2:44 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಸಂತ ಆಗ್ನೆಸ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ, ಖಗೋಳ ಶಾಸ್ತ್ರಜ್ಞ ಪ್ರೊ. ಜಯಂತ್ ಆಚಾರ್ಯ ಇನ್ನಿಲ್ಲ

14/05/2021, 12:48

ಮಂಗಳೂರು(reporterkarnataka news):

ಮಂಗಳೂರಿನ ಸಂತ ಆಗ್ನೆಸ್ ಕಾಲೇಜಿನ ನಿವೃತ್ತ ರಸಾಯನಶಾಸ್ತ್ರ ಪ್ರಾಧ್ಯಾಪಕ ಪ್ರೊ.ಜಯಂತ್ ಆಚಾರ್ಯ (67) ಹೃದಯಾಘಾತ ದಿಂದ ಮಂಗಳೂರಿನ ಕುಲಶೇಖರ ಸಮೀಪದ ಸರಿಪಳ್ಳದಲ್ಲಿರುವ ಮನೆಯಲ್ಲಿ ನಿಧನರಾದರು.    

ಪ್ರೊ.ಜಯಂತ್  ಸುಮಾರು ಮೂವತ್ತಕ್ಕೂ ಹೆಚ್ಚು ವರ್ಷಗಳಿಂದ ಮಂಗಳೂರಿನ ಅನೇಕರಿಗೆ ಖಗೋಲಶಾಸ್ತ್ರದ ಅಭಿರುಚಿ ಹುಟ್ಟಿಸಿದ್ದರು.

ಗ್ರಹಣ ಆಗಲೀ, ಧೂಮಕೇತು ಬರಲಿ ಆಕಾಶದ ವಿಸ್ಮಯಗಳತ್ತ ತಮ್ಮ ವಿದ್ಯಾರ್ಥಿಗಳು ಹಾಗೂ ಆಸಕ್ತರಿಗೆ ಅದರ ಪರಿಚಯ ಮಾಡಿಸುತ್ತಿದ್ದವರು. ಅದಕ್ಕೆಂದೇ ನಗರದಿಂದ ತುಸುದೂರ ಸರಿಪಲ್ಲ ಎಂಬಲ್ಲಿ ಮನೆ ಮಾಡಿಕೊಂಡು ಆಸಕ್ತರಿಗೆ ಆಕಾಶದ ಪರಿಚಯ ಮಾಡಿಸುತ್ತಿದ್ದರು. ಮಂಗಳೂರು ಹವ್ಯಾಸಿ ಖಗೋಲವೀಕ್ಷಕರ ಸಂಘದ ಮೂಲಕ ಅನೇಕ ಚಟುವಟಿಕೆ ಮಾಡುತ್ತಾ ಕ್ರಿಯಾಶಿಲರಾಗಿದ್ದವರು. 

ಸಂಗೀತ, ಯಕ್ಷಗಾನ, ನಾಟಕ, ಚಾರಣ ಮೊದಲಾದ ಹಲವಾರು ಆಸಕ್ತಿಗಳನ್ನು ಹೊಂದಿದ್ದವರು.  ಕಿರಿಯರ ಜೊತೆ ಸದಾ ಸ್ನೇಹಭಾವದಿಂದ ಇರುತ್ತಿದ್ದ ಸರಳ ಸಜ್ಜನ. Sunday science school ನಂತಹ ಚಟುವಟಿಕೆಗಳ ಮೂಲಕ ಮಕ್ಕಳಿಗೆ ನಿಜವಾದ ಅರ್ಥದಲ್ಲಿ ವಿಜ್ಞಾನ ಕಲಿಕೆ ಎಂಬ ಪ್ರಯೋಗವನ್ನು ಹಲವಾರು ವರ್ಷ ನಡೆಸಿದವರು.

ಬಗಲಿಗೊಂದು ಚೀಲ, ಕೈಯಲ್ಲೊಂದು single fold ಛತ್ರಿ, ಚೌಕ ಫ್ರೇಮಿನ ಕನ್ನಡಕ, ಸದಾ ನಗುಮುಖದ ಶಾಂತ ವ್ಯಕ್ತಿತ್ವದ ಇವರು 

 ತಾಯಿ, ಪತ್ನಿ, ಎರಡು ಪುತ್ರಿಯರು, ಅಳಿಯ, ಸಹೋದರ ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು