5:23 PM Sunday1 - February 2026
ಬ್ರೇಕಿಂಗ್ ನ್ಯೂಸ್
ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಸಂತ ಆಗ್ನೆಸ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ, ಖಗೋಳ ಶಾಸ್ತ್ರಜ್ಞ ಪ್ರೊ. ಜಯಂತ್ ಆಚಾರ್ಯ ಇನ್ನಿಲ್ಲ

14/05/2021, 12:48

ಮಂಗಳೂರು(reporterkarnataka news):

ಮಂಗಳೂರಿನ ಸಂತ ಆಗ್ನೆಸ್ ಕಾಲೇಜಿನ ನಿವೃತ್ತ ರಸಾಯನಶಾಸ್ತ್ರ ಪ್ರಾಧ್ಯಾಪಕ ಪ್ರೊ.ಜಯಂತ್ ಆಚಾರ್ಯ (67) ಹೃದಯಾಘಾತ ದಿಂದ ಮಂಗಳೂರಿನ ಕುಲಶೇಖರ ಸಮೀಪದ ಸರಿಪಳ್ಳದಲ್ಲಿರುವ ಮನೆಯಲ್ಲಿ ನಿಧನರಾದರು.    

ಪ್ರೊ.ಜಯಂತ್  ಸುಮಾರು ಮೂವತ್ತಕ್ಕೂ ಹೆಚ್ಚು ವರ್ಷಗಳಿಂದ ಮಂಗಳೂರಿನ ಅನೇಕರಿಗೆ ಖಗೋಲಶಾಸ್ತ್ರದ ಅಭಿರುಚಿ ಹುಟ್ಟಿಸಿದ್ದರು.

ಗ್ರಹಣ ಆಗಲೀ, ಧೂಮಕೇತು ಬರಲಿ ಆಕಾಶದ ವಿಸ್ಮಯಗಳತ್ತ ತಮ್ಮ ವಿದ್ಯಾರ್ಥಿಗಳು ಹಾಗೂ ಆಸಕ್ತರಿಗೆ ಅದರ ಪರಿಚಯ ಮಾಡಿಸುತ್ತಿದ್ದವರು. ಅದಕ್ಕೆಂದೇ ನಗರದಿಂದ ತುಸುದೂರ ಸರಿಪಲ್ಲ ಎಂಬಲ್ಲಿ ಮನೆ ಮಾಡಿಕೊಂಡು ಆಸಕ್ತರಿಗೆ ಆಕಾಶದ ಪರಿಚಯ ಮಾಡಿಸುತ್ತಿದ್ದರು. ಮಂಗಳೂರು ಹವ್ಯಾಸಿ ಖಗೋಲವೀಕ್ಷಕರ ಸಂಘದ ಮೂಲಕ ಅನೇಕ ಚಟುವಟಿಕೆ ಮಾಡುತ್ತಾ ಕ್ರಿಯಾಶಿಲರಾಗಿದ್ದವರು. 

ಸಂಗೀತ, ಯಕ್ಷಗಾನ, ನಾಟಕ, ಚಾರಣ ಮೊದಲಾದ ಹಲವಾರು ಆಸಕ್ತಿಗಳನ್ನು ಹೊಂದಿದ್ದವರು.  ಕಿರಿಯರ ಜೊತೆ ಸದಾ ಸ್ನೇಹಭಾವದಿಂದ ಇರುತ್ತಿದ್ದ ಸರಳ ಸಜ್ಜನ. Sunday science school ನಂತಹ ಚಟುವಟಿಕೆಗಳ ಮೂಲಕ ಮಕ್ಕಳಿಗೆ ನಿಜವಾದ ಅರ್ಥದಲ್ಲಿ ವಿಜ್ಞಾನ ಕಲಿಕೆ ಎಂಬ ಪ್ರಯೋಗವನ್ನು ಹಲವಾರು ವರ್ಷ ನಡೆಸಿದವರು.

ಬಗಲಿಗೊಂದು ಚೀಲ, ಕೈಯಲ್ಲೊಂದು single fold ಛತ್ರಿ, ಚೌಕ ಫ್ರೇಮಿನ ಕನ್ನಡಕ, ಸದಾ ನಗುಮುಖದ ಶಾಂತ ವ್ಯಕ್ತಿತ್ವದ ಇವರು 

 ತಾಯಿ, ಪತ್ನಿ, ಎರಡು ಪುತ್ರಿಯರು, ಅಳಿಯ, ಸಹೋದರ ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು