5:33 PM Sunday23 - August 2026
ಬ್ರೇಕಿಂಗ್ ನ್ಯೂಸ್
*ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಇತ್ತೀಚಿನ ಸುದ್ದಿ

ಸಂಕ್ರಾಂತಿ ಹಬ್ಬ: ಪೌರ ಕಾರ್ಮಿಕ ಮಹಿಳೆಯರು ಸಹಿತ 10 ಸಾವಿರ ಮಂದಿಗೆ ಕಬ್ಬು, ಎಳ್ಳು, ಬೆಲ್ಲ ವಿತರಣೆ

14/01/2026, 23:07

ಬೆಂಗಳೂರು(reporterkarnataka.com): ಜಯನಗರದ ತಿಲಕ್ ನಗರ ವಾರ್ಡ್ ಎಲ್.ಐ.ಸಿ.ಕಾಲೋನಿಯಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ 10 ಸಾವಿರ ಸಾರ್ವಜನಿಕರು ಮತ್ತು ಪೌರ ಕಾರ್ಮಿಕರಿಗೆ ಎಳ್ಳು-ಬೆಲ್ಲ ವಿತರಣೆ ನಡೆಸಲಾಯಿತು.
ಜಯನಗರ ಗ್ಯಾರಂಟಿ ಯೋಜನೆಗಳು ಅನುಷ್ಠಾನ ಸಮಿತಿ ಅಧ್ಯಕ್ಷ ಎನ್.ನಾಗರಾಜು ಅವರು ಗೋಪೂಜೆ ಸಲ್ಲಿಸಿ ಕಬ್ಬು, ಎಳ್ಳು ವಿತರಿಸಿದರು.


ಎನ್.ನಾಗರಾಜು ಅವರು ಮಾತನಾಡಿ, ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿರವರ ಮಾರ್ಗದರ್ಶನ ಮತ್ತು ಕೆಪಿಸಿಸಿ ಮಹಿಳಾ ವಿಭಾಗದ ರಾಜ್ಯಾಧ್ಯಕ್ಷೆ ಸೌಮ್ಯ ರೆಡ್ಡಿರವರ ನೇತೃತ್ವದಲ್ಲಿ ಪ್ರತಿ ವರ್ಷ ಸಂಕ್ರಾಂತಿ ಹಬ್ಬದ ಪ್ರಯುಕ್ತ ಕಬ್ಬು, ಎಳ್ಳು ಬೆಲ್ಲವನ್ನು ಸಾರ್ವಜನಿಕರಿಗೆ ವಿತರಿಸಲಾಗುತ್ತಿದೆ. ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಸರ್ಕಾರದ 5 ಗ್ಯಾರಂಟಿ ಯೋಜನೆಗಳನ್ನು ಮನೆ, ಮನೆಗೆ ತಲುಪಿಸಲಾಗಿದೆ ಇಂದು ನಮ್ಮ ಕ್ಷೇತ್ರದಲ್ಲಿ ಲಕ್ಷಾಂತರ ಫಲಾನುಭವಿಗಳು ಇದ್ದಾರೆ ಎಂದರು.
ಸಂಕ್ರಾಂತಿ ಹಬ್ಬದ ಕಿಚ್ಚು ಹಾಯಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಬ್ಬನ್ನು ರೈತರಿಂದ ನೇರವಾಗಿ ಖರೀದಿ ಮಾಡಿ 10ಸಾವಿರ ಜನರಿಗೆ ವಿತರಿಸಲಾಗುತ್ತಿದೆ.
ಸಂಕ್ರಾಂತಿ ಹಬ್ಬ ಎಲ್ಲರ ಬಾಳಿನಲ್ಲಿ ಬೆಳಕು ಮೂಡಲಿ, ನಂಬಿಕೆ, ಪ್ರೀತಿ, ವಿಶ್ವಾಸದಿಂದ ಎಲ್ಲರು ಬಾಳೋಣ ಎಂದು ಹೇಳಿದರು.
ಎಲ್.ಸಿ.ಹೆಚ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಸಹಕಾರ ನೀಡಿದರು, ಸಂಕ್ರಾಂತಿ ಹಬ್ಬದ ಅಂಗವಾಗಿ ಮಹಿಳೆಯರು ಬೃಹತ್ ರಂಗೋಲಿ ಬಿಡಿಸಿ ಸಂಭ್ರಮಾಚಣೆ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು