10:31 PM Wednesday22 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಸಂತಾನಹರಣ ಶಸ್ತ್ರ ಚಿಕಿತ್ಸೆ ಮಾಡಲು ಬಂದ ಸರಕಾರಿ ವೈದ್ಯರು ಫುಲ್ ಟೈಟ್!: ಆಪರೇಶನ್ ಥಿಯೇಟರ್ ಬೆಡ್ ನಲ್ಲೇ ರೆಸ್ಟ್!!

01/06/2023, 16:41

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporter Karnataka@gmail.com

ಆಪರೇಶನ್ ಮಾಡಲು ಬಂದ ವೈದ್ಯರು ಕುಡಿದು ಟೈಟಾದ ಪರಿಣಾಮ ಆಪರೇಶನ್ ಥಿಯೇಟರ್ ನ ಬೆಡ್ ನಲ್ಲಿ ಮಲಗಿದ ಬೆಚ್ಚಿಬೀಳಿಸುವ ಘಟನೆ
ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ನಡೆದಿದೆ.
ಕಳಸ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳೆಯರಿಗೆ
ಸಂತಾನ ಹರಣ ಆಪರೇಷನ್ ಕ್ಯಾಂಪ್ ಏರ್ಪಾಡು ಮಾಡಲಾಗಿತ್ತು. 10ಕ್ಕೂ ಹೆಚ್ಚು ಮಹಿಳೆಯರು ಮಕ್ಕಳನ್ನ ಬಿಟ್ಟು ಬೆಳಗ್ಗೆ 8 ಗಂಟೆಗೆ ಬಂದಿದ್ದರು‌‌. ಆದರೆ ಆಪರೇಶನ್ ಮಾಡುವ ವೈದ್ಯರಾದ
ಕೊಪ್ಪ ಸರ್ಕಾರಿ ಆಸ್ಪತ್ರೆ ಡಾ. ಬಾಲಕೃಷ್ಣ ಅವರು ಮಧ್ಯಾಹ್ನ 3 ಗಂಟೆಗೆ ಬಂದರು.
ವೈದ್ಯ ಬಾಲಕೃಷ್ಣ ಅವರು ಬರುವಾಗಲೇ ಫುಲ್ ಟೈಟ್ ಆಗಿದ್ದರು. ಟೈಟಾಗಿ ಬಂದ ವೈದ್ಯ ಸಂತಾನಹರಣ ಚಿಕಿತ್ಸೆ ಮಾಡುವ ಬದಲು ಆಪರೇಷನ್ ಥಿಯೇಟರ್ ಬೆಡ್ ಮೇಲೆ ಮಲಗಿಯೇ ಬಿಟ್ಟರು. ಇನ್ನೊಂದು ಕಡೆ ಸಂತಾನಹರಣ ಆಪರೇಶನ್ ಗೆ ಬಂದಿದ್ದ ಮಹಿಳೆಯರಿಗೆ ಅನಸ್ತೇಷಿಯಾ ನೀಡಿ ಮಲಗಿಸಲಾಗಿತ್ತು. ಈ ನಡುವೆ ಕುಡುಕ ವೈದ್ಯರನ್ನು ಬಚಾವ್ ಮಾಡಲು ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಂದ ನಾಟಕ ಶುರುವಾಯಿತು.


ವೈದ್ಯರಿಗೆ ಏನೋ ಆಗಿದೆ, ಶುಗರ್ ಕಮ್ಮಿ ಆಗಿದೆ, ಬಿಪಿ ಜಾಸ್ತಿ ಆಗಿದೆ ಅಂತ ಹೈ ಡ್ರಾಮಾ ಮಾಡಲಾರಂಭಿಸಿದರು. ವೈದ್ಯರಿಗೆ ಗ್ಲೂಕೋಸ್ ಹಾಕಿಸಿ ಆಸ್ಪತ್ರೆಯಿಂದ ಕೊಪ್ಪಕ್ಕೆ ವಾಪಸ್ ಕಳುಹಿಸಲಾಯಿತು. ಆಪರೇಶನ್ ಗೆ ಬಂದ ಮಹಿಳೆಯರು, ಅವರ ಸಂಬಂಧಿಕರು ಹಾಗೂ ಸಾರ್ವಜನಿಕರು ಹಿಡಿಶಾಪ ಹಾಕಿದರು.

ಇತ್ತೀಚಿನ ಸುದ್ದಿ

ಜಾಹೀರಾತು