3:14 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಸಂತರ ಅವಹೇಳನ; ಮಾಜಿ ಸಿಎಂ ಸಿದ್ದರಾಮಯ್ಯ ಕ್ಷಮೆ ಕೇಳಲಿ: ಶಾಸಕ ವೇದವ್ಯಾಸ ಕಾಮತ್ 

25/03/2022, 19:32

ಮಂಗಳೂರು(reporterkarnataka.com): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದೂ ಸಂತರ ಬಗ್ಗೆ ಕೇವಲವಾಗಿ ಮಾತನಾಡಿ ಅವಹೇಳನ ಮಾಡಿದ್ದು, ತಕ್ಷಣ ಅವರು ಕ್ಷಮೆಯಾಚಿಸಬೇಕು ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಆಗ್ರಹಿಸಿದ್ದಾರೆ.

ಸಿದ್ದರಾಮಯ್ಯ ಮುಸಲ್ಮಾನರ ಓಲೈಕೆಗಾಗಿ ಹಿಂದೂ ಸಂತರ ವಿರುದ್ಧ ಹೇಳಿಕೆ ನೀಡುವುದು ಅವರಿಗೆ ಶೋಭೆ ತರುವುದಿಲ್ಲ. ತನ್ನ ಸರಕಾರದ ಅವಧಿಯಲ್ಲಿ ಸಿದ್ಧರಾಮಯ್ಯ ಅವರು ಹಿಂದುಗಳಿಗೆ ಮಾಡಿದ ಅನ್ಯಾಯವನ್ನು ಹಿಂದೂ ಸಮಾಜ ಮರೆತಿಲ್ಲ ಎಂದು ಅವರು ತಿಳಿಸಿದ್ದಾರೆ.

ಮುಸಲ್ಮಾನ ವಿಧ್ಯಾರ್ಥಿನಿಯರು ಬುರ್ಖಾ ಹಾಕಿಕೊಂಡರೆ ತಪ್ಪೇನು, ಹಿಂದೂ ಸ್ವಾಮೀಜಿಗಳು ತಲೆಗೆ ಬಟ್ಟೆ ಹಾಕಿಕೊಳ್ಳುವುದಿಲ್ಲವೇ ಎನ್ನುವ ಪ್ರಶ್ನೆ ಎತ್ತಿದ ಸಿದ್ಧರಾಮಯನವರಿಗೆ ಮರೆವಿನ ಕಾಯಿಲೆಯಿದೆಯೇ ? ಮುಸಲ್ಮಾನ ಮಹಿಳೆಯರಿಗೆ ಬುರ್ಖಾ ಹಾಕುವುದಕ್ಕೆ ವಿರೋಧವಲ್ಲ, ತರಗತಿಯಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸದೆ ಸಮವಸ್ತ್ರ ಪಾಲಿಸಬೇಕು ಎನ್ನುವುದು ನ್ಯಾಯಾಲಯವೂ ಹೇಳಿದೆ. ಒಬ್ಬ ಜನಪ್ರತಿನಿಧಿಯಾಗಿ ಇಂತಹ ವಿಚಾರಗಳಲ್ಲಿ ರಾಜಕೀಯ ಮಾಡುವುದು ಸಿದ್ಧರಾಮಯ್ಯನವರಿಗೆ ಶೋಭೆ ತರುವುದಿಲ್ಲ ಎಂದು ಹೇಳಿದ್ದಾರೆ.

ಈ ಹಿಂದೆ ಸಿದ್ಧರಾಮಯನವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಹಿಂದೂ ಸಮುದಾಯದ ವಿರುದ್ಧ ಕಿಡಿ ಕಾರುತ್ತಲೇ ಇದ್ದರು. ಮಠ ಮಂದಿರಗಳಿಗೆ ಸಿದ್ಧರಾಮಯ್ಯ ಹಾಗೂ ಕಾಂಗ್ರೇಸ್ ಎಸಗಿದ ಅನಾಚಾರಗಳು ತಿಳಿದಿದೆ. ಸದ್ಯ ಮತ್ತದೇ ಕಾರ್ಯಕ್ಕೆ ಕೈ ಹಾಕಿ ಸಂತರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಸಿದ್ಧರಾಮಯ್ಯ ಕ್ಷಮೆ ಕೇಳಬೇಕು ಎಂದು ಶಾಸಕ ಕಾಮತ್ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು