3:57 AM Sunday21 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಸಂತ ಆಗ್ನೆಸ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ, ಖಗೋಳ ಶಾಸ್ತ್ರಜ್ಞ ಪ್ರೊ. ಜಯಂತ್ ಆಚಾರ್ಯ ಇನ್ನಿಲ್ಲ

14/05/2021, 12:48

ಮಂಗಳೂರು(reporterkarnataka news):

ಮಂಗಳೂರಿನ ಸಂತ ಆಗ್ನೆಸ್ ಕಾಲೇಜಿನ ನಿವೃತ್ತ ರಸಾಯನಶಾಸ್ತ್ರ ಪ್ರಾಧ್ಯಾಪಕ ಪ್ರೊ.ಜಯಂತ್ ಆಚಾರ್ಯ (67) ಹೃದಯಾಘಾತ ದಿಂದ ಮಂಗಳೂರಿನ ಕುಲಶೇಖರ ಸಮೀಪದ ಸರಿಪಳ್ಳದಲ್ಲಿರುವ ಮನೆಯಲ್ಲಿ ನಿಧನರಾದರು.    

ಪ್ರೊ.ಜಯಂತ್  ಸುಮಾರು ಮೂವತ್ತಕ್ಕೂ ಹೆಚ್ಚು ವರ್ಷಗಳಿಂದ ಮಂಗಳೂರಿನ ಅನೇಕರಿಗೆ ಖಗೋಲಶಾಸ್ತ್ರದ ಅಭಿರುಚಿ ಹುಟ್ಟಿಸಿದ್ದರು.

ಗ್ರಹಣ ಆಗಲೀ, ಧೂಮಕೇತು ಬರಲಿ ಆಕಾಶದ ವಿಸ್ಮಯಗಳತ್ತ ತಮ್ಮ ವಿದ್ಯಾರ್ಥಿಗಳು ಹಾಗೂ ಆಸಕ್ತರಿಗೆ ಅದರ ಪರಿಚಯ ಮಾಡಿಸುತ್ತಿದ್ದವರು. ಅದಕ್ಕೆಂದೇ ನಗರದಿಂದ ತುಸುದೂರ ಸರಿಪಲ್ಲ ಎಂಬಲ್ಲಿ ಮನೆ ಮಾಡಿಕೊಂಡು ಆಸಕ್ತರಿಗೆ ಆಕಾಶದ ಪರಿಚಯ ಮಾಡಿಸುತ್ತಿದ್ದರು. ಮಂಗಳೂರು ಹವ್ಯಾಸಿ ಖಗೋಲವೀಕ್ಷಕರ ಸಂಘದ ಮೂಲಕ ಅನೇಕ ಚಟುವಟಿಕೆ ಮಾಡುತ್ತಾ ಕ್ರಿಯಾಶಿಲರಾಗಿದ್ದವರು. 

ಸಂಗೀತ, ಯಕ್ಷಗಾನ, ನಾಟಕ, ಚಾರಣ ಮೊದಲಾದ ಹಲವಾರು ಆಸಕ್ತಿಗಳನ್ನು ಹೊಂದಿದ್ದವರು.  ಕಿರಿಯರ ಜೊತೆ ಸದಾ ಸ್ನೇಹಭಾವದಿಂದ ಇರುತ್ತಿದ್ದ ಸರಳ ಸಜ್ಜನ. Sunday science school ನಂತಹ ಚಟುವಟಿಕೆಗಳ ಮೂಲಕ ಮಕ್ಕಳಿಗೆ ನಿಜವಾದ ಅರ್ಥದಲ್ಲಿ ವಿಜ್ಞಾನ ಕಲಿಕೆ ಎಂಬ ಪ್ರಯೋಗವನ್ನು ಹಲವಾರು ವರ್ಷ ನಡೆಸಿದವರು.

ಬಗಲಿಗೊಂದು ಚೀಲ, ಕೈಯಲ್ಲೊಂದು single fold ಛತ್ರಿ, ಚೌಕ ಫ್ರೇಮಿನ ಕನ್ನಡಕ, ಸದಾ ನಗುಮುಖದ ಶಾಂತ ವ್ಯಕ್ತಿತ್ವದ ಇವರು 

 ತಾಯಿ, ಪತ್ನಿ, ಎರಡು ಪುತ್ರಿಯರು, ಅಳಿಯ, ಸಹೋದರ ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು