10:37 AM Friday27 - March 2026
ಬ್ರೇಕಿಂಗ್ ನ್ಯೂಸ್
1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌…

ಇತ್ತೀಚಿನ ಸುದ್ದಿ

ಸಂಕ್ರಮಣ ಪೂಜೆ ಮುಗಿಸಿ ಹೊರ ಬರುತ್ತಿದ್ದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರಿಗೆ ಕಾರು ಡಿಕ್ಕಿ ಹೊಡೆದು ಪರಾರಿ; ಅದೃಷ್ಟವಶಾತ್ ಶಾಸಕರು ಪಾರು

14/01/2024, 19:26

ಬಂಟ್ವಾಳ(reporterkarnataka.com): ಸಂಕ್ರಮಣ ಪೂಜೆ ಮುಗಿಸಿ ದೇವಸ್ಥಾನದಿಂದ ಹೊರಗೆ ಬರುತ್ತಿದ್ದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರಿಗೆ ಇಂದು ಮಧ್ಯಾಹ್ನ ಕಾರೊಂದು ಡಿಕ್ಕಿ ಹೊಡೆದಿದ್ದು, ಪರಾರಿಯಾಗಿದ್ದು, ಅದೃಷ್ಟವಶಾತ್ ಶಾಸಕರು ಅಪಾಯದಿಂದ ಪಾರಾಗಿದ್ದಾರೆ.
ಮಂಗಳೂರು ಹೊರವಲಯದ ಎಡಪದವು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪೂಜೆ ಮುಗಿಸಿ ವಾಪಾಸು ತನ್ನ ಕಾರಿನತ್ತ ಶಾಸಕ ರಾಜೇಶ್ ನಾಯ್ಕ್ ಅವರು ನಡೆದುಕೊಂಡು ಬರುತ್ತಿರುವ ವೇಳೆ ಕಾರು ಡಿಕ್ಕಿ ಹೊಡೆದಿದೆ.
ಮೂಡಬಿದಿರೆ ಕಡೆಯಿಂದ ಬರುತ್ತಿದ್ದ ಸ್ವಿಫ್ಟ್ ಕಾರೊಂದು
ಡಿಕ್ಕಿ ಹೊಡೆದು ಪರಾರಿಯಾಗಿದೆ. ಕಾರು ಡಿಕ್ಕಿ ಹೊಡೆದು ನೆಲಕ್ಕುರುಳಿದ ಶಾಸಕರನ್ನು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಪಡೆದ ಬಳಿಕ ಅವರು ಮನೆಗೆ ವಾಪಸ್ ಬಂದಿದ್ದಾರೆ.
ಡಿಕ್ಕಿ ಹೊಡೆದು ಪರಾರಿಯಾದ ಕಾರನ್ನು ಸ್ಥಳೀಯರು ಗುರುಪುರದಲ್ಲಿ ತಡೆ ಹಿಡಿದಿದ್ದಾರೆ. ಚಾಲಕ ಸಹಿತ ಕಾರನ್ನು ಬಜಪೆ ಪೋಲೀಸರಿಗೆ ಒಪ್ಪಿಸಿಸಲಾಗಿದೆ. ಕಾರು ಚಾಲಕನನ್ನು ಪೋಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು