10:55 AM Monday22 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಸಂಕಷ್ಟದಲ್ಲಿರುವ ಜನರಿಗೆ ನೆರವಾಗುತ್ತಿರುವ ಅಭಿನಂದನಾ ಶಿಕ್ಷಣ ಸಂಸ್ಥೆಗೆ ಗಚ್ಚಿನ ಹಿರೇಮಠದ ವರ ರುದ್ರಮುನಿ ಶಿವಾಚಾರ್ಯರ ಮೆಚ್ಚಿಗೆ

01/06/2021, 17:30

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ 

info.reporterkarnataka@gmail.com

ಕೋವಿಡ್ ಸಮಯದಲ್ಲಿ ಬಡವರಿಗೆ, ಕೂಲಿ ಕಾರ್ಮಿಕರಿಗೆ ಹಾಗೂ ಸಂಕಷ್ಟದಲ್ಲಿರುವ ಜನರಿಗೆ ಸ್ಪಂದಿಸಲು ಮುಂದಾಗಿರುವ ಅಭಿನಂದನ್ ಶಿಕ್ಷಣ ಸಂಸ್ಥೆಗೆ ಮಸ್ಕಿ ವರ ರುದ್ರಮುನಿ ಶಿವಾಚಾರ್ಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

 ಇಂಥ ಕೆಲಸ ಮಾಡುವುದು ಪುಣ್ಯದ ಕೆಲಸ ವೆಂದು ಹೇಳಿದ ಸ್ವಾಮೀಜಿ, ಜನರ ಹಸಿವನ್ನು ನೀಗಿಸುವ ಹಾದಿಯಲ್ಲಿ ಅಭಿನಂದನ್ ಸಂಸ್ಥೆಯ ರಾಮಣ್ಣ ಹಂಪರಗುಂದಿ ವಿನೂತನ ಹೆಜ್ಜೆ ಇಟ್ಟಿದ್ದಾರೆ ಎಂದು ಶ್ಲಾಘಿಸಿದರು.

ಮಸ್ಕಿ ಪಟ್ಟಣದಲ್ಲಿ ಕೋವಿಡ್ 2ನೇ ಅಲೆಯ ಕಾರಣದಿಂದಾಗಿ ಮಾಡಲಾಗಿರುವ ಲಾಕ್ ಡೌನ್ ನಿಂದಾಗಿ ತೊಂದರೆಗೀಡಾದ ಕಡು ಬಡ ಕುಟುಂಬಗಳಿಗೆ ನೆರವಾಗಲು ಅಭಿನಂದನ್ ಶಿಕ್ಷಣ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯು ಅಭಿಯಾನವನ್ನು ಆರಂಭಿಸಿದ್ದು, ಈ ಅಭಿಯಾನದ ಅಡಿಯಲ್ಲಿ ಮಸ್ಕಿ ಪಟ್ಟಣದ 9 ಮತ್ತು 16 ನೇ ವಾರ್ಡಿನಲ್ಲಿ ಭಾನುವಾರದಂದು 60 ಕ್ಕೂ ಅಧಿಕ ಕುಟುಂಬಗಳಿಗೆ ಆಹಾರದ ಕಿಟ್ ಗಳನ್ನು ವಿತರಿಸಿದೆ. ಈ ಸಂದರ್ಭದಲ್ಲಿ ಮಾತನಾಡಿದ ಉದ್ಯಮಿ ನಾಗರಾಜ ಶೆಟ್ಟಿ, ಅಭಿನಂದನ್ ಸಂಸ್ಥೆಯು ಬಡ ಕುಟುಂಬಗಳಿಗೆ ಆಹಾರವನ್ನು ಒದಗಿಸುವುದರ ಜೊತೆಗೆ ಔಷಧಗಳನ್ನು ನೀಡಿ ನಿಮ್ಮೊಂದಿಗೆ ನಾವಿದ್ದೇವೆ ಎಂದು ಸಾರ್ವಜನಿಕರಲ್ಲಿ ಧೈರ್ಯ ತುಂಬುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂದರು.  

ಸಾಮಾಜಿಕ ಸಾಮರಸ್ಯವನ್ನು ಬೆಳೆಸುವ ಕಾರ್ಯವನ್ನು ಮಾಡುತ್ತಿರುವುದು ಒಂದು ಉತ್ತಮ ಬೆಳವಣಿಗೆಯಾಗಿದೆ ಎಂದು ನಾಗರಾಜ ಶೆಟ್ಟಿ ಹೇಳಿದರು. 

ಇದೇ ಸಂದರ್ಭದಲ್ಲಿ  ಸಿದ್ದಪ್ಪ ಹಳ್ಳಿ, ಶಿಕ್ಷಕರಾದ ಕಳಕಪ್ಪ ಹಾದಿಮನಿ, ಅಭಿನಂದನ್ ಸಂಸ್ಥೆಯ ಕಾರ್ಯದರ್ಶಿಗಳಾದ ರಾಮಣ್ಣ ಹಂಪರಗುಂದಿ, ಸಂಸ್ಥೆಯ ಸದಸ್ಯರಾದ ಶೃತಿ ಹಂಪರಗುಂದಿ, ರೇಣುಕಾ ಹಂಪರಗುಂದಿ, ಬಸವರಾಜ್ ಸ್ವಾಮಿ, ರವಿಕುಮಾರ್ ಸ್ಥಾವರಮಠ, ಮಲ್ಲಿಕಾರ್ಜುನ ಬಡಿಗೇರ್, ಅಮೀತ್ ಕುಮಾರ್ ಪುಟ್ಟಿ, ಕಾರ್ತಿಕ್ ಜೋಗೀನ್, ಕೀಶೋರ್, ಪವನ್ ಮುಕ್ತಿ ಹಾಗೂ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು