4:24 AM Saturday14 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

ಸಂಕಷ್ಟದಲ್ಲಿರುವ 18 ಮೀರಿದ ಎಲ್ಲ ಕಲಾವಿದರಿಗೆ ಸರಕಾರ ನೆರವು ನೀಡಲಿ: ನಟ, ರಂಗ ನಿರ್ದೇಶಕ ಡಿಂಗ್ರೀ ನರೇಶ್ 

31/05/2021, 18:13

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಕೋವಿಡ್ ಸಂಕಷ್ಟದಲ್ಲಿರುವ ಕಲಾವಿದರಿಗೆ ಸರಕಾರ ಆರ್ಥಿಕ ನೆರವು ನೀಡಲು ಮುಂದಾಗಿರುವುದು ಶ್ಲಾಘನೀಯ. ಆದರೆ ವಯಸ್ಸಿನ ಮಿತಿ ಹೇರುವುದು ಬೇಡ. 18 ಮೀರಿದ ಎಲ್ಲ ಕಲಾವಿದರಿಗೂ ನೆರವು ಒದಗಿಸಬೇಕೆಂದು   ನಟ, ನಿರ್ದೇಶಕ ಡಿಂಗ್ರೀ ನರೇಶ್ಮನವಿ ಮಾಡಿದ್ದಾರೆ.

ಕಲಾವಿದರು ಆರ್ಥಿಕ ನೆರವಿಗಾಗಿ ಅರ್ಜಿ ಹಾಕಲು ವಿಧಿಸಿರುವ ನಿಬಂಧನೆಗಳು ಅವೈಜ್ಞಾನಿಕವಾಗಿದ್ದು, ವಯಸ್ಸಿನ ಮಿತಿ 35 ವರ್ಷ ಮೀರಿರಬೇಕೆಂದು ನಿಯಮ ರೂಪಿಸಿರುವುದರಿಂದ ಈಗಾಗಲೇ ಸಂಕಷ್ಟದಲ್ಲಿರುವ ಯುವ ಕಲಾವಿದರಿಗೆ ಅನ್ಯಾಯವಾಗುತ್ತದೆ. ಯುವಕರನ್ನು ಸರಕಾರ ಕಡೆಗಣಿಸಿದಂತೆ ಬಿಂಬಿತವಾಗುತ್ತದೆ. 

ಸರಕಾರ ನೀಡಲು ನಿರ್ಧರಿಸಿರುವ ಆರ್ಥಿಕ ನೆರವಿನ ಮೊತ್ತ ಅತ್ಯಲ್ಪವಾಗಿದ್ದು, ಪ್ರಸ್ತುತ ಕಾಲಘಟ್ಟದಲ್ಲಿ ಜೀವನ ನಿರ್ವಹಿಸಲು ಕಲಾವಿದರಿಗೆ ಕಷ್ಟವಾಗುತ್ತದೆ. ಹಾಗಾಗಿ ವಯಸ್ಸಿನ ಮಿತಿಯನ್ನು ಸಡಿಲಗೊಳಿಸಿ, ಆರ್ಥಿಕ ನೆರವಿನ ಮೊತ್ತವನ್ನು ಅಧಿಕ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಅರ್ಜಿ ಹಾಕಲು ಸರ್ಕಾರ ನಿಗದಿಪಡಿಸಿರುವ ಕಡೆಯ ದಿನಾಂಕದ ಗಡುವು ಅಲ್ಪಾವಧಿಯಾಗಿದ್ದು, ಗ್ರಾಮೀಣ ಭಾಗದವರಿಗೆ ಸಾಕಷ್ಟು ತೊಂದರೆಯಾಗುತ್ತಿದ್ದು, ಗಡುವನ್ನು ಕನಿಷ್ಠ ಒಂದು ವಾರಕ್ಕಾದರೂ ಮುಂದೂಡಬೇಕು. ಇದು ನಮ್ಮೆಲ್ಲರ ಒಕ್ಕೊರಲಿನ ಒತ್ತಾಯವಾಗಿದ್ದು ಕೂಡಲೇ ಈ ನಿಟ್ಟಿನಲ್ಲಿ ಸರ್ಕಾರ ಯೋಚಿಸಬೇಕೆಂದು ವಿನಂತಿಸಿಕೊಳ್ಳುತ್ತೇವೆ. ಇಲ್ಲವಾದಲ್ಲಿ ಯುವರಂಗ ಸಮುದಾಯ ಭವಿಷ್ಯದಲ್ಲಿ ಈ ನಿರ್ಧಾರದ ವಿರುದ್ಧ ರಾಜ್ಯವ್ಯಾಪಿ ಚಳುವಳಿ ನಡೆಸಬೇಕಾಗುತ್ತದೆಂಬ ಎಚ್ಚರಿಕೆಯನ್ನೂ ಸಹ ನೀಡಬೇಕಾಗುತ್ತದೆ ಎಂದರು.

ಈಗಾಗಲೇ ಯುವ ರಂಗಕರ್ಮಿಗಳು ಸೋಷಿಯಲ್ ಮೀಡಿಯಾ ಮೂಲಕ ಚಳುವಳಿ‌ ಪ್ರಾರಂಭ ಮಾಡಿದ್ದಾರೆ. ದಯ ಮಾಡಿ‌ ಈ ನಿಟ್ಟಿನಲ್ಲಿ ನೀವು ಸರಕಾರದ ಜತೆ ಮಾತಾಡಿ ಯುವಕರನ್ನು ಗಮನದಲ್ಲಿಟ್ಟುಕೊಂಡು ಅರ್ಥಿಕ ನೆರವು ನೀಡಿ ಎಂದು ರಂಗ ನಿರ್ದೇಶಕ, ಸಿನಿಮಾ ನಟ ಡಿಂಗ್ರಿ ನರೇಶ್ ಅವರು ಸಂಸದರಾದ ರಾಜ ಅಮರೇಶ್ವರ ನಾಯಕ್ ಅವರ ಗಮನಕ್ಕೂ ತಂದಿದ್ದಾರೆ. ಯುವ ಕಲಾವಿದರ ಪರವಾಗಿ ನಾನು ಒತ್ತಡ ತರುತ್ತೇನೆ ಎಂದು ಸಂಸದರು ಕೂಡ ಭರವಸೆ ನೀಡಿದ್ದಾರೆ ಎಂದು ಡಿಂಗ್ರೀ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು