ.

ಡಿಂಗ್ರೀ ನರೇಶ್ ಅವರು ರಾಯಚೂರಿನ ಆಶಾಪುರ್ ಗ್ರಾಮದವರು. ಬೆಂಗಳೂರಿನಲ್ಲಿ ಅವರು ಮಾಡಿದ ಚಲನಚಿತ್ರಗಳು ಕೇರಾಫ್ ಪುಟ್ಟಣ್ಣ ಪಾರ್ಟ್ ಟು, ಪುಟ್ಟರಾಜ್ ಲವರ್ ಶಶಿಕಲಾ, ಬೆಲ್ ಬಟನ್, ಪೂರ್ಣ ಸತ್ಯ , ದೇವಗಿರಿ ರಹಸ್ಯ, ಭಜರಂಗಿ 2,

ಅವಳು ಲೈಫ್ ಸತ್ಯ ಸೇರಿದಂತೆ ಹಲವರು ಚಲನಚಿತ್ರಗಳ ನಟಿಸಿ, ನಿರ್ದೇಶಕ ನೀಡಿದ್ದಾರೆ. ಜನಬಲ ಪತ್ರಿಕೆಯ ಸಂಪಾದಕ ಅಂಬಣ್ಣ,   ಚಿಕ್ಕಂದಿನಿಂದಲೇ ಡಿಂಗ್ರೀ ನರೇಶ್ ಅವರು ಹೋರಾಟ ಮಾಡುವುದರ ಮುಖಾಂತರ ಸಮಾಜದ ಒಳ್ಳೆಯ ಹೆಸರು ಮಾಡಿದ್ದಾರೆ. ಅಲ್ಲದೆ ಸತ್ಯ ಧ್ವನಿ ಪತ್ರಿಕೆ ಸಂಪಾದಕ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅವರ ಆತ್ಮೀಯ ಸ್ನೇಹಿತರು. ನಮ್ಮ ಭಾಗದ ಸಮಾಜ ಸೇವೆ ಮಾಡುವ ಶ್ರೀದೇವಿ ನಾಯಕ್ ಅವರ ಸೇವೆಯನ್ನು ಗುರುತಿಸಿ ಚಲನಚಿತ್ರ ನಟರು ಅವರಿಗೆ ಶುಭ ಹಾರೈಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು