2:54 PM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಸರಕಾರ ಘೋಷಿಸಿದ ಪ್ಯಾಕೇಜ್ ಅವೈಜ್ಞಾನಿಕ: ಅಥಣಿಯ ವಕೀಲ ಗೌತಮ್ ಬನಸೋಡೆ  ಟೀಕೆ

20/05/2021, 20:48

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com

ಸರಕಾರ ಘೋಷಿಸಿದ ಪ್ಯಾಕೇಜ್ ಅವೈಜ್ಞಾನಿಕವೆಂದು ಅಥಣಿಯ ವಕೀಲ ಡಾ. ಗೌತಮ್ ಬನಸೋಡೆ  ಟೀಕಿಸಿದ್ದಾರೆ.

ತಮ್ಮ ಸ್ವಗೃಹದಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಡಾ ಗೌತಮ್ ಬನಸೋಡೆ ಅವರು ಕೇವಲ ಧರ್ಮ , ವೃತ್ತಿ, ಆಧರಿಸಿ  ಪ್ಯಾಕೇಜ್ ಘೋಷಿಸಲಾಗಿದ್ದು, ಈ ರೀತಿಯ ಅವೈಜ್ಞಾನಿಕ ಪ್ಯಾಕೇಜ್ ನೀಡುವುದು ಸರಿಯಲ್ಲ. ಈಗಾಗಲೇ ರಾಜ್ಯದಲ್ಲಿ ಹಲವಾರು ಜನರು ಲಾಕ್ಡೌನ್ ಪರಿಸ್ಥಿತಿಯಲ್ಲಿ ಕೆಲಸಕ್ಕೆ ಹೋಗದೇ ಮನೆಯಲ್ಲೇ ಇರುವುದರಿಂದ ಎಲ್ಲ ಜನರಿಗೂ ಈ ಪ್ಯಾಕೇಜ್ ತಲುಪುವಂತಾಗಬೇಕು.

ಜಾತಿ ಮತ್ತು ವೃತ್ತಿಯನ್ನು ಗುರುತಿಸಲಾರದೆ ಕೇವಲ ಬಡತನ ರೇಖೆ ಎಂದು ಆಧರಿಸಿ ರೇಷನ್ ಕಾರ್ಡ್ ಮುಖಾಂತರ ಪರಿಹಾರ ನೀಡುವುದರಿಂದ ಸಮಾಜದ ಕಟ್ಟಕಡೆ ವ್ಯಕ್ತಿಗೂ ಸಹ ಈ ಪ್ಯಾಕೇಜ್ ಮೂಡುವಂತಾಗಬೇಕು. ಕೇವಲ ಜಾತಿ ಹಾಗೂ ವೃತ್ತಿಗಳನ್ನು ಆಧರಿಸಿ ಇರುವುದರಿಂದ ಹಲವಾರು ವೃತ್ತಿಯನ್ನು ಮಾಡುವ ಜನರಿಗೆ ದೊರೆಯುವುದಿಲ್ಲ . ಈ ಕೂಡಲೇ ಎಚ್ಚೆತ್ತುಕೊಂಡು  ಜನರಿಗೆ ಪ್ಯಾಕೇಜ್ ನೀಡಬೇಕು ಮತ್ತು ಸರಕಾರ ಪತ್ರಕರ್ತರನ್ನು ಫ್ರಂಟ್ಲೈನ್ ವಾರಿಯರ್ ಎಂದು ಎಂದು ಗುರುತಿಸಿದರು ಸಹ ಅವರಿಗೆ ಯಾವುದೇ ರೀತಿಯ ಪ್ಯಾಕೇಜ್ ಘೋಷಣೆ ಮಾಡಿಲ್ಲ. ಇದು ಸರಕಾರದ ಒಂದು ನಿರ್ಲಕ್ಷದ ಧೋರಣೆಯಾಗಿದೆ. ಈ ಕೂಡಲೇ ಪತ್ರಕರ್ತರಿಗೂ ಸಹ ಒಂದು ವಿಶೇಷವಾದ ಪ್ಯಾಕೇಜ್ ನೀಡಬೇಕೆಂದು ರಾಜ್ಯ ಸರಕಾರಕ್ಕೆ ಮನವಿ ಮಾಡಿದರು. 

ಇತ್ತೀಚಿನ ಸುದ್ದಿ

ಜಾಹೀರಾತು