8:58 AM Tuesday13 - May 2025
ಬ್ರೇಕಿಂಗ್ ನ್ಯೂಸ್
Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!!

ಇತ್ತೀಚಿನ ಸುದ್ದಿ

ಸಂತಾನಹರಣ ಶಸ್ತ್ರ ಚಿಕಿತ್ಸೆ ಮಾಡಲು ಬಂದ ಸರಕಾರಿ ವೈದ್ಯರು ಫುಲ್ ಟೈಟ್!: ಆಪರೇಶನ್ ಥಿಯೇಟರ್ ಬೆಡ್ ನಲ್ಲೇ ರೆಸ್ಟ್!!

01/06/2023, 16:41

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporter Karnataka@gmail.com

ಆಪರೇಶನ್ ಮಾಡಲು ಬಂದ ವೈದ್ಯರು ಕುಡಿದು ಟೈಟಾದ ಪರಿಣಾಮ ಆಪರೇಶನ್ ಥಿಯೇಟರ್ ನ ಬೆಡ್ ನಲ್ಲಿ ಮಲಗಿದ ಬೆಚ್ಚಿಬೀಳಿಸುವ ಘಟನೆ
ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ನಡೆದಿದೆ.
ಕಳಸ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳೆಯರಿಗೆ
ಸಂತಾನ ಹರಣ ಆಪರೇಷನ್ ಕ್ಯಾಂಪ್ ಏರ್ಪಾಡು ಮಾಡಲಾಗಿತ್ತು. 10ಕ್ಕೂ ಹೆಚ್ಚು ಮಹಿಳೆಯರು ಮಕ್ಕಳನ್ನ ಬಿಟ್ಟು ಬೆಳಗ್ಗೆ 8 ಗಂಟೆಗೆ ಬಂದಿದ್ದರು‌‌. ಆದರೆ ಆಪರೇಶನ್ ಮಾಡುವ ವೈದ್ಯರಾದ
ಕೊಪ್ಪ ಸರ್ಕಾರಿ ಆಸ್ಪತ್ರೆ ಡಾ. ಬಾಲಕೃಷ್ಣ ಅವರು ಮಧ್ಯಾಹ್ನ 3 ಗಂಟೆಗೆ ಬಂದರು.
ವೈದ್ಯ ಬಾಲಕೃಷ್ಣ ಅವರು ಬರುವಾಗಲೇ ಫುಲ್ ಟೈಟ್ ಆಗಿದ್ದರು. ಟೈಟಾಗಿ ಬಂದ ವೈದ್ಯ ಸಂತಾನಹರಣ ಚಿಕಿತ್ಸೆ ಮಾಡುವ ಬದಲು ಆಪರೇಷನ್ ಥಿಯೇಟರ್ ಬೆಡ್ ಮೇಲೆ ಮಲಗಿಯೇ ಬಿಟ್ಟರು. ಇನ್ನೊಂದು ಕಡೆ ಸಂತಾನಹರಣ ಆಪರೇಶನ್ ಗೆ ಬಂದಿದ್ದ ಮಹಿಳೆಯರಿಗೆ ಅನಸ್ತೇಷಿಯಾ ನೀಡಿ ಮಲಗಿಸಲಾಗಿತ್ತು. ಈ ನಡುವೆ ಕುಡುಕ ವೈದ್ಯರನ್ನು ಬಚಾವ್ ಮಾಡಲು ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಂದ ನಾಟಕ ಶುರುವಾಯಿತು.


ವೈದ್ಯರಿಗೆ ಏನೋ ಆಗಿದೆ, ಶುಗರ್ ಕಮ್ಮಿ ಆಗಿದೆ, ಬಿಪಿ ಜಾಸ್ತಿ ಆಗಿದೆ ಅಂತ ಹೈ ಡ್ರಾಮಾ ಮಾಡಲಾರಂಭಿಸಿದರು. ವೈದ್ಯರಿಗೆ ಗ್ಲೂಕೋಸ್ ಹಾಕಿಸಿ ಆಸ್ಪತ್ರೆಯಿಂದ ಕೊಪ್ಪಕ್ಕೆ ವಾಪಸ್ ಕಳುಹಿಸಲಾಯಿತು. ಆಪರೇಶನ್ ಗೆ ಬಂದ ಮಹಿಳೆಯರು, ಅವರ ಸಂಬಂಧಿಕರು ಹಾಗೂ ಸಾರ್ವಜನಿಕರು ಹಿಡಿಶಾಪ ಹಾಕಿದರು.

ಇತ್ತೀಚಿನ ಸುದ್ದಿ

ಜಾಹೀರಾತು