1:03 AM Saturday14 - June 2025
ಬ್ರೇಕಿಂಗ್ ನ್ಯೂಸ್
Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ… ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ: ಆರೋಗ್ಯ ಸಚಿವ ದಿನೇಶ್… Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ… ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ… ಲಕ್ಕೀ ಲೇಡಿ: ಟ್ರಾಫಿಕ್ ನಲ್ಲಿ 10 ನಿಮಿಷ ಸಿಲುಕಿದ ಮಹಿಳೆಗೆ ಫ್ಲೈಟ್ ಮಿಸ್;… ಅಹಮದಾಬಾದ್: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ಬೋಯಿಂಗ್ ಪತನ; ಬೆಂಕಿಯುಂಡೆಯಾದ… New Delhi | ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ… Mangaluru | ಕೋಮು ನಿಗ್ರಹ ಪಡೆ ಮುಖ್ಯಸ್ಥರಾಗಿ ಅಮಿತ್ ಸಿಂಗ್ ನೇಮಕ: ತುಳುನಾಡು,… ಕುಂಭಮೇಳದಲ್ಲಿ ನಾಪತ್ತೆಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ವೃದ್ಧ 6 ತಿಂಗಳ ಬಳಿಕ ಪತ್ತೆ!: ಕಡೂರು… ಪೆಹಲ್ಗಾಮ್ ನಲ್ಲಿ 26 ಜನ ಸತ್ರು, ಕೇಂದ್ರದ ಫೆಯ್ಯ್ಲೂರು, ನಾವು ಪ್ರಧಾನಿ ರಾಜೀನಾಮೆ…

ಇತ್ತೀಚಿನ ಸುದ್ದಿ

ಸರಕಾರ ಘೋಷಿಸಿದ ಪ್ಯಾಕೇಜ್ ಅವೈಜ್ಞಾನಿಕ: ಅಥಣಿಯ ವಕೀಲ ಗೌತಮ್ ಬನಸೋಡೆ  ಟೀಕೆ

20/05/2021, 20:48

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com

ಸರಕಾರ ಘೋಷಿಸಿದ ಪ್ಯಾಕೇಜ್ ಅವೈಜ್ಞಾನಿಕವೆಂದು ಅಥಣಿಯ ವಕೀಲ ಡಾ. ಗೌತಮ್ ಬನಸೋಡೆ  ಟೀಕಿಸಿದ್ದಾರೆ.

ತಮ್ಮ ಸ್ವಗೃಹದಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಡಾ ಗೌತಮ್ ಬನಸೋಡೆ ಅವರು ಕೇವಲ ಧರ್ಮ , ವೃತ್ತಿ, ಆಧರಿಸಿ  ಪ್ಯಾಕೇಜ್ ಘೋಷಿಸಲಾಗಿದ್ದು, ಈ ರೀತಿಯ ಅವೈಜ್ಞಾನಿಕ ಪ್ಯಾಕೇಜ್ ನೀಡುವುದು ಸರಿಯಲ್ಲ. ಈಗಾಗಲೇ ರಾಜ್ಯದಲ್ಲಿ ಹಲವಾರು ಜನರು ಲಾಕ್ಡೌನ್ ಪರಿಸ್ಥಿತಿಯಲ್ಲಿ ಕೆಲಸಕ್ಕೆ ಹೋಗದೇ ಮನೆಯಲ್ಲೇ ಇರುವುದರಿಂದ ಎಲ್ಲ ಜನರಿಗೂ ಈ ಪ್ಯಾಕೇಜ್ ತಲುಪುವಂತಾಗಬೇಕು.

ಜಾತಿ ಮತ್ತು ವೃತ್ತಿಯನ್ನು ಗುರುತಿಸಲಾರದೆ ಕೇವಲ ಬಡತನ ರೇಖೆ ಎಂದು ಆಧರಿಸಿ ರೇಷನ್ ಕಾರ್ಡ್ ಮುಖಾಂತರ ಪರಿಹಾರ ನೀಡುವುದರಿಂದ ಸಮಾಜದ ಕಟ್ಟಕಡೆ ವ್ಯಕ್ತಿಗೂ ಸಹ ಈ ಪ್ಯಾಕೇಜ್ ಮೂಡುವಂತಾಗಬೇಕು. ಕೇವಲ ಜಾತಿ ಹಾಗೂ ವೃತ್ತಿಗಳನ್ನು ಆಧರಿಸಿ ಇರುವುದರಿಂದ ಹಲವಾರು ವೃತ್ತಿಯನ್ನು ಮಾಡುವ ಜನರಿಗೆ ದೊರೆಯುವುದಿಲ್ಲ . ಈ ಕೂಡಲೇ ಎಚ್ಚೆತ್ತುಕೊಂಡು  ಜನರಿಗೆ ಪ್ಯಾಕೇಜ್ ನೀಡಬೇಕು ಮತ್ತು ಸರಕಾರ ಪತ್ರಕರ್ತರನ್ನು ಫ್ರಂಟ್ಲೈನ್ ವಾರಿಯರ್ ಎಂದು ಎಂದು ಗುರುತಿಸಿದರು ಸಹ ಅವರಿಗೆ ಯಾವುದೇ ರೀತಿಯ ಪ್ಯಾಕೇಜ್ ಘೋಷಣೆ ಮಾಡಿಲ್ಲ. ಇದು ಸರಕಾರದ ಒಂದು ನಿರ್ಲಕ್ಷದ ಧೋರಣೆಯಾಗಿದೆ. ಈ ಕೂಡಲೇ ಪತ್ರಕರ್ತರಿಗೂ ಸಹ ಒಂದು ವಿಶೇಷವಾದ ಪ್ಯಾಕೇಜ್ ನೀಡಬೇಕೆಂದು ರಾಜ್ಯ ಸರಕಾರಕ್ಕೆ ಮನವಿ ಮಾಡಿದರು. 

ಇತ್ತೀಚಿನ ಸುದ್ದಿ

ಜಾಹೀರಾತು