8:22 AM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಸಂತ ಆಗ್ನೆಸ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ, ಖಗೋಳ ಶಾಸ್ತ್ರಜ್ಞ ಪ್ರೊ. ಜಯಂತ್ ಆಚಾರ್ಯ ಇನ್ನಿಲ್ಲ

14/05/2021, 12:48

ಮಂಗಳೂರು(reporterkarnataka news):

ಮಂಗಳೂರಿನ ಸಂತ ಆಗ್ನೆಸ್ ಕಾಲೇಜಿನ ನಿವೃತ್ತ ರಸಾಯನಶಾಸ್ತ್ರ ಪ್ರಾಧ್ಯಾಪಕ ಪ್ರೊ.ಜಯಂತ್ ಆಚಾರ್ಯ (67) ಹೃದಯಾಘಾತ ದಿಂದ ಮಂಗಳೂರಿನ ಕುಲಶೇಖರ ಸಮೀಪದ ಸರಿಪಳ್ಳದಲ್ಲಿರುವ ಮನೆಯಲ್ಲಿ ನಿಧನರಾದರು.    

ಪ್ರೊ.ಜಯಂತ್  ಸುಮಾರು ಮೂವತ್ತಕ್ಕೂ ಹೆಚ್ಚು ವರ್ಷಗಳಿಂದ ಮಂಗಳೂರಿನ ಅನೇಕರಿಗೆ ಖಗೋಲಶಾಸ್ತ್ರದ ಅಭಿರುಚಿ ಹುಟ್ಟಿಸಿದ್ದರು.

ಗ್ರಹಣ ಆಗಲೀ, ಧೂಮಕೇತು ಬರಲಿ ಆಕಾಶದ ವಿಸ್ಮಯಗಳತ್ತ ತಮ್ಮ ವಿದ್ಯಾರ್ಥಿಗಳು ಹಾಗೂ ಆಸಕ್ತರಿಗೆ ಅದರ ಪರಿಚಯ ಮಾಡಿಸುತ್ತಿದ್ದವರು. ಅದಕ್ಕೆಂದೇ ನಗರದಿಂದ ತುಸುದೂರ ಸರಿಪಲ್ಲ ಎಂಬಲ್ಲಿ ಮನೆ ಮಾಡಿಕೊಂಡು ಆಸಕ್ತರಿಗೆ ಆಕಾಶದ ಪರಿಚಯ ಮಾಡಿಸುತ್ತಿದ್ದರು. ಮಂಗಳೂರು ಹವ್ಯಾಸಿ ಖಗೋಲವೀಕ್ಷಕರ ಸಂಘದ ಮೂಲಕ ಅನೇಕ ಚಟುವಟಿಕೆ ಮಾಡುತ್ತಾ ಕ್ರಿಯಾಶಿಲರಾಗಿದ್ದವರು. 

ಸಂಗೀತ, ಯಕ್ಷಗಾನ, ನಾಟಕ, ಚಾರಣ ಮೊದಲಾದ ಹಲವಾರು ಆಸಕ್ತಿಗಳನ್ನು ಹೊಂದಿದ್ದವರು.  ಕಿರಿಯರ ಜೊತೆ ಸದಾ ಸ್ನೇಹಭಾವದಿಂದ ಇರುತ್ತಿದ್ದ ಸರಳ ಸಜ್ಜನ. Sunday science school ನಂತಹ ಚಟುವಟಿಕೆಗಳ ಮೂಲಕ ಮಕ್ಕಳಿಗೆ ನಿಜವಾದ ಅರ್ಥದಲ್ಲಿ ವಿಜ್ಞಾನ ಕಲಿಕೆ ಎಂಬ ಪ್ರಯೋಗವನ್ನು ಹಲವಾರು ವರ್ಷ ನಡೆಸಿದವರು.

ಬಗಲಿಗೊಂದು ಚೀಲ, ಕೈಯಲ್ಲೊಂದು single fold ಛತ್ರಿ, ಚೌಕ ಫ್ರೇಮಿನ ಕನ್ನಡಕ, ಸದಾ ನಗುಮುಖದ ಶಾಂತ ವ್ಯಕ್ತಿತ್ವದ ಇವರು 

 ತಾಯಿ, ಪತ್ನಿ, ಎರಡು ಪುತ್ರಿಯರು, ಅಳಿಯ, ಸಹೋದರ ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು