2:50 PM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಸರಕಾರದ ಯೋಜನೆಗಳು ಹಾಗೂ ನೂತನ ತಂತ್ರಜ್ಞಾನದ ಬಗ್ಗೆ ರೈತರಿಗೆ ಅರಿವು ಮೂಡಿಸಿ: ಕೋಲಾರದಲ್ಲಿ ಸಚಿವೆ ಕರಂದ್ಲಾಜೆ 

23/10/2021, 10:23

ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ
info.reporterkarnataka@gmail.com

ಕೇಂದ್ರ ಮತ್ತು ರಾಜ್ಯ ಸರ್ಕಾರದ ಎಲ್ಲಾ ಯೋಜನೆಗಳು ಹಾಗೂ ನೂತನ ತಂತ್ರಜ್ಞಾದ ಬಗ್ಗೆ ರೈತರಿಗೆ ಅರಿವು ಮೂಡಿಸಿ , ಗ್ರಾಮ ಪಂಚಾಯತಿ , ಗ್ರಾಮ ಸಭೆ ಹಾಗೂ ರೈತ ಸಂಪರ್ಕ ಕೇಂದ್ರಗಳಲ್ಲಿ ರೈತರಿಗೆ ದೊರೆಯುವ ಸೌಲಭ್ಯಗಳ ಕುರಿತು ಮಾಹಿತಿ ನೀಡಬೇಕು ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು .

ಜಿಲ್ಲಾಧಿಕಾರಿಗಳ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕೃಷಿ ಇಲಾಖೆ ಹಾಗೂ ಕೃಷಿಗೆ ಸಂಬಂಧಿಸಿದ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ನಕಲಿ ಬಿತ್ತನೆ ಬೀಜ, ಕೀಟನಾಶಕಗಳು ಹಾಗೂ ರಸಗೊಬ್ಬರಗಳನ್ನು ಮಾರಾಟ ಮಾಡುವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು . ಜಿಲ್ಲೆಯಲ್ಲಿ ಎಣ್ಣೆ ಕಾಳುಗಳ ಉತ್ಪಾದನೆ ಹೆಚ್ಚು ಮಾಡಿ , ಪಾರಂಪರಿಕ ಸಾವಯವ ಪದ್ಧತಿಯಲ್ಲಿ ಬೆಳೆಗಳನ್ನು ಬೆಳೆಯಲು ಹೆಚ್ಚಿನ ಒತ್ತು ನೀಡಿ . ಸಾವಯವದ ಮೂಲಕ ಬೆಳೆದ ಬೆಳಗಳಿಗೆ ವಿಶ್ವ ಮಟ್ಟದಲ್ಲಿ ಹೆಚ್ಚಿನ ಬೇಡಿಕೆಯಿದೆ . ಬೇವಿನಸೊಪ್ಪಿನ ಬೆಳೆಯ ಬಗ್ಗೆ ರೈತರಿಗೆ ಅರಿವು ಮೂಡಿಸಿ ಎಂದು ಅವರು ತಿಳಿಸಿದರು. 

ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ರೂಪದೇವಿ ಅವರು ಜಿಲ್ಲೆಯಲ್ಲಿ ಬಿತ್ತನೆ ಪ್ರದೇಶ 2,09 566 ಹೆಕ್ಟರ್ ಪ್ರದೇಶ , ಕೃಷಿ ಬೆಳೆಗಳ ವಿಸ್ತೀರ್ಣ 97,900 ಹೆಕ್ಟೇರ್‌ , ತೋಟಗಾರಿಕೆ ಬೆಳೆಗಳ ವಿಸ್ತೀರ್ಣ 1 ಲಕ್ಷ ಹೆಕ್ಟರ್ ಹಾಗೂ ರೇಷ್ಮೆ ಬೆಳೆ ವಿಸ್ತಿರ್ಣ 19,329 ಹೆಕ್ಟೇರ್ ಪ್ರದೇಶವಿದೆ . ಜಿಲ್ಲೆಯಲ್ಲಿ ಒಟ್ಟು 8,19,509 ಜಾನುವಾರುಗಳಿವೆ . ಕಳೆದ 2 ವರ್ಷಗಳಿಂದ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ . FRUITS ಯೋಜನೆಯಲ್ಲಿ ಜಿಲ್ಲೆಯ 1,94,343 ರೈತರು ನೊಂದಾಯಿಸಿಕೊಂಡಿದ್ದಾರೆ ಎಂದು ತಿಳಿಸಿದರು ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು FRUITS ನಲ್ಲಿ ಶೇಕಡಾ 100 ರಷ್ಟು ರೈತರನ್ನು ನೋಂದಾಯಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು . ಕೋಲಾರ ಲೋಕ ಸಭಾ ಕ್ಷೇತ್ರದ ಸಂಸದರಾದ ಎಸ್.ಮುನಿಸ್ವಾಮಿ ಅವರು ಕೃಷಿ ಯಂತ್ರೋಪಕರಣಗಳ ಸಹಾಯಧನ ಯೋಜನೆಯಲ್ಲಿ ಹೆಚ್ಚಿನ ಫಲಾನುಭವಿಗಳಿಗೆ ನೀಡಿ , ಹೋಬಳಿಯ ಮಟ್ಟದಲ್ಲಿ ಕೋಲ್ಡ್‌ ಸ್ಟೋರೇಜ್ ಗಳನ್ನು ಸ್ಥಾಪಿಸಬೇಕು . ದೇಶದಲ್ಲಿ ಯಾವ ರಾಜ್ಯದಲ್ಲಿ ಯಾವ ರೀತಿಯ ಬೆಳೆಯನ್ನು ಬೆಳೆಯುತ್ತಿದ್ದಾರೆ ಯಾವ ಬೆಳೆಗೆ ಬೇಡಿಕೆ ಹೆಚ್ಚಿದೆ ಎಂಬುವುದರ ಮಾಹಿತಿಯನ್ನು ರೈತರಿಗೆ ನೀಡಬೇಕು ಎಂದು ತಿಳಿಸಿದರು . ಜಿಲ್ಲಾಧಿಕಾರಿಗಳಾದ ಡಾ || ಆರ್.ಸೆಲ್ವಮಣಿ ಅವರು ಜಿಲ್ಲೆಯಲ್ಲಿ ಕೆ.ಸಿ.ವ್ಯಾಲಿ ನೀರಿನಿಂದ ತುಂಬಾ ಕೆರೆಗಳು ತುಂಬಿವೆ . ಜಿಲ್ಲೆಯಲ್ಲಿ ಇದುವರೆಗೂ 200 ಎಕರೆ ಬೆಳೆ ಹೆಚ್ಚಿನ ಮಳೆಯಿಂದ ನಾಶವಾಗಿದೆ . ಎ.ಪಿ.ಎಂ.ಸಿ. ಮಾರುಕಟ್ಟೆಗೆ ಜಾಗವನ್ನು ಗುರುತಿಸಲಾಗಿದೆ ಎಂದು ತಿಳಿಸಿದರು . ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಉಕೇಶ್ ಕುಮಾರ್‌ , ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಓಂ ಶಕ್ತಿ ಚಲಪತಿ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು