6:01 AM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಸಾಣೂರು: ಆದರ್ಶ್‌ ಇಂಡಸ್ಟ್ರಿಸ್ ವಿರುದ್ಧ ಕಪ್ಪು ಬಟ್ಟೆ ಕಟ್ಟಿ ಪ್ರತಿಭಟನೆ: ವಸತಿರಹಿತ ಪ್ರದೇಶಕ್ಕೆ ಸ್ಥಳಾಂತರಕ್ಕೆ ಆಗ್ರಹ

15/02/2022, 23:22

ಕಾರ್ಕಳ(reporterkarnataka.com): ಗ್ರಾಮಸ್ಥರ ಆರೋಗ್ಯಕ್ಕೆ ತೊಂದರೆಯುಂಟಾಗುತ್ತಿರುವ ಕಾರಣ ಆದರ್ಶ್‌ ಇಂಡಸ್ಟ್ರೀಯಲ್‌ ಕಂಪೆನಿಯನ್ನು ವಸತಿರಹಿತ ಪ್ರದೇಶಕ್ಕೆ ಸ್ಥಳಾಂತರಿಸುವಂತೆ ಆಗ್ರಹಿಸಿ ಫೆ. 14ರಂದು ಕಾರ್ಕಳ ಪರಿಸರ ರಕ್ಷಣಾ ಸಮಿತಿ ವತಿಯಿಂದ ಸಾಣೂರಿನಲ್ಲಿ ಗ್ರಾಮಸ್ಥರು ಕೈಗೆ ಕಪ್ಪು ಬಟ್ಟೆ ಕಟ್ಟಿ ಪ್ರತಿಭಟನೆ ನಡೆಸಿದರು.

ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿದ ನ್ಯಾಯವಾದಿ, ಬೆಳ್ಮಣ್‌ ಗ್ರಾಮ ಪಂಚಾಯತ್‌ ಸದಸ್ಯೆ ಸಹನಾ ಕುಂದರ್‌, ಗ್ರಾಮಸ್ಥರ ಕಷ್ಟ ಅರಿತು ಆದರ್ಶ್‌ ಇಂಡಸ್ಟ್ರೀಯ ಮಾಲಕರು ಕಂಪನಿಯನ್ನು ಬೇರೆಡೆ ಸ್ಥಳಾಂತರಿಸಬೇಕು. ಪರಿಸರಕ್ಕೆ ಮಾರಕವಾಗಿರುವ ಕಂಪೆನಿಗಳಿಗೆ ಯಾರು ಬೆಂಬಲ ನೀಡಬಾರದು. ಈ ನಿಟ್ಟಿನಲ್ಲಿ ಗ್ರಾಮ ಪಂಚಾಯತ್‌ ಸದಸ್ಯರು ಒಗ್ಗಟ್ಟಾಗಿರುವುದು ಒಳ್ಳೆಯ ಬೆಳವಣಿಗೆ. ಜಾತಿ, ಪಕ್ಷ, ಧರ್ಮ ಭೇದವಿಲ್ಲದೇ ಇಡೀ ಗ್ರಾಮಸ್ಥರು ಒಗ್ಗೂಡಬೇಕೆಂದು ಹೇಳಿದರು. 

ಆದರ್ಶ ಎಂದರೆ ಅದು ಸಮಾಜದ ಮತ್ತು ಪರಿಸರಕ್ಕೆ ಆದರ್ಶವಾಗಿರಬೇಕು.  ಮುಂದಿನ ದಿನಗಳಲ್ಲೂ ಎಲ್ಲ ಹೋರಾಟಗಳಲ್ಲೂ ನಾವಿದ್ದೇವೆ ಎಂದು ಸಹನಾ ಹೇಳಿದರು. 

ಕ್ಯಾನ್ಸರ್‌ಗೆ ಕಾರಣವಾಗುತ್ತಿದೆ: 

ಗ್ರಾಪಂ ಸದಸ್ಯ ಕರುಣಾಕರ್‌ ಕೋಟ್ಯಾನ್‌ ಮಾತನಾಡಿ, ಆದರ್ಶ್‌ ಇಂಡಸ್ಟ್ರೀಯಲ್‌ ಕೆಮಿಕಲ್ಸ್‌ ಕಾರ್ಖಾನೆ 70 ಟಿಪಿಎಂ ಸಾಮರ್ಥ್ಯದಿಂದ ಇದೀಗ 870 ಟಿಪಿಎಂ ರಾಸಾಯನಿಕ ಉತ್ಪಾದನೆ ಮಾಡಲು ಮಾಲಕರು ಕಟ್ಟಡ ವಿಸ್ತರಿಸುತ್ತಿದ್ದಾರೆ. ಕಂಪೆನಿ ಹೊರಸೂಸುವ ವಿಷಯುಕ್ತ ಗಾಳಿಯಿಂದ ಅನೇಕರಲ್ಲಿ ಆರೋಗ್ಯ ಸಮಸ್ಯೆ ತಲೆದೋರಿದೆ. ಹಲವರು ಮಂದಿ ಕ್ಯಾನ್ಸರ್‌, ಅಸ್ತಮಾ ಪೀಡಿತರಾಗಿದ್ದಾರೆ. ಜಾನುವಾರುಗಳು ಸಾವನ್ನಪ್ಪಿದೆ. ಬಾವಿಗಳಲ್ಲಿ ತೈಲಯುಕ್ತ ನೀರು ಕಂಡು ಬಂದಿದೆ. ಇಂತಹ ಪರಿಸ್ಥಿತಿಯಲ್ಲಿ ಕಾರ್ಖಾನೆ ವಿಸ್ತರಿಸಿದರೆ ಜನರನ್ನು ಸಾವಿನ ದವಡೆಗೆ ದೂಡಿದಂತಾಗುವುದು. ಪ್ರಕೃತಿಯನ್ನು ಹಾಳು ಮಾಡುವಂತಹ ಇಂತಹ ಕಾರ್ಖಾನೆ ಜನವಸತಿ, ಶಾಲೆ, ಅಂಗಡಿ ಸಮೀಪ ಬೇಡ. ಮುಂದಿನ ದಿನಗಳಲ್ಲಿ ಘೋರ ದುರ್ಘಟನೆ ಸಂಭವಿಸುವುದಕ್ಕಿಂತ ಮುಂಚೆ ಕಂಪೆನಿಯನ್ನು ಸ್ಥಳಾಂತರಿಸಬೇಕು. ಇದು ಬದುಕಿಗಾಗಿ ಹೋರಾಟ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಎಲ್ಲರಿಗೂ ಮನವಿ ಮಾಡಲಾಗುವುದು ಎಂದರು. 

ಕೆಎಂಎಫ್‌ ನಿರ್ದೇಶಕ ನರಸಿಂಹ ಕಾಮತ್‌ ಮಾತನಾಡಿ, ನಮ್ಮ ಹೋರಾಟ ಗಣೇಶ್‌ ಕಾಮತ್‌ ಅವರ ವಿರುದ್ಧವಲ್ಲ. ವೈಯಕ್ತಿಕವಾಗಿ ನಮಗೆ ಅವರ ಬಗ್ಗೆ ಬಹಳ ಗೌರವವಿದೆ.  ಆದರೆ, ಅವರು ನಡೆಸುತ್ತಿರುವ ಕಂಪೆನಿಯಿಂದ ತೊಂದರೆಯಾಗುತ್ತಿದೆ. ೨೦ ವರ್ಷಗಳ ಹಿಂದೆ ಗೇರು ಬೀಜ ಎಣ್ಣೆ ಸಂಸ್ಕರಣಾ ಘಟಕವಾಗಿ ಮುರತ್ತಂಗಡಿಯಲ್ಲಿ ಪ್ರಾರಂಭವಾದ ಈ ಕಾರ್ಖಾನೆಯಿಂದ ಇದೀಗ ಪರಿಸರ, ಜೀವ ಸಂಕುಲಕ್ಕೆ ಹಾನಿಯಾಗುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಧ್ವನಿ ಇದ್ದರೆ ಎಲ್ಲವೂ ಸಾಧ್ಯ. ಕಾರ್ಖಾನೆಗೆ ನೀಡಿರುವ ಪರವಾನಿಗೆ ಜೂನ್‌ ವರೆಗೆ ಚಾಲ್ತಿಯಲ್ಲಿದ್ದು ಈ ನಾಲ್ಕು ತಿಂಗಳ ಅವಧಿಯೊಳಗೆ ಕಾರ್ಖಾನೆಯ ಮಾಲಕರು ಕಾರ್ಖಾನೆಯನ್ನು ಸ್ಥಳಾಂತರಿಸುವ ಬಗ್ಗೆ ಅಥವಾ ಮುಚ್ಚುವುದರ ಬಗ್ಗೆ ನಿರ್ಧಾರ ಕೈಗೊಳ್ಳಬೇಕಿದೆ ಎಂದರು. 

ಮನವಿ: ಉಡುಪಿ ಜಿಲ್ಲಾಧಿಕಾರಿ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ, ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಕೇಂದ್ರದ ಜಂಟಿ ನಿರ್ದೇಶಕರು, ಕಾರ್ಕಳ ತಹಶೀಲ್ದಾರ್‌, ಸಾಣೂರು ಪಂಚಾಯತ್‌ ಅಭಿವೃದ್ದಿ ಅಧಿಕಾರಿ, ಕೇಂದ್ರ ಅರಣ್ಯ, ಪರಿಸರ ಮತ್ತು ಹವಮಾನ ಬದಲಾವಣೆ ಮಂತ್ರಾಲಯ ಬೆಂಗಳೂರು, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಮಂಗಳೂರು ವಲಯ ಹಿರಿಯ ಪರಿಸರ ಅಧಿಕಾರಿಯವರಿಗೆ ಆದರ್ಶ್‌ ಇಂಡಸ್ಟ್ರಿಯಲ್‌ ಕೆಮಿಕಲ್ಸ್ನಿಂದ ಆಗುತ್ತಿರುವ ತೊಂದರೆಗಳಿಂದ ಮುಕ್ತಿ ನೀಡುವ ಬಗ್ಗೆ ಮನವಿ ಸಲ್ಲಿಸಲಾಯಿತು.

ಸಾಣೂರು ಗ್ರಾಪಂ ಉಪಾಧ್ಯಕ್ಷ ಪ್ರಸಾದ್‌ ಪೂಜಾರಿ, ಗ್ರಾಪಂ ಸದಸ್ಯರಾದ ಪ್ರಕಾಶ್‌ ರಾವ್‌, ಸರಸ್ವತಿ, ಸುನಂದ ನಾಯ್ಕ್‌, ಯುವರಾಜ್‌ ಜೈನ್, ಸತೀಶ್‌ ಪೂಜಾರಿ, ಎಪಿಎಂಸಿ ನಾಮ ನಿರ್ದೇಶಿತ ನಿರ್ದೇಶಕ ದೇವಾನಂದ್‌ ಶೆಟ್ಟಿ, ತಾಲೂಕು ಪಂಚಾಯತ್‌ ಮಾಜಿ ಸದಸ್ಯ ಪ್ರವೀಣ್‌ ಕೋಟ್ಯಾನ್‌,  ಪರಿಸರ ಸಂರಕ್ಷಣಾ ಸಮಿತಿಯ ಪದಾಧಿಕಾರಿ ಪ್ರಶಾಂತ್‌, ಪರಿಸರ ಸಂರಕ್ಷಣಾ ಸಮಿತಿ ಕಾರ್ಕಳದ ಸ್ಥಾಪಕ ರಘುರಾಮ ಶೆಟ್ಟಿ ಹಾಗೂ ರಾಮ ಪ್ರಶಾಂತ್‌ ಶೆಟ್ಟಿ, ಬಾಲಾಂಜನೇಯ ಯುವಕ ಸಂಘದ ಅಧ್ಯಕ್ಷ ಪ್ರಕಾಶ್‌ ಆಚಾರ್ಯ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು