2:14 AM Monday15 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಸಂತಾನಹರಣ ಶಸ್ತ್ರ ಚಿಕಿತ್ಸೆ ಮಾಡಲು ಬಂದ ಸರಕಾರಿ ವೈದ್ಯರು ಫುಲ್ ಟೈಟ್!: ಆಪರೇಶನ್ ಥಿಯೇಟರ್ ಬೆಡ್ ನಲ್ಲೇ ರೆಸ್ಟ್!!

01/06/2023, 16:41

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporter Karnataka@gmail.com

ಆಪರೇಶನ್ ಮಾಡಲು ಬಂದ ವೈದ್ಯರು ಕುಡಿದು ಟೈಟಾದ ಪರಿಣಾಮ ಆಪರೇಶನ್ ಥಿಯೇಟರ್ ನ ಬೆಡ್ ನಲ್ಲಿ ಮಲಗಿದ ಬೆಚ್ಚಿಬೀಳಿಸುವ ಘಟನೆ
ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ನಡೆದಿದೆ.
ಕಳಸ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳೆಯರಿಗೆ
ಸಂತಾನ ಹರಣ ಆಪರೇಷನ್ ಕ್ಯಾಂಪ್ ಏರ್ಪಾಡು ಮಾಡಲಾಗಿತ್ತು. 10ಕ್ಕೂ ಹೆಚ್ಚು ಮಹಿಳೆಯರು ಮಕ್ಕಳನ್ನ ಬಿಟ್ಟು ಬೆಳಗ್ಗೆ 8 ಗಂಟೆಗೆ ಬಂದಿದ್ದರು‌‌. ಆದರೆ ಆಪರೇಶನ್ ಮಾಡುವ ವೈದ್ಯರಾದ
ಕೊಪ್ಪ ಸರ್ಕಾರಿ ಆಸ್ಪತ್ರೆ ಡಾ. ಬಾಲಕೃಷ್ಣ ಅವರು ಮಧ್ಯಾಹ್ನ 3 ಗಂಟೆಗೆ ಬಂದರು.
ವೈದ್ಯ ಬಾಲಕೃಷ್ಣ ಅವರು ಬರುವಾಗಲೇ ಫುಲ್ ಟೈಟ್ ಆಗಿದ್ದರು. ಟೈಟಾಗಿ ಬಂದ ವೈದ್ಯ ಸಂತಾನಹರಣ ಚಿಕಿತ್ಸೆ ಮಾಡುವ ಬದಲು ಆಪರೇಷನ್ ಥಿಯೇಟರ್ ಬೆಡ್ ಮೇಲೆ ಮಲಗಿಯೇ ಬಿಟ್ಟರು. ಇನ್ನೊಂದು ಕಡೆ ಸಂತಾನಹರಣ ಆಪರೇಶನ್ ಗೆ ಬಂದಿದ್ದ ಮಹಿಳೆಯರಿಗೆ ಅನಸ್ತೇಷಿಯಾ ನೀಡಿ ಮಲಗಿಸಲಾಗಿತ್ತು. ಈ ನಡುವೆ ಕುಡುಕ ವೈದ್ಯರನ್ನು ಬಚಾವ್ ಮಾಡಲು ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಂದ ನಾಟಕ ಶುರುವಾಯಿತು.


ವೈದ್ಯರಿಗೆ ಏನೋ ಆಗಿದೆ, ಶುಗರ್ ಕಮ್ಮಿ ಆಗಿದೆ, ಬಿಪಿ ಜಾಸ್ತಿ ಆಗಿದೆ ಅಂತ ಹೈ ಡ್ರಾಮಾ ಮಾಡಲಾರಂಭಿಸಿದರು. ವೈದ್ಯರಿಗೆ ಗ್ಲೂಕೋಸ್ ಹಾಕಿಸಿ ಆಸ್ಪತ್ರೆಯಿಂದ ಕೊಪ್ಪಕ್ಕೆ ವಾಪಸ್ ಕಳುಹಿಸಲಾಯಿತು. ಆಪರೇಶನ್ ಗೆ ಬಂದ ಮಹಿಳೆಯರು, ಅವರ ಸಂಬಂಧಿಕರು ಹಾಗೂ ಸಾರ್ವಜನಿಕರು ಹಿಡಿಶಾಪ ಹಾಕಿದರು.

ಇತ್ತೀಚಿನ ಸುದ್ದಿ

ಜಾಹೀರಾತು