11:54 PM Wednesday13 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಸಂವಿಧಾನ ದ್ವೇಷಿಸುವ ಆರೆಸ್ಸೆಸ್ ಸಿದ್ಧಾಂತವನ್ನು ಹಿಮ್ಮೆಟ್ಟಿಸೋಣ: ಮುಖ್ಯಮಂತ್ರಿ ಸಿದ್ದರಾಮಯ್ಯ

21/01/2025, 19:23

*BJP ಪರಿವಾರ ಭಾರತದಲ್ಲಿ ಬಹಳ ವ್ಯವಸ್ಥಿತವಾಗಿ ಒಡಕು ತರುತ್ತಿದೆ. ಭಾರತೀಯರ ನಡುವೆ ಬಿರುಕು ಮೂಡಿಸುತ್ತಿದೆ: ಸಿ.ಎಂ ಸಿದ್ದರಾಮಯ್ಯ ಆಕ್ರೋಶ*

*ಹಲವು ಭಾಷೆ, ಹಲವು ಜಾತಿ, ಹಲವು ಧರ್ಮ‌ ಭಾರತದ ಶಕ್ತಿ: ಸಿಎಂ*

*BJP ಪರಿವಾರ ಗಾಂಧಿ, ಅಂಬೇಡ್ಕರ್ ರನ್ನು ದ್ವೇಷಿಸುತ್ತದೆ: ನಾವು ಇಬ್ಬರ ಆಶಯಗಳನ್ನೂ ಪೀಳಿಗೆಯಿಂದ ಪೀಳಿಗೆಗೆ ದಾಟಿಸುತ್ತೇವೆ, ವಿಸ್ತರಿಸುತ್ತೇವೆ: ಸಿ.ಎಂ ಘೋಷಣೆ*

*ನಾವು ಸಂವಿಧಾನ ರಕ್ಷಿಸಿದರೆ ಇದೇ ಸಂವಿಧಾನ ನಮ್ಮೆಲ್ಲರನ್ನೂ ರಕ್ಷಿಸುತ್ತದೆ: ಸಿ.ಎಂ ವಿಶ್ಲೇಷಣೆ*

*ನಮಗೆ ಚುನಾವಣೆ ಗೆಲ್ಲುವುದಕ್ಕಿಂತ ನಮ್ಮ ಸಿದ್ಧಾಂತ ಗೆಲ್ಲಬೇಕು. ಅದು ಮಾತ್ರ ನಮ್ಮ ನಿಜವಾದ ಗೆಲುವು: ಸಿಎಂ*

ಬೆಳಗಾವಿ(reporterkarnataka.com): ಸಂವಿಧಾನ ದ್ವೇಷಿಯಾಗಿರುವ RSS ಸಿದ್ಧಾಂತವನ್ನು BJP ಭಾರತೀಯರ ಮೇಲೆ ಹೇರುತ್ತಿದ್ದು ಇದನ್ನು ಹಿಮ್ಮೆಟ್ಟಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ಐತಿಹಾಸಿಕ ಜೈ ಬಾಪು-ಜೈ ಭೀಮ್- ಜೈ ಸಂವಿಧಾನ ಅಭಿಯಾನ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


BJP ಪರಿವಾರ ಭಾರತದಲ್ಲಿ ಬಹಳ ವ್ಯವಸ್ಥಿತವಾಗಿ ಒಡಕು ತರುತ್ತಿದೆ. ಭಾರತೀಯರ ನಡುವೆ ಬಿರುಕು ಮೂಡಿಸುತ್ತಾ ಭಾರತವನ್ನು ದುರ್ಬಲಗೊಳಿಸುತ್ತಿದೆ. ಬಿಜೆಪಿಯ ಈ ಯತ್ನವನ್ನು ನಾವು ಸೋಲಿಸಬೇಕು. ಇದಕ್ಕೆ ಗಾಂಧಿ-ಅಂಬೇಡ್ಕರ್ ನಮಗೆ ಮಾರ್ಗದರ್ಶಕರು ಎಂದರು.
ಸಂವಿಧಾನ ಜಾರಿಯಾದಾಗ ಬಿಜೆಪಿ ಪರಿವಾರ ಅಂಬೇಡ್ಕರ್ ಭಾವಚಿತ್ರವನ್ನು, ಸಂವಿಧಾನವನ್ನು ಸುಟ್ಟಿತ್ತು. ಇದನ್ನು ಈ ದೇಶ, ಈ ದೇಶದ ಜನ ಸಮುದಾಯ ಯಾವತ್ತೂ ಕ್ಷಮಿಸುವುದಿಲ್ಲ, ಮರೆಯುವುದಿಲ್ಲ ಎಂದು ಅವರು ನುಡಿದರು.
ಹಲವು ಭಾಷೆ, ಹಲವು ಜಾತಿ, ಹಲವು ಧರ್ಮ‌ ಭಾರತದ ಶಕ್ತಿ.
BJP ಪರಿವಾರ ಗಾಂಧಿ, ಅಂಬೇಡ್ಕರ್ ರನ್ನು ದ್ವೇಷಿಸುತ್ತದೆ. ನಾವು ಇಬ್ಬರ ಆಶಯಗಳನ್ನೂ ಪೀಳಿಗೆಯಿಂದ ಪೀಳಿಗೆಗೆ ದಾಟಿಸುತ್ತೇವೆ, ವಿಸ್ತರಿಸುತ್ತೇವೆ ಎಂದು ಅವರು ಹೇಳಿದರು.
ನಾವು ಸಂವಿಧಾನ ರಕ್ಷಿಸಿದರೆ ಇದೇ ಸಂವಿಧಾನ ನಮ್ಮೆಲ್ಲರನ್ನೂ ರಕ್ಷಿಸುತ್ತದೆ.
ನಮಗೆ ಚುನಾವಣೆ ಗೆಲ್ಲುವುದಕ್ಕಿಂತ ನಮ್ಮ ಸಿದ್ಧಾಂತ ಗೆಲ್ಲಬೇಕು. ಅದು ಮಾತ್ರ ನಮ್ಮ ನಿಜವಾದ ಗೆಲುವು ಎಂದರು.
ಗಾಂಧಿ, ಅಂಬೇಡ್ಕರ್ ಅವರ ಆಶಯಗಳು, ಮೌಲ್ಯಗಳ ಈಡೇರಿಕೆಗೆ ನಾವು ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಿದ್ದೇವೆ. ಇದಕ್ಕಾಗಿ ಬಜೆಟ್ ನಲ್ಲಿ 52 ಸಾವಿರ ಕೋಟಿಗೂ ಅಧಿಕ ಮೊತ್ತದ ಹಣವನ್ನು ನೇರವಾಗಿ ಜನರ ಖಾತೆಗೆ ಹಾಕಿ ರಾಜ್ಯದ ಜನರನ್ನು ಆರ್ಥಿಕವಾಗಿ ಸಬಲರನ್ನಾಗಿಸಿದ್ದೇವೆ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು