3:39 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಸರಕಾರ ಘೋಷಿಸಿದ ಪ್ಯಾಕೇಜ್ ಅವೈಜ್ಞಾನಿಕ: ಅಥಣಿಯ ವಕೀಲ ಗೌತಮ್ ಬನಸೋಡೆ  ಟೀಕೆ

20/05/2021, 20:48

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com

ಸರಕಾರ ಘೋಷಿಸಿದ ಪ್ಯಾಕೇಜ್ ಅವೈಜ್ಞಾನಿಕವೆಂದು ಅಥಣಿಯ ವಕೀಲ ಡಾ. ಗೌತಮ್ ಬನಸೋಡೆ  ಟೀಕಿಸಿದ್ದಾರೆ.

ತಮ್ಮ ಸ್ವಗೃಹದಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಡಾ ಗೌತಮ್ ಬನಸೋಡೆ ಅವರು ಕೇವಲ ಧರ್ಮ , ವೃತ್ತಿ, ಆಧರಿಸಿ  ಪ್ಯಾಕೇಜ್ ಘೋಷಿಸಲಾಗಿದ್ದು, ಈ ರೀತಿಯ ಅವೈಜ್ಞಾನಿಕ ಪ್ಯಾಕೇಜ್ ನೀಡುವುದು ಸರಿಯಲ್ಲ. ಈಗಾಗಲೇ ರಾಜ್ಯದಲ್ಲಿ ಹಲವಾರು ಜನರು ಲಾಕ್ಡೌನ್ ಪರಿಸ್ಥಿತಿಯಲ್ಲಿ ಕೆಲಸಕ್ಕೆ ಹೋಗದೇ ಮನೆಯಲ್ಲೇ ಇರುವುದರಿಂದ ಎಲ್ಲ ಜನರಿಗೂ ಈ ಪ್ಯಾಕೇಜ್ ತಲುಪುವಂತಾಗಬೇಕು.

ಜಾತಿ ಮತ್ತು ವೃತ್ತಿಯನ್ನು ಗುರುತಿಸಲಾರದೆ ಕೇವಲ ಬಡತನ ರೇಖೆ ಎಂದು ಆಧರಿಸಿ ರೇಷನ್ ಕಾರ್ಡ್ ಮುಖಾಂತರ ಪರಿಹಾರ ನೀಡುವುದರಿಂದ ಸಮಾಜದ ಕಟ್ಟಕಡೆ ವ್ಯಕ್ತಿಗೂ ಸಹ ಈ ಪ್ಯಾಕೇಜ್ ಮೂಡುವಂತಾಗಬೇಕು. ಕೇವಲ ಜಾತಿ ಹಾಗೂ ವೃತ್ತಿಗಳನ್ನು ಆಧರಿಸಿ ಇರುವುದರಿಂದ ಹಲವಾರು ವೃತ್ತಿಯನ್ನು ಮಾಡುವ ಜನರಿಗೆ ದೊರೆಯುವುದಿಲ್ಲ . ಈ ಕೂಡಲೇ ಎಚ್ಚೆತ್ತುಕೊಂಡು  ಜನರಿಗೆ ಪ್ಯಾಕೇಜ್ ನೀಡಬೇಕು ಮತ್ತು ಸರಕಾರ ಪತ್ರಕರ್ತರನ್ನು ಫ್ರಂಟ್ಲೈನ್ ವಾರಿಯರ್ ಎಂದು ಎಂದು ಗುರುತಿಸಿದರು ಸಹ ಅವರಿಗೆ ಯಾವುದೇ ರೀತಿಯ ಪ್ಯಾಕೇಜ್ ಘೋಷಣೆ ಮಾಡಿಲ್ಲ. ಇದು ಸರಕಾರದ ಒಂದು ನಿರ್ಲಕ್ಷದ ಧೋರಣೆಯಾಗಿದೆ. ಈ ಕೂಡಲೇ ಪತ್ರಕರ್ತರಿಗೂ ಸಹ ಒಂದು ವಿಶೇಷವಾದ ಪ್ಯಾಕೇಜ್ ನೀಡಬೇಕೆಂದು ರಾಜ್ಯ ಸರಕಾರಕ್ಕೆ ಮನವಿ ಮಾಡಿದರು. 

ಇತ್ತೀಚಿನ ಸುದ್ದಿ

ಜಾಹೀರಾತು