11:49 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಸಣ್ಣ ಚುನಾವಣೆಯೇ ಇರಬಹುದು, ಆದರೆ ಪುತ್ತಿಲ ಪರಿವಾರಕ್ಕೆ ಇದು ದೊಡ್ಡ ಫಲಿತಾಂಶವೇ: ಸುಬ್ರಹ್ಮಣ್ಯ ಬಲ್ಯಾಯರ ಗೆಲುವು ದಿಗ್ವಿಜಯಕ್ಕೆ ಮುನ್ನಡಿಯೇ?

27/07/2023, 15:13

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.ಕಂ

ಪುತ್ತಿಲ ಪರಿವಾರ ಮತ್ತೆ ಸದ್ದು ಮಾಡಲಾರಂಭಿಸಿದೆ. ಪುತ್ತೂರು ತಾಲೂಕಿನ ಆರ್ಯಾಪು ಗ್ರಾಪಂ ಚುನಾವಣೆಯ ವಾರ್ಡ್2ರ ಉಪ ಚುನಾವಣೆಯಲ್ಲಿ ಅಕೌಂಟ್ ಓಪನ್ ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಪ್ರತಿನಿಧಿಯನ್ನು ಪಡೆಯುವಲ್ಲಿ
ಮೇಲುಗೈ ಸಾಧಿಸಿದೆ. ಇದು ದಿಗ್ವಿಜಯಕ್ಕೆ ಮುನ್ನುಡಿ ಎಂದೇ ವ್ಯಾಖ್ಯಾನಿಸಲಾಗಿದೆ.
ಇದು ತಳಮಟ್ಟದ ಪಂಚಾಯಿತಿ ಚುನಾವಣೆಯೇ ಇರಬಹುದು. ಆದರೆ ವ್ಯಕ್ತಿಗತವಾಗಿ ಅರುಣ್ ಕುಮಾರ್ ಪುತ್ತಿಲ ಅವರದ್ದು ಬಲು ದೊಡ್ಡ ಸಾಧನೆ. ಪ್ರಮುಖ ಎರಡು ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಮುಂದೆ ಪುತ್ತಿಲ ಪರಿವಾರದ ಅಭ್ಯರ್ಥಿ ಸುಬ್ರಹ್ಮಣ್ಯ ಬಲ್ಯಾಯ ಅವರು ಗೆಲ್ಲುವ ಮೂಲಕ ಸಾಂವಿಧಾನಿಕ ನೆಲೆಗಟ್ಟಿನಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬೇರೂರುವ ಪ್ರಯತ್ನಕ್ಕೆ ಸಣ್ಣ ಮಟ್ಟಿನ
ಸಫಲತೆ ದೊರಕಿದೆ ಎಂದು ರಾಜಕೀಯ ವಿಶ್ಲೇಷಕರು ವ್ಯಾಖ್ಯಾನ ಮಾಡುತ್ತಾರೆ.


ಯಾವುದೇ ಪಕ್ಷವಿರಲಿ, ಸಂಘಟನೆ ಇರಲಿ ತಳಮಟ್ಟದಿಂದಲೇ ಭದ್ರಗೊಳ್ಳುತ್ತಾ ಹೋಗಬೇಕು. ಈ ನಿಟ್ಟಿನಲ್ಲಿ ಪುತ್ತಿಲ ಪರಿವಾರ ಪಂಚಾಯತ್ ವಾರ್ಡ್ ವೊಂದನ್ನು ಗೆದ್ದುಕೊಂಡಿದೆ. ಇನ್ನೊಂದು ವಾರ್ಡ್ ನಲ್ಲಿ ಎರಡನೇ ಸ್ಥಾನ ಪಡೆದಿದೆ. ಈ ಎರಡೂ ವಾರ್ಡ್ ಗಳಲ್ಲಿ ಬಿಜೆಪಿ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ. ಯಾಕೆಂದರೆ ಪುತ್ತಿಲ ಅವರು ಬಿಜೆಪಿಯಿಂದ ನಿರ್ಲಕ್ಷಿಸಲ್ಪಟ್ಟವರು. ಸಂಘ ಪರಿವಾರದ ನಾಯಕರು ಅವರ ಅಭ್ಯರ್ಥಿತನವನ್ನು ಪ್ರಬಲವಾಗಿ ವಿರೋಧಿಸಿದ್ದರು. ಪುತ್ತಿಲರ ವಿಷಯ ಬರುವಾಗ ಬಿಜೆಪಿ ಅಂದ್ರೆ ಹಿಂದುತ್ವ. ಬಿಜೆಪಿಗಿಂತ ದೊಡ್ಡ ಹಿಂದುತ್ವ ಇದೆಯೇ ಎಂದು ಆರೆಸ್ಸೆಸ್ ಹಿರಿಯ ನಾಯಕರೊಬ್ಬರು ಪ್ರಶ್ನಿಸಿದ್ದರು. ಅಂದರೆ ಪುತ್ತಿಲರ ಹಿಂದುತ್ವವನ್ನು ಸಂಘಪರಿವಾರ ಪ್ರಶ್ನಿಸಿತ್ತು.
ಇದೀಗ ನಡೆದಿರುವುದು ಇದು ಸಣ್ಣ ಚುನಾವಣೆಯೇ ಇರಬಹುದು, ಆದರೆ ಪುತ್ತಿಲ ಪರಿವಾರಕ್ಕೆ ಇದು ದೊಡ್ಡ ಫಲಿತಾಂಶ. ಈ ಫಲಿತಾಂಶ ಬಿಜೆಪಿ ಹಾಗೂ ಸಂಘ ಪರಿವಾರಕ್ಕೆ ಇರಿಸುಮುರಿಸು ತರುವಂತದ್ದೇ ಆಗಿದೆ. ಸಾಮಾನ್ಯವಾಗಿ ಎಷ್ಟೇ ದೊಡ್ಡ ನಾಯಕನಾದರೂ ಪಕ್ಷ ಬಿಟ್ಟು ಪಕ್ಷೇತರನಾಗಿ ನಿಂತರೆ 5 ಸಾವಿರ ಮತ ಪಡೆಯುವುದು ಕಷ್ಟ. ಆದರೆ ಅರುಣ್ ಕುಮಾರ್ ಪುತ್ತಿಲ ಅವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅಲ್ಪ ಮತಗಳ ಅಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎದುರು ಸೋಲು ಅನುಭವಿಸಿದ್ದಾರೆ. ಬಿಜೆಪಿ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿತ್ತು. ಇದೀಗ ಪಂಚಾಯತಿನ ಎರಡು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲೂ ಬಿಜೆಪಿ ಮೂರನೇ ಸ್ಥಾನದಲ್ಲಿ ತೃಪ್ತಿಪಟ್ಟುಕೊಳ್ಳಬೇಕಾಯಿತು. ಇದರ್ಥ ಪುತ್ತಿಲ ಪರಿವಾರ ಗ್ರಾಮೀಣ ಪ್ರದೇಶದಲ್ಲೂ ಬೇರೂರುತ್ತಿದೆ ಎನ್ನುವುದು.

ಇತ್ತೀಚಿನ ಸುದ್ದಿ

ಜಾಹೀರಾತು