5:16 PM Saturday19 - September 2026
ಬ್ರೇಕಿಂಗ್ ನ್ಯೂಸ್
*ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ…

ಇತ್ತೀಚಿನ ಸುದ್ದಿ

ಸಂಕಷ್ಟದಲ್ಲಿರುವ 18 ಮೀರಿದ ಎಲ್ಲ ಕಲಾವಿದರಿಗೆ ಸರಕಾರ ನೆರವು ನೀಡಲಿ: ನಟ, ರಂಗ ನಿರ್ದೇಶಕ ಡಿಂಗ್ರೀ ನರೇಶ್ 

31/05/2021, 18:13

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಕೋವಿಡ್ ಸಂಕಷ್ಟದಲ್ಲಿರುವ ಕಲಾವಿದರಿಗೆ ಸರಕಾರ ಆರ್ಥಿಕ ನೆರವು ನೀಡಲು ಮುಂದಾಗಿರುವುದು ಶ್ಲಾಘನೀಯ. ಆದರೆ ವಯಸ್ಸಿನ ಮಿತಿ ಹೇರುವುದು ಬೇಡ. 18 ಮೀರಿದ ಎಲ್ಲ ಕಲಾವಿದರಿಗೂ ನೆರವು ಒದಗಿಸಬೇಕೆಂದು   ನಟ, ನಿರ್ದೇಶಕ ಡಿಂಗ್ರೀ ನರೇಶ್ಮನವಿ ಮಾಡಿದ್ದಾರೆ.

ಕಲಾವಿದರು ಆರ್ಥಿಕ ನೆರವಿಗಾಗಿ ಅರ್ಜಿ ಹಾಕಲು ವಿಧಿಸಿರುವ ನಿಬಂಧನೆಗಳು ಅವೈಜ್ಞಾನಿಕವಾಗಿದ್ದು, ವಯಸ್ಸಿನ ಮಿತಿ 35 ವರ್ಷ ಮೀರಿರಬೇಕೆಂದು ನಿಯಮ ರೂಪಿಸಿರುವುದರಿಂದ ಈಗಾಗಲೇ ಸಂಕಷ್ಟದಲ್ಲಿರುವ ಯುವ ಕಲಾವಿದರಿಗೆ ಅನ್ಯಾಯವಾಗುತ್ತದೆ. ಯುವಕರನ್ನು ಸರಕಾರ ಕಡೆಗಣಿಸಿದಂತೆ ಬಿಂಬಿತವಾಗುತ್ತದೆ. 

ಸರಕಾರ ನೀಡಲು ನಿರ್ಧರಿಸಿರುವ ಆರ್ಥಿಕ ನೆರವಿನ ಮೊತ್ತ ಅತ್ಯಲ್ಪವಾಗಿದ್ದು, ಪ್ರಸ್ತುತ ಕಾಲಘಟ್ಟದಲ್ಲಿ ಜೀವನ ನಿರ್ವಹಿಸಲು ಕಲಾವಿದರಿಗೆ ಕಷ್ಟವಾಗುತ್ತದೆ. ಹಾಗಾಗಿ ವಯಸ್ಸಿನ ಮಿತಿಯನ್ನು ಸಡಿಲಗೊಳಿಸಿ, ಆರ್ಥಿಕ ನೆರವಿನ ಮೊತ್ತವನ್ನು ಅಧಿಕ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಅರ್ಜಿ ಹಾಕಲು ಸರ್ಕಾರ ನಿಗದಿಪಡಿಸಿರುವ ಕಡೆಯ ದಿನಾಂಕದ ಗಡುವು ಅಲ್ಪಾವಧಿಯಾಗಿದ್ದು, ಗ್ರಾಮೀಣ ಭಾಗದವರಿಗೆ ಸಾಕಷ್ಟು ತೊಂದರೆಯಾಗುತ್ತಿದ್ದು, ಗಡುವನ್ನು ಕನಿಷ್ಠ ಒಂದು ವಾರಕ್ಕಾದರೂ ಮುಂದೂಡಬೇಕು. ಇದು ನಮ್ಮೆಲ್ಲರ ಒಕ್ಕೊರಲಿನ ಒತ್ತಾಯವಾಗಿದ್ದು ಕೂಡಲೇ ಈ ನಿಟ್ಟಿನಲ್ಲಿ ಸರ್ಕಾರ ಯೋಚಿಸಬೇಕೆಂದು ವಿನಂತಿಸಿಕೊಳ್ಳುತ್ತೇವೆ. ಇಲ್ಲವಾದಲ್ಲಿ ಯುವರಂಗ ಸಮುದಾಯ ಭವಿಷ್ಯದಲ್ಲಿ ಈ ನಿರ್ಧಾರದ ವಿರುದ್ಧ ರಾಜ್ಯವ್ಯಾಪಿ ಚಳುವಳಿ ನಡೆಸಬೇಕಾಗುತ್ತದೆಂಬ ಎಚ್ಚರಿಕೆಯನ್ನೂ ಸಹ ನೀಡಬೇಕಾಗುತ್ತದೆ ಎಂದರು.

ಈಗಾಗಲೇ ಯುವ ರಂಗಕರ್ಮಿಗಳು ಸೋಷಿಯಲ್ ಮೀಡಿಯಾ ಮೂಲಕ ಚಳುವಳಿ‌ ಪ್ರಾರಂಭ ಮಾಡಿದ್ದಾರೆ. ದಯ ಮಾಡಿ‌ ಈ ನಿಟ್ಟಿನಲ್ಲಿ ನೀವು ಸರಕಾರದ ಜತೆ ಮಾತಾಡಿ ಯುವಕರನ್ನು ಗಮನದಲ್ಲಿಟ್ಟುಕೊಂಡು ಅರ್ಥಿಕ ನೆರವು ನೀಡಿ ಎಂದು ರಂಗ ನಿರ್ದೇಶಕ, ಸಿನಿಮಾ ನಟ ಡಿಂಗ್ರಿ ನರೇಶ್ ಅವರು ಸಂಸದರಾದ ರಾಜ ಅಮರೇಶ್ವರ ನಾಯಕ್ ಅವರ ಗಮನಕ್ಕೂ ತಂದಿದ್ದಾರೆ. ಯುವ ಕಲಾವಿದರ ಪರವಾಗಿ ನಾನು ಒತ್ತಡ ತರುತ್ತೇನೆ ಎಂದು ಸಂಸದರು ಕೂಡ ಭರವಸೆ ನೀಡಿದ್ದಾರೆ ಎಂದು ಡಿಂಗ್ರೀ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು