5:24 PM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಸಂತಾನಹರಣ ಶಸ್ತ್ರ ಚಿಕಿತ್ಸೆ ಮಾಡಲು ಬಂದ ಸರಕಾರಿ ವೈದ್ಯರು ಫುಲ್ ಟೈಟ್!: ಆಪರೇಶನ್ ಥಿಯೇಟರ್ ಬೆಡ್ ನಲ್ಲೇ ರೆಸ್ಟ್!!

01/06/2023, 16:41

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporter Karnataka@gmail.com

ಆಪರೇಶನ್ ಮಾಡಲು ಬಂದ ವೈದ್ಯರು ಕುಡಿದು ಟೈಟಾದ ಪರಿಣಾಮ ಆಪರೇಶನ್ ಥಿಯೇಟರ್ ನ ಬೆಡ್ ನಲ್ಲಿ ಮಲಗಿದ ಬೆಚ್ಚಿಬೀಳಿಸುವ ಘಟನೆ
ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ನಡೆದಿದೆ.
ಕಳಸ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳೆಯರಿಗೆ
ಸಂತಾನ ಹರಣ ಆಪರೇಷನ್ ಕ್ಯಾಂಪ್ ಏರ್ಪಾಡು ಮಾಡಲಾಗಿತ್ತು. 10ಕ್ಕೂ ಹೆಚ್ಚು ಮಹಿಳೆಯರು ಮಕ್ಕಳನ್ನ ಬಿಟ್ಟು ಬೆಳಗ್ಗೆ 8 ಗಂಟೆಗೆ ಬಂದಿದ್ದರು‌‌. ಆದರೆ ಆಪರೇಶನ್ ಮಾಡುವ ವೈದ್ಯರಾದ
ಕೊಪ್ಪ ಸರ್ಕಾರಿ ಆಸ್ಪತ್ರೆ ಡಾ. ಬಾಲಕೃಷ್ಣ ಅವರು ಮಧ್ಯಾಹ್ನ 3 ಗಂಟೆಗೆ ಬಂದರು.
ವೈದ್ಯ ಬಾಲಕೃಷ್ಣ ಅವರು ಬರುವಾಗಲೇ ಫುಲ್ ಟೈಟ್ ಆಗಿದ್ದರು. ಟೈಟಾಗಿ ಬಂದ ವೈದ್ಯ ಸಂತಾನಹರಣ ಚಿಕಿತ್ಸೆ ಮಾಡುವ ಬದಲು ಆಪರೇಷನ್ ಥಿಯೇಟರ್ ಬೆಡ್ ಮೇಲೆ ಮಲಗಿಯೇ ಬಿಟ್ಟರು. ಇನ್ನೊಂದು ಕಡೆ ಸಂತಾನಹರಣ ಆಪರೇಶನ್ ಗೆ ಬಂದಿದ್ದ ಮಹಿಳೆಯರಿಗೆ ಅನಸ್ತೇಷಿಯಾ ನೀಡಿ ಮಲಗಿಸಲಾಗಿತ್ತು. ಈ ನಡುವೆ ಕುಡುಕ ವೈದ್ಯರನ್ನು ಬಚಾವ್ ಮಾಡಲು ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಂದ ನಾಟಕ ಶುರುವಾಯಿತು.


ವೈದ್ಯರಿಗೆ ಏನೋ ಆಗಿದೆ, ಶುಗರ್ ಕಮ್ಮಿ ಆಗಿದೆ, ಬಿಪಿ ಜಾಸ್ತಿ ಆಗಿದೆ ಅಂತ ಹೈ ಡ್ರಾಮಾ ಮಾಡಲಾರಂಭಿಸಿದರು. ವೈದ್ಯರಿಗೆ ಗ್ಲೂಕೋಸ್ ಹಾಕಿಸಿ ಆಸ್ಪತ್ರೆಯಿಂದ ಕೊಪ್ಪಕ್ಕೆ ವಾಪಸ್ ಕಳುಹಿಸಲಾಯಿತು. ಆಪರೇಶನ್ ಗೆ ಬಂದ ಮಹಿಳೆಯರು, ಅವರ ಸಂಬಂಧಿಕರು ಹಾಗೂ ಸಾರ್ವಜನಿಕರು ಹಿಡಿಶಾಪ ಹಾಕಿದರು.

ಇತ್ತೀಚಿನ ಸುದ್ದಿ

ಜಾಹೀರಾತು